ಕೊಹ್ಲಿ- ಧೋನಿ ತಂಡಗಳ ಹೈ ವೋಲ್ಟೇಜ್ ಮ್ಯಾಚ್‌


Team Udayavani, Apr 25, 2021, 7:00 AM IST

ಕೊಹ್ಲಿ- ಧೋನಿ ತಂಡಗಳ ಹೈ ವೋಲ್ಟೇಜ್ ಮ್ಯಾಚ್‌

ಮುಂಬಯಿ : ಹದಿನಾಲ್ಕನೇ ಐಪಿಎಲ್‌ನಲ್ಲಿ ಆರ್‌ಸಿಬಿ ಸಿಕ್ಕಾಪಟ್ಟೆ ಜೋಶ್‌ನಲ್ಲಿದೆ. ಎದುರಾಳಿಗಳನ್ನೆಲ್ಲ ಬಡಿದುರುಳಿಸುತ್ತ ತನ್ನ ಗೆಲುವಿನ ಓಟವನ್ನು ಸತತ 4 ಪಂದ್ಯಗಳಿಗೆ ವಿಸ್ತರಿಸಿದೆ. ರವಿವಾರ ಸಂಜೆ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಕೊಹ್ಲಿ ಪಡೆ ಕಣಕ್ಕಿಳಿಯಲಿದೆ. ಆರ್‌ಸಿಬಿ ಅಭಿಯಾನ ಐದನೇ ಪಂದ್ಯಕ್ಕೆ ವಿಸ್ತರಿಸುವುದೇ ಅಥವಾ ಚೆನ್ನೈ ಈ ಓಟಕ್ಕೆ ತಡೆಯೊಡ್ಡುವುದೇ ಎಂಬ ಕುತೂಹಲ ತೀವ್ರಗೊಂಡಿದೆ.

ಇದು ಬ್ಯಾಟಿಂಗ್‌ ಟ್ರ್ಯಾಕ್‌ ವಾಂಖೇಡೆಯಲ್ಲಿ ಆರ್‌ಸಿಬಿ ಆಡುತ್ತಿರುವ ಎರಡನೇ ಪಂದ್ಯ. ಗುರುವಾರ ರಾಜಸ್ಥಾನ್‌ ವಿರುದ್ಧ ಪಡಿಕ್ಕಲ್‌-ಕೊಹ್ಲಿ ಇಬ್ಬರೇ ಸೇರಿಕೊಂಡು ರಾಜಸ್ಥಾನ್‌ ನೀಡಿದ ದೊಡ್ಡ ಸವಾಲನ್ನು ಮೆಟ್ಟಿ ನಿಂತಿದ್ದರು. ಪಡಿಕ್ಕಲ್‌ ಅವರಿಂದ ಚೊಚ್ಚಲ ಐಪಿಎಲ್‌ ಶತಕ ಕೂಡ ದಾಖಲಾಗಿತ್ತು. ಈ ದೃಶ್ಯಾವಳಿ ಇನ್ನೂ ಕಣ್ಮುಂದಿದೆ. ಆರ್‌ಸಿಬಿಯ ಈ ಪರಾಕ್ರಮ ಸಹಜವಾಗಿಯೇ ಎದುರಾಳಿಗಳ ಪಾಲಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಇದು ಟೀಮ್‌ ಇಂಡಿಯಾದ ಹಾಲಿ ಹಾಗೂ ಮಾಜಿ ನಾಯಕರ ನಡುವಿನ ಈ ಪಂದ್ಯ ಎಂಬ ಕಾರಣಕ್ಕಾಗಿಯೂ ಹೆಚ್ಚಿನ ಕೌತುಕ ನಿರ್ಮಿಸಿದೆ. ಮೇಲ್ನೋಟಕ್ಕೆ ಆರ್‌ಸಿಬಿ ಇಲ್ಲಿನ ನೆಚ್ಚಿನ ತಂಡ. 8 ಅಂಕಗಳಿಂದ ಅಗ್ರಸ್ಥಾನ ಅಲಂಕರಿಸಿದೆ. ಚೆನ್ನೈ ಸೋಲಿನ ಆರಂಭದ ಬಳಿಕ ಹ್ಯಾಟ್ರಿಕ್‌ ಜಯ ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಆರ್‌ಸಿಬಿಯ ಹಿಂದೆಯೇ ನಿಂತಿದೆ.

ಕಳೆದ ವರ್ಷ ಫ್ಲೇ ಆಫ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಎಂಬ ಅವಮಾನಕ್ಕೆ ಸಿಲುಕಿದ “ಹಿರಿಯರ ಬಳಗ’ ಚೆನ್ನೈ ಪ್ರಸಕ್ತ ಋತುವಿನಲ್ಲಿ ಬಹಳಷ್ಟು ಸುಧಾರಣೆ ಕಂಡಿದೆ. ಹೀಗಾಗಿ ಚೆನ್ನೈ ಸವಾಲನ್ನು ಯಾವ ಕಾರಣಕ್ಕೂ ಲಘುವಾಗಿ ಪರಿಗಣಿಸುವಂತಿಲ್ಲ.

ಧೋನಿ ವರ್ಸಸ್‌ ಕೊಹ್ಲಿ
ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿರುವ ತಂಡ. ಪಡಿಕ್ಕಲ್‌, ಕೊಹ್ಲಿ, ಎಬಿಡಿ, ಮ್ಯಾಕ್ಸ್‌ವೆಲ್‌ ಪ್ರಚಂಡ ಫಾರ್ಮ್ನಲ್ಲಿರುವುದರಿಂದ ತಂಡದ ಬಿಗ್‌ ಸ್ಕೋರ್‌ಗೆ ಯಾವುದೇ ಅಡ್ಡಿಯಿಲ್ಲ. ಮೊದಲು ಬ್ಯಾಟಿಂಗ್‌ ಅಥವಾ ಚೇಸಿಂಗ್‌, ಎರಡಕ್ಕೂ ತಂಡ ಸೈ ಎನಿಸಿದೆ.

ಈ ಬಾರಿ ಆರ್‌ಸಿಬಿ ಬೌಲಿಂಗ್‌ ಕೂಡ ಬಲಿಷ್ಠಗೊಂಡಿದೆ. ಹೆಚ್ಚು ವೈವಿಧ್ಯ ಮಯವಾಗಿದೆ. ವೇಗಿಗಳಾದ ಮೊಹಮ್ಮದ್‌ ಸಿರಾಜ್‌, ಹರ್ಷಲ್‌ ಪಟೇಲ್‌, ಕೈಲ್‌ ಜಾಮೀಸನ್‌, ಸ್ಪಿನ್ನರ್‌ ವಾಷಿಂಗ್ಟನ್‌ ಸುಂದರ್‌ ಉತ್ತಮ ಲಯದಲ್ಲಿದ್ದಾರೆ. ಆದರೆ ಅನುಭವಿ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ದುಬಾರಿಯಾಗಿ ಪರಿಣಮಿಸುತ್ತಿದ್ದಾರೆ. ಚಹಲ್‌ ಬದಲಿಗೆ ಇರುವ ಸ್ಪಿನ್‌ ಆಯ್ಕೆಯೆಂದರೆ ಆ್ಯಡಂ ಝಂಪ. ಆಗ ವಿದೇಶಿ ಆಟಗಾರನ ಕೋಟಾದಿಂದ ಜಾಮೀಸನ್‌ ಅವರನ್ನು ಕೈಬಿಡಬೇಕಾಗುತ್ತದೆ. ಈ ಜಾಗಕ್ಕೆ ನವದೀಪ್‌ ಸೈನಿಗೆ ಅವಕಾಶ ಲಭಿಸಬಹುದು.

ಚೆನ್ನೈ ಸಮರ್ಥ ಬಳಗ
ಚೆನ್ನೈ ಕೂಡ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ. ಇಲ್ಲಿ 8ನೇ ಕ್ರಮಾಂಕದ ವರೆಗೂ ಬ್ಯಾಟ್‌ ಬೀಸುವವರ ಪಡೆಯೇ ಇದೆ. ಇವರಲ್ಲಿ ಅನೇಕರು ಆಲ್‌ರೌಂಡರ್‌ಗಳಾಗಿರುವುದೊಂದು ಪ್ಲಸ್‌ ಪಾಯಿಂಟ್‌. ಋತುರಾಜ್‌ ಗಾಯಕ್ವಾಡ್‌, ಫಾ ಡು ಪ್ಲೆಸಿಸ್‌, ಮೊಯಿನ್‌ ಅಲಿ, ಅಂಬಾಟಿ ರಾಯುಡು, ಸುರೇಶ್‌ ರೈನಾ, ಡ್ವೇನ್‌ ಬ್ರಾವೊ, ರವೀಂದ್ರ ಜಡೇಜ, ಸ್ಯಾಮ್‌ ಕರನ್‌… ಹೀಗೆ ಪಟ್ಟಿ ಬೆಳೆಯುತ್ತದೆ. ಆದರೆ ನಾಯಕ ಧೋನಿಯ ಬ್ಯಾಟಿಂಗ್‌ ಚಾರ್ಮ್ ಮಾತ್ರ ಹೊರಟು ಹೋಗಿದೆ.

ಬೌಲಿಂಗ್‌ ವಿಭಾಗದಲ್ಲಿ ದೀಪಕ್‌ ಚಹರ್‌ ಉತ್ತಮ ಫಾರ್ಮ್ ನಲ್ಲಿದ್ದಾರೆ. ಕಳೆದೆರಡೂ ಪಂದ್ಯಗಳಲ್ಲಿ ತಲಾ ನಾಲ್ಕು ವಿಕೆಟ್‌ ಕಬಳಿಸಿ ಅಪಾಯಕಾರಿಯಾಗಿ ಗೋಚರಿಸಿದ್ದಾರೆ. ಶಾದೂìಲ್‌ ಠಾಕೂರ್‌, ಲುಂಗಿ ಎನ್‌ಗಿಡಿ ಉಳಿದಿಬ್ಬರು ವೇಗಿಗಳು. ಚೆನ್ನೈ ಸ್ಪಿನ್‌ ವಿಭಾಗವೂ ಹೆಚ್ಚು ಅಪಾಯಕಾರಿ. ಜಡೇಜ ಮತ್ತು ಮೊಯಿನ್‌ ಅಲಿ ಉತ್ತಮ ಬ್ರೇಕ್‌ ಒದಗಿಸಬಲ್ಲರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

BCCI

Women’s T20; ಬಾಂಗ್ಲಾ ಸರಣಿಗೆ ಆಶಾ, ಸಜನಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.