ಕ್ರಿಪ್ಟೋ-ಬಿಟ್ ಕಾಯಿನ್ ಸೋಗಿನ ವಂಚನೆ: ರಾಯಬಾಗದ ಇಬ್ಬ ರ ಸೆರೆ
Team Udayavani, Mar 29, 2022, 9:48 AM IST
ಬೆಂಗಳೂರು: ಇನ್ಸ್ಟ್ರಾಗ್ರಾಂ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಪ್ಟೋ ಕರೆನ್ಸಿ ಅಥವಾ ಬಿಟ್ ಕಾಯಿನ್ ಟ್ರೇಡಿಂಗ್ನಲ್ಲಿ ಹೂಡಿದರೆ ಅಧಿಕ ಲಾಭ ಬರುತ್ತದೆ ಎಂಬ ಸಂದೇಶಗಳು, ಜಾಹೀರಾತುಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.
ಇತ್ತೀಚೆಗೆ ಇನ್ಸ್ಟ್ರಾಗ್ರಾಂನಲ್ಲಿ ನಕಲಿ ಖಾತೆಗಳನ್ನು ತೆರೆದು ಕ್ರಿಪ್ಟೋ ಕರೆನ್ಸಿ, ಬಿಟ್ ಕಾಯಿನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 20 ನಿಮಿಷದಲ್ಲಿ ಶೇ.60 ಲಾಭ ಪಡೆಯಬಹುದು ಎಂದು ಜಾಹೀರಾತು ನೀಡಿ ವಂಚಿಸುತ್ತಿದ್ದ ಬೆಳಗಾವಿ ಮೂಲದ ಇಬ್ಬರು ವಿದ್ಯಾರ್ಥಿಗಳು ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿವಾಸಿಗಳಾದ ಕಿರಣ್ ಭರತೇಶ್ (20), ಆರ್ಶದ್ ಮೊಹಿದ್ದೀನ್ (21) ಬಂಧಿತರು. ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ 40 ಸಾವಿರ ರೂ. ಜಪ್ತಿ ಮಾಡಿದ್ದು, 2 ಮೊಬೈಲ್, 3 ಸಿಮ್ ಕಾರ್ಡ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ಯಲಹಂಕದ ಅಭಿನ್ ಶಹದ್ ಎಂಬಾತನಿಗೆ 26 ಸಾವಿರ ರೂ. ವಂಚಿಸಿದ್ದರು. ಅಲ್ಲದೆ, ಈ ಹಿಂದೆಯೂ ಇದೇ ಮಾದರಿಯಲ್ಲಿ ಬನಶಂಕರಿ ನಿವಾಸಿಯೊಬ್ಬರಿಗೂ ವಂಚಿಸಿದ್ದು, ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ| ಅನೂಪ್ ಎ.ಶೆಟ್ಟಿ ಹೇಳಿದರು.
ಆರೋಪಿಗಳು ಇನ್ಸ್ಟಾಗ್ರಾಂನಲ್ಲಿ ಹತ್ತಾರು ನಕಲಿ ಖಾತೆ ತೆರೆದಿದ್ದಾರೆ. ಬಳಿಕ ಕ್ರಿಪ್ಟೋ ಕರೆನ್ಸಿ ಮತ್ತು ಬಿಟ್ ಕಾಯಿನ್ನಲ್ಲಿ ಹಣ ಹೂಡಿಕೆ ಮಾಡಿದರೆ ಕೆಲವೇ ನಿಮಿಷಗಳಲ್ಲಿ ಶೇ.60 ಲಾಭಾಂಶ ಪಡೆ ಯಬಹುದು ಎಂದು ಜಾಹೀರಾತು ನೀಡುತ್ತಿದ್ದರು. ಅದನ್ನು ಗಮನಿಸಿ ಸಾರ್ವಜನಿಕರು ಹಣ ಹೂಡಿಕೆ ಮಾಡಲು ಮುಂದಾದರೆ, ತಮ್ಮ ಬ್ಯಾಂಕ್ ಖಾತೆ ನಂಬರ್ ಅಥವಾ ಗೂಗಲ್ ಪೇ, ಫೋನ್ ಪೇ ಮೂಲಕ ಆನ್ಲೈನ್ನಲ್ಲೇ ಹಣ ಪಾವತಿಸುವಂತೆ ಸೂಚಿಸುತ್ತಿದ್ದರು. ಹಲವು ಮಂದಿಗೆ 3 ಸಾವಿರದಿಂದ 40 ಸಾವಿರವರೆಗೆ ವಂಚಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಜಾಹೀರಾತು ನೋಡಿ ವಂಚನೆ
ಇನ್ಸ್ಟ್ರಾಗ್ರಾಂ, ಫೇಸ್ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಆಮಿಷಗಳಾಗಲಿ, ಹಣ ಹೂಡಿಕೆ ಯೋಜನೆಗಳ ಜಾಹೀರಾತು ಬಂದರೆ ಅವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಮಾ.17ರಂದು ಯಲಹಂಕ ಅಭಿನ್ ಶಹದ್ ಎಂಬವರು ಇನ್ಸ್ಟಾಗ್ರಾಂ ಖಾತೆ ಹೊಂದಿದ್ದು, ಆರೋಪಿಗಳ ಖಾತೆಯಲ್ಲಿದ್ದ ಜಾಹೀರಾತು ಗಮನಿಸಿದ್ದರು. ಜಾಹಿರಾತಿನಲ್ಲಿದ್ದ ನಂಬರ್ಗೆ ಕರೆ ಮಾಡಿ ಆರೋಪಿಗಳನ್ನು ಸಂಪರ್ಕಿಸಿದಾಗ ಹಣ ಹೂಡಿಕೆ ಮಾಡಿದ 20 ನಿಮಿಷದಲ್ಲಿ ಶೇ.60 ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಆರೋಪಿಗಳ ಇನ್ ಸ್ಟ್ರಾಗ್ರಾಂ ಖಾತೆಯಲ್ಲಿ 10 ಸಾವಿರಕ್ಕೂ ಅಧಿಕ ಫಾಲೋವರ್ಸ್ ಇರುವುದನ್ನು ಗಮನಿಸಿದ ದೂರುದಾರರು ಅವರ ಮಾತು ನಂಬಿ, ಆರೋಪಿಗಳ ಕಳುಹಿಸಿದ ಲಿಂಕ್ ಮೂಲಕ ಆನ್ಲೈನ್ನಲ್ಲೇ 26 ಸಾವಿರ ರೂ. ಆರೋಪಿಗಳ ಖಾತೆಗೆ ಹಾಕಿದ್ದರು. ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಟವರ್ ಲೊಕೇಶನ್ ಹಾಗೂ ಇತರೆ ತಾಂತ್ರಿಕ ಮಾರ್ಗದ ತನಿಖೆಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:2.4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಕಮೆಂಟ್ಸ್ ನಂಬಬೇಡಿ
ಇನ್ಸ್ಟ್ರಾಗ್ರಾಂ, ಫೇಸ್ಬುಕ್ ಹಾಗೂ ಇತರೆಡೆ ಆನ್ಲೈನ್ ಹೂಡಿಕೆ ಬಗ್ಗೆ ನೀಡುವ ಜಾಹೀರಾತು ಮತ್ತು ಆ ನಿರ್ದಿಷ್ಟ ಖಾತೆಗಳ ಫಾಲೋವರ್ಸ್, ಕಮೆಂಟ್ಸ್ಗಳನ್ನು ಸಾರ್ವಜನಿಕರು ನಂಬಬಾರದು ಎಂದು ಸೆನ್ ಠಾಣೆ ಪೊಲೀಸರು ಮನವಿ ಮಾಡಿ ದ್ದಾರೆ. ಹೆಚ್ಚು ಫಾಲೋವರ್ಸ್ ಹಾಗೂ ಉತ್ತಮ ಕಮೆಂಟ್ಸ್ ಹಾಕಿದ ಮಾತ್ರಕ್ಕೆ ಆ ಖಾತೆ ಅಸಲಿ ಆಗಿರುವುದಿಲ್ಲ ಎಂದು ಸೆನ್ ಠಾಣೆ ಪೊಲೀಸರು ತಿಳಿಸಿದರು.
ವಂಚನೆಗೊಳಗಾಗಿದ್ದರು!
ಆರೋಪಿಗಳ ಪೈಕಿ ಆರ್ಶದ್ ಮೊಹಿದ್ದೀನ್ ಬಿ.ಎ. ವ್ಯಾಸಂಗ ಮಾಡಿದ್ದು, ಕಿರಣ್ ಭರತೇಶ್ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಾನೆ. ಇಬ್ಬರು ಸ್ನೇಹಿತರಾಗಿದ್ದಾರೆ. ಇತ್ತೀಚೆಗೆ ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಡಿಜಿಟಲ್ ಕರೆನ್ಸಿ ಬಗ್ಗೆ ತಿಳಿದುಕೊಂಡಿದ್ದ ಆರೋಪಿಗಳು, ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ನಲ್ಲಿ ಹಣ ಹೂಡಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ಇನ್ಸ್ಟಾಗ್ರಾಂನಲ್ಲಿದ್ದ ಜಾಹೀರಾತುು ಗಮನಿಸಿ, 4 ಸಾವಿರ ರೂ. ಅಪರಿಚಿತರ ಬ್ಯಾಂಕ್ ಖಾತೆಗೆ ಹಾಕಿ ವಂಚನೆಗೊಳಗಾಗಿದ್ದರು. ಬಳಿಕ ತಾವೂ ಇದೇ ಮಾದರಿಯಲ್ಲಿ ವಂಚಿಸೋಣ ಎಂದು ಸಂಚು ರೂಪಿಸಿ, ಗೂಗಲ್, ಯುಟ್ಯೂಬ್ ಹಾಗೂ ಇತರೆ ಮಾಧ್ಯಮಗಳ ಮೂಲಕ ತಿಳಿದು ವಂಚನೆಗೆ ಸಂಚು ರೂಪಿಸಿ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?