ನಿವಾರ್ ಚಂಡಮಾರುತ ಭೀತಿ: ತಮಿಳುನಾಡಿನಲ್ಲಿ ಹೈಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ
ತೀವ್ರ ವಾಯುಭಾರ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗುವ ಸಾಧ್ಯತೆ
Team Udayavani, Nov 24, 2020, 4:30 PM IST
ಚೆನ್ನೈ: ಪ್ರಬಲ ನಿವಾರ್ ಚಂಡಮಾರುತ ಬುಧವಾರ(ನವೆಂಬರ್ 25, 2020) ತಮಿಳುನಾಡಿನ ಕಾರೈಕಲ್ ಮತ್ತು ಮಹಾಬಲಿಪುರಂ ಕರಾವಳಿ ಪ್ರದೇಶದಿಂದ ಹಾದು ಹೋಗುವ ನಿರೀಕ್ಷೆ ಇದ್ದಿರುವುದಾಗಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ ನಿಟ್ಟಿನಲ್ಲಿ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ವರದಿ ಹೇಳಿದೆ.
ಬಂಗಾಳಕೊಲ್ಲಿ ಪ್ರದೇಶದಲ್ಲಿ ಸೋಮವಾರ ತೀವ್ರ ವಾಯುಭಾರ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗುವ ಸಾಧ್ಯತೆ ಇದ್ದು, ಮುಂದಿನ 12 ಗಂಟೆಯೊಳಗೆ ಚಂಡಮಾರುತ ಬಡಿದಪ್ಪಳಿಸಲಿದೆ ಎಂದು ತಿಳಿಸಿದೆ.
ಮುಂಜಾಗ್ರತಾ ಕ್ರಮವಾಗಿ ಒಟ್ಟು 30 ಎನ್ ಡಿಆರ್ ಎಫ್ ತಂಡವನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಐಎಂಡಿಯ ಹೊಸ ಪ್ರಕಟಣೆಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ತೀವ್ರವಾದ ವಾಯುಭಾರ ಕುಸಿತ ಸಂಭವಿಸಿದ ನಿಟ್ಟಿನಲ್ಲಿ ಪಾಂಡಿಚೇರಿಯ ಪೂರ್ವ, ಆಗ್ನೇಯ ಪಾಂಡಿಚೇರಿಯಿಂದ 450 ಕಿಲೋ ಮೀಟರ್ ಹಾಗೂ ಚೆನ್ನೈನಿಂದ 480 ಕಿಲೋ ಮೀಟರ್ ದೂರದಲ್ಲಿರುವ ಬಂಗಾಳ ಕೊಲ್ಲಿಯ ಮಧ್ಯೆ ಚಂಡಮಾರುತದ ಕೇಂದ್ರವಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್