ಡಿಕೆಶಿ ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೆ ನನ್ನ ಮಿತ್ರರೂ ಹೌದು : ಬಿ.ವೈ.ವಿಜಯೇಂದ್ರ
Team Udayavani, Oct 15, 2021, 11:35 AM IST
ಚಿತ್ರದುರ್ಗ: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೇ ನನ್ನ ಮಿತ್ರರೂ ಹೌದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗುರುವಾರ ಹೇಳಿಕೆ ನೀಡಿದ್ದಾರೆ.
ನಗರದ ಮುರುಘಾ ಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಅನುಭವ ಮಂಟಪದಲ್ಲಿ ಯುವಮೇಳ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ವಿಜಯೇಂದ್ರ ಅವರು ಒಂದೇ ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತು ಕೆಲ ಹೊತ್ತು ಪರಸ್ಪರ ಮಾತನಾಡಿ ಗಮನ ಸೆಳೆದರು.
ಕಾರ್ಯಕ್ರಮದ ಬಳಿಕ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ವಿಜಯೇಂದ್ರ ,’ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿರಬಹುದು ಆದರೆ ನನ್ನ ಮಿತ್ರರೂ ಹೌದು. ವೇದಿಕೆಯಲ್ಲಿ ಸಹಜವಾಗಿ ಮಾತನಾಡಿದ್ದೇವೆ.ರಾಜಕೀಯವಾಗಿ ಚರ್ಚಿಸಿಲ್ಲ, ವೈಯಕ್ತಿಕವಾಗಿ ಮಾತನಾಡಿದ್ದೇವೆ’ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಭೇಟಿ ವಿಚಾರ ಸುಳ್ಳು.ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಹುರುಳಿಲ್ಲ. ಅವರು ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ ಎಂದರು.
ಗುತ್ತಿಗೆದಾರರ ಮೇಲೆ ಐಟಿ ದಾಳಿಗೂ ಬಿಎಸ್ ಯಡಿಯೂರಪ್ಪ ಅವರಿಗೂ ಸಂಬಂಧವಿಲ್ಲ ಎಂದರು.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಬಳಿಕ ರಾಜ್ಯ ಸುತ್ತಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.ಕಾಂಗ್ರೆಸ್ ಪಕ್ಷ ತಿರುಕನ ಕನಸು ಕಾಣುತ್ತಿದ್ದು, ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದ ಕೆಲವು ರಾಜ್ಯಗಳಲ್ಲಿ ಮಾತ್ರ ಅವಶೇಷದ ರೂಪದಲ್ಲಿ ಉಳಿದಿದೆ. ಕಾಂಗ್ರೆಸ್ ಏನೇ ಬೊಬ್ಬೆ ಹೊಡೆದರೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದರು.
ಕಾಂಗ್ರೆಸ್ ಪಕ್ಷದ ಆಂತರಿಕ ಬೇಗುದಿ ಮಟ್ಟ ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಕಾಂಗ್ರೆಸ್ ಪಕ್ಷ ಮುಗಿಸಲು ವಿಪಕ್ಷಗಳೇ ಬೇಕಿಲ್ಲ.ಪಂಜಾಬ್ ನಲ್ಲಿ ಕಾಂಗ್ರೆಸ್ ಒಡೆದು ಹೋಳಾಗುತ್ತಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಒಡೆದು ಮೂರು ಮನೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್