ತುಮಕೂರಿನಲ್ಲಿ ಸಾವಿರಾರು ಕೋಟಿಯ ಬೇನಾಮಿ ಆಸ್ತಿ : ಶಿವಣ್ಣ ವಿರುದ್ಧ ಡಿಕೆಶಿ ಕಿಡಿ
Team Udayavani, Oct 15, 2021, 5:51 PM IST
ಸೊಗಡು ಶಿವಣ್ಣ, ಡಿ.ಕೆ.ಶಿವಕುಮಾರ್
ತುಮಕೂರು: ತುಮಕೂರಿನಲ್ಲಿ ಸಾವಿರಾರು ಕೋಟಿಯ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ ನಾಯಕ ಸೊಗಡು ಶಿವಣ್ಣ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಕಿಡಿಕಾರಿದ್ದಾರೆ.
ಸದಾಶಿವ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು , ಮೊದಲು ಅವನನ್ನು ಮೆಂಟಲ್ ಆಸ್ಪತ್ರೆಗೆ ದಾಖಲಿಸಬೇಕು. ರಾಜಕೀಯವಾಗಿ ಜಾಗ ಇಲ್ಲದೆ ಹುಡುಕುತ್ತಿದ್ದಾನೆ ಎಂದು ಕಿಡಿ ಕಾರಿದ್ದಾರೆ.
ಯಾವುದಾದರೂ ಆಸ್ತಿ ಇದ್ದರೆ ಅವನೇ ಮಾಡಿಕೊಳ್ಳಲಿ, ಅವನಿಗೆ ಎಲ್ಲಾ ಉಡುಗೊರೆಯಾಗಿ ಕೊಟ್ಟು ಬಿಡುತ್ತೇನೆ. .ರಾಜಕೀಯ ವಾಗಿ ಅವನಿಗೆ ಜಾಗ ಇಲ್ಲ ಹೀಗಾಗಿ ಮಾತನಾಡುತ್ತಿ ದ್ದಾನೆ. ಮೊದಲು ರಾಜಕೀಯ ಜಾಗ ಹುಡುಕಿಕೊಳ್ಳಲಿ ಎಂದು ಪ್ರತಿ ಸವಾಲು ಎಸೆದರು.
ಡಿ.ಕೆ.ಶಿವಕುಮಾರ್ ಅವರು ತುಮಕೂರಿನಲ್ಲಿ ಸಾವಿರಾರು ಕೋಟಿ ಮೊತ್ತದ ಬೇನಾಮಿ ಆಸ್ತಿ ಮಾಡಿಕೊಂಡಿದ್ದು, ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದು ಸತ್ಯ. ಡಿಕೆಶಿ ರಿಟೇಲ್ ವ್ಯಾಪಾರಿಯಲ್ಲ, ಹೋಲ್ಸೇಲ್ ವ್ಯಾಪಾರಿ. ಕೃಷ್ಣಮೂರ್ತಿಎನ್ನುವವರ ಹೆಸರಿನಲ್ಲಿ ಶಿವಕುಮಾರ್ಗೆ ಬೇನಾಮಿ ಆಸ್ತಿ ಇದ್ದು. ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿ ಗಣಿಗಾರಿಕೆ ಮತ್ತು ತುಮಕೂರಿನಲ್ಲಿ 100 ಕೋಟಿ ರೂಪಾಯಿ ಮೌಲ್ಯದ ಹಂಚಿನ ಕಾರ್ಖಾನೆ ಇದೆ, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೇನಾಮಿ ಆಸ್ತಿ ಮಾಡಲಾಗಿತ್ತು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?