ಸೈಕ್ಲೋನ್: ನ 26ರಿಂದ ಮತ್ತೆ ಮಳೆ ; ಸಚಿವ ಆರ್.ಅಶೋಕ್ ಎಚ್ಚರಿಕೆ
Team Udayavani, Nov 25, 2021, 3:18 PM IST
ಬೆಂಗಳೂರು : ಎರಡನೇ ಸೈಕ್ಲೋನ್ ಪ್ರಭಾವ ಹಳೇ ಮೈಸೂರು ಹಾಗೂ ಉಡುಪಿ ಭಾಗದವರೆಗೂ ಆಗಲಿದೆ, ಈ ನಿಟ್ಟಿನಲ್ಲಿ ನವೆಂಬರ್ 26,27 ಮತ್ತು 28 ರಂದು ಜಿಲ್ಲಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆರ್. ಅಶೋಕ್ ಗುರುವಾರ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿಸಚಿವ ಆರ್.ಅಶೋಕ್ ಹೇಳಿಕೆ ನೀಡಿ, ‘ಮೂರು ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕು, ಬೆಂಗಳೂರಿನಲ್ಲೂ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಮಳೆ ಹಾನಿ ನಿಭಾಯಿಸಲು ಅಧಿಕಾರಿಗಳ ತಂಡವನ್ನು ಸಿಎಂ ರಚನೆ ಮಾಡಿದ್ದಾರೆ. ನಾನೂ ನಿಗಾ ಇಟ್ಟಿದ್ದೇನೆ’ ಎಂದು ಸರ್ಕಾರದ ಕ್ರಮ ಸಮರ್ಥಿಸಿಕೊಂಡರು.
‘ಚುನಾವಣೆಗಿಂತ ಮಳೆ ಹಾನಿ ಸಮಸ್ಯೆ ಮುಖ್ಯವಾಗಿದೆ. ಇದಕ್ಕೆ ಆದ್ಯತೆ ನೀಡಬೇಕು. ಚುನಾವಣೆ ಕೆಲಸ ಬಹುತೇಕ ಮುಗಿದಿದೆ. ಈ ನಿಟ್ಟಿನಲ್ಲಿ ಮಳೆ ಹಾನಿ ಸಮಸ್ಯೆ ಬಗೆಹರಿಸಲು ಆದ್ಯತೆ ಕೊಡಬೇಕಾಗಿದೆ. ನವೆಂಬರ್ 30 ರೊಳಗೆ ಬೆಳೆ ಹಾನಿ ವರದಿ ನೀಡಬೇಕು. ಪರಿಹಾರ ನೀಡುವ ಸಂದರ್ಭದಲ್ಲಿ ಕಟಾವು ಮಾಡಿದ ಬೆಳೆಯನ್ನೂ ಪರಿಗಣಿಸುತ್ತೇವೆ ಕೇವಲ ರಾಗಿ ಮಾತ್ರವಲ್ಲ, ಎಲ್ಲಾ ಬೆಳೆಗಳಿಗೆ ಪರಿಹಾರ ಕೊಡುತ್ತೇವೆ. ಬೆಳೆ ಪರಿಹಾರ ಕುರಿತು ಕಾಂಗ್ರೆಸ್ ಅಪಾದನೆ ಸುಳ್ಳು. ಡಾ. ಮನಮೋಹನ್ ಸಿಂಗ್ ಸರ್ಕಾರ ಬಿಡುಗಡೆ ಮಾಡಿದ್ದ ಪರಿಹಾರ ಹಣಕ್ಕಿಂದ ಮೂರು ಪಟ್ಟು ಹೆಚ್ಚು ಹಣವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನೀಡಿದೆ. ಅಂಕಿ ಅಂಶಗಳನ್ನು ನೋಡಿ, ಕಾಮಾಲೆ ಕಣ್ಣು ಬಿಟ್ಟು ನೋಡಿ’ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ