ಕ್ಯಾಶಾ ಸಂಸ್ಥೆ ಹೊರ ತರಲಿದೆ ಕ್ರಿಪ್ಟೋ ಕರೆನ್ಸಿ : ಮುಂದಿನ ತಿಂಗಳೇ ವಹಿವಾಟು ಶುರು ಸಂಭವ
Team Udayavani, Jul 19, 2021, 7:32 PM IST
ನವದೆಹಲಿ: ಭಾರತದಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರಗಳಿಗೆ ಕಾನೂನಾತ್ಮಕ ಅನುಮೋದನೆ ಕೊಡಲು ಭಾರತೀಯ ರಿಸರ್ವ್ ಬ್ಯಾಂಕ್ ಚಿಂತನೆ ನಡೆಸಿರುವಂತೆಯೇ, ಕ್ರಿಪ್ಟೋಕರೆನ್ಸಿ ವ್ಯವಹಾರಗಳನ್ನು ನಡೆಸುವ ಸಂಸ್ಥೆ “ಕ್ಯಾಶಾ’, ಭಾರತದಲ್ಲಿ ತನ್ನ ಚಟುವಟಿಕೆಗಳನ್ನು ಆರಂಭಿಸಲು ನಿರ್ಧರಿಸಿದೆ. ಸಹಕಾರಿ ಬ್ಯಾಂಕ್ಗಳ ಸಹಯೋಗದೊಂದಿಗೆ ಭಾರತದಲ್ಲಿ ಮುಂದಿನ ತಿಂಗಳಿನಿಂದ ಕಾನೂನುಬದ್ಧ ಕ್ರಿಪ್ಟೋಕರೆನ್ಸಿ ವ್ಯವಹಾರಗಳನ್ನು ನಡೆಸಲು ಸಂಸ್ಥೆ ಉದ್ದೇಶಿಸಿದೆ.
ಕ್ಯಾಶಾ ಸಂಸ್ಥೆ, ತನ್ಮೂಲಕ “ಯೂನಿಕಾಸ್’ ಎಂಬ ವಿಶ್ವದ ಮೊಟ್ಟಮೊದಲ ಕ್ರಿಪ್ಟೋ ಕರೆನ್ಸಿ ಬ್ಯಾಂಕೊಂದನ್ನು ಆರಂಭಿಸಿದೆ. ಈ ಬ್ಯಾಂಕ್ನ ಶಾಖೆಗಳನ್ನು ಭಾರತದಲ್ಲೂ ತೆರೆಯಲು ನಿರ್ಧರಿಸಿರುವುದಾಗಿ ಕ್ಯಾಶಾದ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಕ ಕುಮಾರ್ ಗೌರವ್ ತಿಳಿಸಿದ್ದಾರೆ. ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಯುನೈಟೆಡ್ ಮಲ್ಟಿಸ್ಟೇಟ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಮೂಲಕವೇ ಭಾರತದಲ್ಲಿ ವ್ಯವಹಾರ ನಡೆಸುವ ಯೋಜನೆ ಹೊಂದಿದ್ದೇವೆ. ಸದ್ಯದಲ್ಲಿಯೇ ಕ್ರಿಪ್ಟೋ ಕರೆನ್ಸಿ ಕುರಿತ ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುವ ಸಾಧ್ಯತೆಯಿದೆ. ಅದನ್ನು ನೋಡಿಕೊಂಡು ಮುಂದುವರಿಯುತ್ತೇವೆ” ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ಪ್ರತಿ ವರ್ಷ ತಲಕಾಡು ಗಂಗರ ಉತ್ಸವ ಆಯೋಜಿಸುತ್ತೇವೆ : ಸಚಿವ ಸಿ.ಪಿ.ಯೋಗೇಶ್ವರ್
ಭಾರತದಲ್ಲಿ ಯೂನಿಕಾಸ್ ಸಂಸ್ಥೆಯ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ನ ಅನುಮತಿ ಪಡೆಯಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ರಿಜಿಸ್ಟ್ರಾರ್ ಆಫ್ ಸೊಸೈಟಿಸ್ ಅಡಿಯಲ್ಲಿ “ಯುನೈಟೆಡ್ ಮಲ್ಟಿಸ್ಟೇಟ್ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ’ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ, ಕ್ರೆಡಿಟ್ ಕೊ-ಆಪರೇಟಿವ್ ಸಂಸ್ಥೆಗಳ ಕಾರ್ಯವೈಖರಿ, ಬ್ಯಾಂಕುಗಳ ಕಾರ್ಯವೈಖರಿಗಿಂತ ಭಿನ್ನ. ಹಾಗಾಗಿ, ಆರ್ಬಿಐನ ಪ್ರತ್ಯೇಕ ಅನುಮತಿ ಬೇಕಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು