ರಾಷ್ಟ್ರಧ್ವಜದ ಕೇಕ್ ಕತ್ತರಿಸುವುದು ರಾಷ್ಟ್ರದ್ರೋಹವಲ್ಲ : ಮದ್ರಾಸ್ ಹೈಕೋರ್ಟ್ ಆದೇಶ
Team Udayavani, Mar 22, 2021, 8:20 PM IST
ಚೆನ್ನೈ: ರಾಷ್ಟ್ರಧ್ವಜ ಹಾಗೂ ಅದರ ಮಧ್ಯೆ ಅಶೋಕ ಚಕ್ರವಿರುವ ಚಿತ್ರದ ಕೇಕ್ ಕತ್ತರಿಸುವುದು ರಾಷ್ಟ್ರಧ್ವಜಕ್ಕೆ ಅಪಮಾನವಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ರಾಷ್ಟ್ರಧ್ವಜದ ಚಿತ್ರವುಳ್ಳ ಕೇಕ್ ಕತ್ತರಿಸಿರುವುದು ರಾಷ್ಟ್ರೀಯ ಗೌರವಕ್ಕೆ ಧಕ್ಕೆ ತಡೆ ಕಾಯ್ದೆಯಡಿ ಅಪರಾಧ ಅಲ್ಲವೇ ಅಲ್ಲ ಎಂದು ನ್ಯಾಯಪೀಠ ಹೇಳಿರುವುದಾಗಿ “ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.
2013ರ ಕ್ರಿಸ್ಮಸ್ ದಿನದಂದು ನಡೆದಿದ್ದ ದೊಡ್ಡ ಸಮಾರಂಭವೊಂದರಲ್ಲಿ ರಾಷ್ಟ್ರಧ್ವಜವುಳ್ಳ 6×5 ಅಡಿಯ ಕೇಕ್ ಕತ್ತರಿಸಿ ಹಂಚಲಾಗಿತ್ತು. ಅದನ್ನು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸುಮಾರು 2,500 ಜನರು ತಿಂದಿದ್ದರು. ಇದನ್ನು ಪ್ರಶ್ನಿಸಿ ಡಿ. ಸೆಂಥಿಲ್ಕುಮಾರ್ ಎಂಬುವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾ. ಎನ್. ಆನಂದ್ ವೆಂಕಟೇಶ್, “ರಾಷ್ಟ್ರಧ್ವಜವನ್ನು ಧರಿಸಿದವನು ರಾಷ್ಟ್ರಭಕ್ತನಲ್ಲ, ರಾಷ್ಟ್ರಧ್ವಜದ ಕೇಕ್ ಕತ್ತರಿಸಿದವನು ರಾಷ್ಟ್ರ ದ್ರೋಹಿಯೂ ಅಲ್ಲ. ಉತ್ತಮ ಆಡಳಿತಕ್ಕಾಗಿ ಹೋರಾಡುವವನೇ ನಿಜವಾಗಿಯೂ ದೇಶಭಕ್ತ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ