ಮೇ 27ರಂದು ಒಡಿಶಾ, ಪಶ್ಚಿಮಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ, ವೈಮಾನಿಕ ಸಮೀಕ್ಷೆ
ಚಂಡಮಾರುತದಲ್ಲಿ ಸುಮಾರು 3ಲಕ್ಷಕ್ಕೂ ಅಧಿಕ ಮನೆಗಳು ಬಂಗಾಳದಲ್ಲಿ ಹಾನಿಗೀಡಾಗಿದ್ದವು.
Team Udayavani, May 27, 2021, 3:50 PM IST
ಭುವನೇಶ್ವರ್: ಯಾಸ್ ಚಂಡಮಾರುತದಿಂದ ಹಾನಿಗೀಡಾದ ಪ್ರದೇಶವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ(ಮೇ 27) ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದರು. ಶುಕ್ರವಾರ (ಮೇ 28) ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾ ಮತ್ತು ಪಶ್ಚಿಮಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮೂರೇ ಮೂರು ತಿಂಗಳಲ್ಲಿ ದೇಶದ 23 ಸಾವಿರ ಮಂದಿಗೆ ಉದ್ಯೋಗ ನೀಡಿದ ಫ್ಲಿಪ್ ಕಾರ್ಟ್..!
ಭುವನೇಶ್ವರಕ್ಕೆ ಆಗಮಿಸುವ ಪ್ರಧಾನಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಮತ್ತು ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿದ ನಂತರ ಯಾಸ್ ಚಂಡಮಾರುತದಿಂದ ಹಾನಿಗೊಳಗಾದ ಬಾಲಾಸೋರ್, ಭದ್ರಕ್ ಮತ್ತು ಪುರ್ಬಾ ಮೇದಿನಿಪುರ್ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.
ಯಾಸ್ ಚಂಡಮಾರುತ ಮೇ 26ರಂದು ಮಧ್ಯಾಹ್ನ ಒಡಿಶಾ ಮತ್ತು ಪಶ್ಚಿಮಬಂಗಾಳ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿತ್ತು. ಎರಡೂ ರಾಜ್ಯಗಳಲ್ಲಿ ಸುಮಾರು 20 ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿತ್ತು. ಚಂಡಮಾರುತದಲ್ಲಿ ಸುಮಾರು 3ಲಕ್ಷಕ್ಕೂ ಅಧಿಕ ಮನೆಗಳು ಬಂಗಾಳದಲ್ಲಿ ಹಾನಿಗೀಡಾಗಿದ್ದವು.
ಯಾಸ್ ಚಂಡಮಾರುತ ಬುಧವಾರ ಸಂಜೆ ನಂತರ ದುರ್ಬಲಗೊಂಡಿತ್ತು. ದಕ್ಷಿಣ ಜಾರ್ಖಂಡ್ ಕರಾವಳಿ ಪ್ರದೇಶದತ್ತ ಸಾಗಿರುವ ಚಂಡಮಾರುತ ಮತ್ತಷ್ಟು ದುರ್ಬಲಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ