ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
Team Udayavani, Jan 17, 2021, 10:59 AM IST
ಕೊಳ್ಳೇಗಾಲ: ಪಡೆದ ಸಾಲವನ್ನು ವಾಪಸ್ ನೀಡುವಂತೆ ಕೇಳಿದ ವೃದ್ಧೆಯನ್ನೇ ಕೊಲೆಗೈದು ಆಕೆಯ ಕೈ ಕಾಲು ಕಟ್ಟಿ ಬಾವಿಗೆ ಎಸೆದಿರುವ ಘಟನೆ ತಾಲೂಕಿನ ಮಧುವನಹಳ್ಳಿ ಆಂಜನೇಯಪುರದಲ್ಲಿ ಸಂಭವಿಸಿದೆ.
ಗ್ರಾಮದ ಶಿವಮ್ಮ (70) ಮೃತ ದುರ್ದೈವಿ. ಈಕೆ ಗ್ರಾಮದಲ್ಲಿ ಕೂಲಿ ಮಾಡಿ ಜೀವನ ಸಾಗಿಸುತ್ತಾ ಕೂಡಿಟ್ಟಿದ್ದ ಹಣವನ್ನು ಪಕ್ಕದ ಮನೆಯ ರಾಜು (25) ಎಂಬಾತನಿಗೆ ಮನೆ ನಿರ್ಮಿಸುವ ಸಲುವಾಗಿ ಸಾಲವಾಗಿ ನೀಡಿದ್ದರು. ತನ್ನ ದೈನಂದಿನ ಖರ್ಚಿಗಾಗಿ ಹಣದ ಅವಶ್ಯಕತೆ ಇದ್ದ ಕಾರಣ ಸಾಲವನ್ನು ಮರು ಪಾವತಿಸುವಂತೆ ಶಿವಮ್ಮ ಕೇಳುತ್ತಿದ್ದರು. ವೃದ್ಧೆ ಸಿಕ್ಕಿದಾಗಲೆಲ್ಲಾ ಹಣ ಕೇಳುತ್ತಾಳೆ ಎಂದು ಕುಪಿತಗೊಂಡ ರಾಜು ತನ್ನ ಸ್ನೇಹಿತ ಶಿವರಾಜು (20) ಎಂಬಾತನ ನೆರವಿನೊಂದಿಗೆ ಆಕೆಯನ್ನು ಕೊಲೆಗೈದು ಸಾಲಮುಕ್ತನಾಗಲು ಯೋಚಿಸಿದ್ದನು. ಅದರಂತೆ ಹಣ ನೀಡುವುದಾಗಿ ಪುಸಲಾಯಿಸಿ ಪಾಳು ಬಾವಿಯ ಬಳಿ ವೃದ್ಧೆಯನ್ನು
ಕರೆಸಿಕೊಂಡಿದ್ದಾರೆ. ಬಳಿಕ ಆಕೆಯ ಕೈಕಾಲುಗಳನ್ನು ಕಟ್ಟಿ ರಾಗಿ ಬೀಸುವ ಕಲ್ಲನ್ನು ಹಗ್ಗದೊಂದಿಗೆ ಬಿಗಿದು ಪಾಳು ಬಾವಿಗೆ ಎಸೆದಿದ್ದರು.
ಇದನ್ನೂ ಓದಿ:ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ತಂದೆಯನ್ನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಶಿವಮ್ಮ ಕಾಣೆಯಾಗಿರುವ ಕುರಿತು ಆಕೆ ಸಂಬಂಧಿಕರು ಜ13ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ವೃದ್ದೆಯನ್ನು ಕಲ್ಲು ಕಟ್ಟಿ ಬಾವಿಗೆ ಬಿಸಾಡಿದ ಆರೋಪಿಗಳು ಮೃತ ದೇಹ ಮೇಲೆ ಬರಬಹುದೆಂದು ಎರಡು ಮೂರು ದಿನ ಬಾವಿಯ ಬಳಿ ಬಂದು ನೋಡುತ್ತಿದ್ದರು. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಇವರ ವಿರುದ್ಧ ಪೊಲೀಸರಿಗೆ
ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡಿರುವ ಬೆನ್ನಲ್ಲೇ ಗ್ರಾಮದ ಬಾವಿಯೊಂದರಲ್ಲಿ ಕಂಡು ಬಂದ ಶವವನ್ನು ಹೊರ ತೆಗೆದಾಗ ಇದು ವೃದ್ಧೆ ಶಿವಮ್ಮ ಎಂಬುದು ದೃಢಪಟ್ಟಿದೆ. ಪ್ರಕರಣದ ಜಾಡು ಹಿಡಿದಾಗ ವೃದ್ಧೆಯ ಪಕ್ಕದ ಮನೆಯ ರಾಜು ಮತ್ತು ಆತನ ಸ್ನೇಹಿತ ಶಿವರಾಜು ಈ ಕೃತ್ಯ ಎಸಗಿರುವುದು ತಿಳಿದು ಬಂದಿದ್ದು, ಇಬ್ಬರನ್ನೂ ಬಂಧಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಡಿವೈಎಸ್ಪಿ ನಾಗರಾಜು, ಸರ್ಕಲ್ ಇನ್ಸ್ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ಅಶೋಕ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಶವವನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ