Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

ಲೂಟಿಯಾಗಿದ್ದ 140 ಶಸ್ತ್ರಾಸ್ತ್ರಗಳು ವಾಪಸ್‌- ಗೃಹ ಸಚಿವರು ಮರಳಿದ ಬೆನ್ನಲ್ಲೇ ಕೆಲವೆಡೆ ಮತ್ತೆ ಹಿಂಸಾಚಾರ

Team Udayavani, Jun 3, 2023, 7:26 AM IST

manipur violance

ನವದೆಹಲಿ/ಇಂಫಾಲ: ಕಳೆದೊಂದು ತಿಂಗಳಿಂದ ಸರಣಿ ಹಿಂಸಾಚಾರವನ್ನು ಕಂಡಿರುವ ಮಣಿಪುರದ 5 ಜಿಲ್ಲೆಗಳಲ್ಲಿ ಶುಕ್ರವಾರ ಕರ್ಫ್ಯೂ ಸಡಿಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭೇಟಿ ನೀಡಿ ಶಾಂತಿ ಸ್ಥಾಪನೆಗೆ ಕ್ರಮ ಕೈಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಷ್ಟೇ ಅಲ್ಲ, ಪೊಲೀಸ್‌ ಶಿಬಿರಗಳಿಂದ ಲೂಟಿ ಮಾಡಲಾಗಿದ್ದ 2 ಸಾವಿರಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪೈಕಿ 140 ಅನ್ನು ಅಮಿತ್‌ ಶಾ ಅವರ ಎಚ್ಚರಿಕೆಯ ಬಳಿಕ ಮರಳಿಸಲಾಗಿದೆ.

4 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದ ಸಚಿವ ಶಾ ಅವರು ಗುರುವಾರವಷ್ಟೇ ಬಂಡುಕೋರರ ಗುಂಪಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಶಸ್ತ್ರಾಸ್ತ್ರಗಳನ್ನು ಮರಳಿಸದೇ ಇದ್ದರೆ ಅಂಥವರ ವಿರುದ್ಧ ಕಠಿಣಾತಿಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅದಾದ 24 ಗಂಟೆಗಳಲ್ಲಿ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಒಟ್ಟಾರೆ 140 ಶಸ್ತ್ರಾಸ್ತ್ರಗಳನ್ನು ವಾಪಸ್‌ ಮಾಡಲಾಗಿದೆ. ಈ ಶಸ್ತ್ರಾಸ್ತ್ರಗಳ ಪೈಕಿ ಎಕೆ-47ಗಳು, ಇನ್ಸಾಸ್‌ ರೈಫ‌ಲ್‌ಗಳು, ಅಶ್ರುವಾಯು, ಸ್ಟೆನ್‌ ಗನ್‌ಗಳು, ಗ್ರೆನೇಡ್‌ ಲಾಂಚರ್‌ಗಳು ಮತ್ತು ಹಲವು ಪಿಸ್ತೂಲುಗಳು ಸೇರಿವೆ. ಇದೇ ವೇಳೆ, ಅಮಿತ್‌ ಶಾ ಅವರ ರಾಜ್ಯ ಪ್ರವಾಸ ಪೂರ್ಣಗೊಂಡ ಬಳಿಕವೂ ಮಣಿಪುರದ ಅಲ್ಲಲ್ಲಿ ಶುಕ್ರವಾರ ಹಿಂಸಾಚಾರಗಳು ವರದಿಯಾಗಿವೆ.

ರಾಷ್ಟ್ರಪತಿಯನ್ನು ಭೇಟಿಯಾದ ಸಚಿವ ಶಾ

ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಣಿಪುರದಿಂದ ಮರಳಿದ ಮಾರನೇ ದಿನವೇ ಈ ಭೇಟಿ ನಡೆದಿದೆ. ಇದು ಕೇವಲ ಸೌಜನ್ಯದ ಭೇಟಿ ಎಂದು ಶಾ ಹೇಳಿದ್ದಾರೆ. ಆದರೆ, ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಶಾ ಅವರು ಮಣಿಪುರ ಗಲಭೆ ಕುರಿತು ಮಾಹಿತಿ ನೀಡಲು ಮುರ್ಮು ಅವರನ್ನು ಭೇಟಿಯಾಗಿರಬಹುದು ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಸೋರಿಕೆಗೆ ಸೇನೆ ಖಂಡನೆ

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಇರುವಂತೆಯೇ ವಿವಿಧ ಭಾಗಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮೈತೇಯಿ ಸಮುದಾಯದ ಅಧಿಕಾರಿಗಳ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿವೆ. ಇದರ ಬಗ್ಗೆ ಭಾರತೀಯ ಸೇನೆಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ರೀತಿ ಪಟ್ಟಿಯನ್ನು ಹಂಚಿಕೊಂಡಿರುವುದು ಖಂಡನೀಯ. ನಮ್ಮ ಅಧಿಕಾರಿಗಳು ಧರ್ಮ, ಜಾತಿ, ಜನಾಂಗ ಎಂಬ ಭೇದವಿಲ್ಲದೇ ಸಾವಿರಾರು ಮಂದಿಯನ್ನು ರಕ್ಷಿಸಿದ್ದಾರೆ, ನಿರ್ವಸಿತರಿಗೆ ಆಶ್ರಯ ನೀಡಲು ಆಹಾರ, ನಿದ್ರೆಯಿಲ್ಲದೇ ಹಲವು ದಿನಗಳನ್ನು ಕಳೆದಿದ್ದಾರೆ. ಈಗ ಅಧಿಕಾರಿಗಳ ಹೆಸರುಗಳನ್ನು ಸೋರಿಕೆ ಮಾಡುವ ಮೂಲಕ ಅವರ ನೈತಿಕತೆಯನ್ನು ಕುಗ್ಗಿಸುತ್ತಿರುವುದು ದುಷ್ಕೃತ್ಯ ಎಂದು ಸೇನೆ ಟ್ವೀಟ್‌ ಮಾಡಿದೆ.

ಟಾಪ್ ನ್ಯೂಸ್

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

rahul gandhi

Politics: ಗೆದ್ದರೆ ಜಾತಿಗಣತಿ: ರಾಹುಲ್‌ ಗಾಂಧಿ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

shaktikanth das

Finance: ಅತಿಯಾದ ಪ್ರಾಬಲ್ಯ ಬೇಡ: ಶಕ್ತಿಕಾಂತ ದಾಸ್‌

CONGRESS FLAG IMP

Reservation: ಮಹಿಳಾ ಮೀಸಲು: ಕಾಂಗ್ರೆಸ್‌ 21 ಸುದ್ದಿಗೋಷ್ಠಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.