ಸಿದ್ದು ಪಡೆಯ ವಿರುದ್ಧ ಹೈಕಮಾಂಡ್ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್
Team Udayavani, Jul 26, 2022, 9:33 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಧ್ಯೆ ನಡೆಯುತ್ತಿದ್ದ ಹೋರಾಟ ಈಗ ಮತ್ತೊಂದು ಮಜಲಿಗೆ ಹೊರಳಿದ್ದು, ತಮ್ಮ ವಿರುದ್ಧ ಧ್ವನಿ ಎತ್ತುತ್ತಿದ್ದವರಿಗೆ ಹೈಕಮಾಂಡ್ ಮೂಲಕವೇ ಉತ್ತರ ಕೊಡಿಸುವುದಕ್ಕೆ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.
ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕೆಂದು ನೀಡಿದ ಎಚ್ಚರಿಕೆಯ ಬಳಿಕವೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಗೆ ಹೈಕಮಾಂಡ್ ನೋಟಿಸ್ ನೀಡಿದ್ದು, ಭವಿಷ್ಯದಲ್ಲಿ ಇಂಥ ಹೇಳಿಕೆ ನೀಡುವವರಿಗೆಲ್ಲ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.
ಜಮೀರ್ ಗೆ ಹೈಕಮಾಂಡ್ ನೀಡಿರುವ ನೋಟಿಸ್ ಈಗ ಪಕ್ಷದ ವಲಯದಲ್ಲಿ ಬೇರೆ ಬೇರೆ ಚರ್ಚೆಗೆ ಕಾರಣವಾಗಿದೆ. ಮೂಲ ಕಾಂಗ್ರೆಸಿಗರೆಲ್ಲರೂ ಸೇರಿ ಇಂಥದೊಂದು ಗಟ್ಟಿ ನಿರ್ಧಾರವನ್ನು ಹೈಕಮಾಂಡ್ ಮೂಲಕವೇ ಹೇಳಿಸಿದ್ದಾರೆಂದು ತಿಳಿದು ಬಂದಿದೆ. ಇಲ್ಲವಾದರೆ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಲು ಅವರ ಆಪ್ತರು ಇನ್ನಷ್ಟು ಮುಂದಾಗಬಹುದೆಂದು ಈ ತಡೆ ಹಾಕಲಾಗಿದೆ.
ಇದನ್ನೂ ಓದಿ:ಇನ್ನು ಒಂದು ವರ್ಷ ನೆಮ್ಮದಿ: ಕೇಂದ್ರ ಸಚಿವರನ್ನು ಭೇಟಿಯಾದ ರಾಜ್ಯ ನಿಯೋಗ
ಎಲ್ಲದಕ್ಕಿಂತ ಮುಖ್ಯವಾಗಿ ಸಿದ್ದರಾಮೋತ್ಸವಕ್ಕೆ ರಾಹುಲ್ ಗಾಂಧಿ ಬಂದರೆ ಅವರ ಸಮ್ಮುಖದಲ್ಲಿ ಯಾರೂ ಇಂಥ ಉಪದ್ವ್ಯಾಪ್ಯ ಮಾಡದೇ ಇರಲಿ ಎಂಬ ಕಾರಣಕ್ಕೆ ಹೈಕಮಾಂಡ್ ಈ ಬಿಸಿ ಮುಟ್ಟಿಸಿದೆ. ಮೌನವಾಗಿದ್ದುಕೊಂಡೆ ಸಿದ್ದರಾಮಯ್ಯ ಬಣಕ್ಕೆ ಶಿವಕುಮಾರ್ ಡೋಸ್ ಕೊಟ್ಟಿದ್ದಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್