ಸೈಕ್ಲೋನ್: ನ 26ರಿಂದ ಮತ್ತೆ ಮಳೆ ; ಸಚಿವ ಆರ್.ಅಶೋಕ್ ಎಚ್ಚರಿಕೆ
Team Udayavani, Nov 25, 2021, 3:18 PM IST
ಬೆಂಗಳೂರು : ಎರಡನೇ ಸೈಕ್ಲೋನ್ ಪ್ರಭಾವ ಹಳೇ ಮೈಸೂರು ಹಾಗೂ ಉಡುಪಿ ಭಾಗದವರೆಗೂ ಆಗಲಿದೆ, ಈ ನಿಟ್ಟಿನಲ್ಲಿ ನವೆಂಬರ್ 26,27 ಮತ್ತು 28 ರಂದು ಜಿಲ್ಲಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆರ್. ಅಶೋಕ್ ಗುರುವಾರ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿಸಚಿವ ಆರ್.ಅಶೋಕ್ ಹೇಳಿಕೆ ನೀಡಿ, ‘ಮೂರು ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕು, ಬೆಂಗಳೂರಿನಲ್ಲೂ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಮಳೆ ಹಾನಿ ನಿಭಾಯಿಸಲು ಅಧಿಕಾರಿಗಳ ತಂಡವನ್ನು ಸಿಎಂ ರಚನೆ ಮಾಡಿದ್ದಾರೆ. ನಾನೂ ನಿಗಾ ಇಟ್ಟಿದ್ದೇನೆ’ ಎಂದು ಸರ್ಕಾರದ ಕ್ರಮ ಸಮರ್ಥಿಸಿಕೊಂಡರು.
‘ಚುನಾವಣೆಗಿಂತ ಮಳೆ ಹಾನಿ ಸಮಸ್ಯೆ ಮುಖ್ಯವಾಗಿದೆ. ಇದಕ್ಕೆ ಆದ್ಯತೆ ನೀಡಬೇಕು. ಚುನಾವಣೆ ಕೆಲಸ ಬಹುತೇಕ ಮುಗಿದಿದೆ. ಈ ನಿಟ್ಟಿನಲ್ಲಿ ಮಳೆ ಹಾನಿ ಸಮಸ್ಯೆ ಬಗೆಹರಿಸಲು ಆದ್ಯತೆ ಕೊಡಬೇಕಾಗಿದೆ. ನವೆಂಬರ್ 30 ರೊಳಗೆ ಬೆಳೆ ಹಾನಿ ವರದಿ ನೀಡಬೇಕು. ಪರಿಹಾರ ನೀಡುವ ಸಂದರ್ಭದಲ್ಲಿ ಕಟಾವು ಮಾಡಿದ ಬೆಳೆಯನ್ನೂ ಪರಿಗಣಿಸುತ್ತೇವೆ ಕೇವಲ ರಾಗಿ ಮಾತ್ರವಲ್ಲ, ಎಲ್ಲಾ ಬೆಳೆಗಳಿಗೆ ಪರಿಹಾರ ಕೊಡುತ್ತೇವೆ. ಬೆಳೆ ಪರಿಹಾರ ಕುರಿತು ಕಾಂಗ್ರೆಸ್ ಅಪಾದನೆ ಸುಳ್ಳು. ಡಾ. ಮನಮೋಹನ್ ಸಿಂಗ್ ಸರ್ಕಾರ ಬಿಡುಗಡೆ ಮಾಡಿದ್ದ ಪರಿಹಾರ ಹಣಕ್ಕಿಂದ ಮೂರು ಪಟ್ಟು ಹೆಚ್ಚು ಹಣವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನೀಡಿದೆ. ಅಂಕಿ ಅಂಶಗಳನ್ನು ನೋಡಿ, ಕಾಮಾಲೆ ಕಣ್ಣು ಬಿಟ್ಟು ನೋಡಿ’ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ