RRR, Kashmir Filesಗೆ ದಾದಾಸಾಹೇಬ್ ಅಂತಾರಾಷ್ಟ್ರೀಯ ಪ್ರಶಸ್ತಿ,ರಿಷಬ್ ಅತ್ಯುತ್ತಮ ಭರವಸೆ ನಟ
ನಿಮ್ಮೆಲ್ಲರ ಆಶೀರ್ವಾದಕ್ಕಾಗಿ ಭಾರತದ ಎಲ್ಲಾ ಜನರಿಗೆ ಸಮರ್ಪಿಸುವುದಾಗಿ” ಅಗ್ನಿಹೋತ್ರಿ ಟ್ವೀಟ್
Team Udayavani, Feb 21, 2023, 11:32 AM IST
ನವದೆಹಲಿ: ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿಯ “ಆರ್ ಆರ್ ಆರ್” ಹಾಗೂ ವಿವೇಕ್ ಅಗ್ನಿಹೋತ್ರಿಯ “ದಿ ಕಾಶ್ಮೀರ್ ಫೈಲ್ಸ್” ಪ್ರತಿಷ್ಠಿತ ದಾದಾಸಾಹೇಬ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.
ಇದನ್ನೂ ಓದಿ:ಸಿ.ಟಿ.ರವಿ ಮನೆಗೆ ಜೆ.ಪಿ.ನಡ್ಡಾ ಭೇಟಿ; ಲಿಂಗಾಯತ ಮಠಾಧೀಶರಿಂದ ಸನ್ಮಾನ
RRR ವರ್ಷದ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪಡೆದಿರುವುದಾಗಿ ವರದಿ ತಿಳಿಸಿದೆ. ಪ್ರತಿಷ್ಠಿತ ದಾದಾಸಾಹೇಬ್ ಅಂತಾರಾಷ್ಟ್ರೀಯ ಪ್ರಶಸ್ತಿಯ ಸುದ್ದಿ ಕುರಿತು ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಫೋಟೋ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದ ವಿಡಿಯೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
“ ಈ ಪ್ರಶಸ್ತಿಯನ್ನು ಭಯೋತ್ಪಾದನೆಯಲ್ಲಿ ಸಂತ್ರಸ್ತರಾದವರಿಗೆ ಹಾಗೂ ನಿಮ್ಮೆಲ್ಲರ ಆಶೀರ್ವಾದಕ್ಕಾಗಿ ಭಾರತದ ಎಲ್ಲಾ ಜನರಿಗೆ ಸಮರ್ಪಿಸುವುದಾಗಿ” ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.
ANNOUNCEMENT:#TheKashmirFiles wins the ‘Best Film’ award at #DadaSahebPhalkeAwards2023.
“This award is dedicated to all the victims of terrorism and to all the people of India for your blessings.” pic.twitter.com/MdwikOiL44— Vivek Ranjan Agnihotri (@vivekagnihotri) February 21, 2023
ಸೋಮವಾರ ಮುಂಬೈನ ಪಂಚತಾರಾ ಹೋಟೆಲ್ ನಲ್ಲಿ ನಡೆದ ದಾದಾಸಾಹೇಬ್ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿತರಣಾ ಸಮಾರಂಭ ನಡೆದಿದ್ದು, ಸಂಜಯ್ ಲೀಲಾ ಬನ್ಸಾಲಿ ಅವರ “ಗಂಗೂಬಾಯಿ ಕಾಥಿಯಾವಾಡಿ” ಸಿನಿಮಾದಲ್ಲಿ ಗಂಗೂಬಾಯಿ ಪಾತ್ರಕ್ಕಾಗಿ ಅಲಿಯಾ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಬ್ರಹ್ಮಾಸ್ತ್ರ ಚಿತ್ರದಲ್ಲಿನ ನಟನೆಗಾಗಿ ರಣಬೀರ್ ಕಪೂರ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದು, ಕಾಂತಾರಾ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು “ಅತ್ಯುತ್ತಮ ಭರವಸೆ ನಟ”ರಾಗಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪಡೆದುಕೊಂಡವರ ವಿವರ:
ಅತ್ಯುತ್ತಮ ನಿರ್ದೇಶಕ- ಆರ್.ಬಾಲ್ಕಿ(ಚುಪ್-ರಿವೇಂಜ್ ಆಫ್ ದಿ ಆರ್ಟಿಸ್ಟ್)
ಅತ್ಯುತ್ತಮ ವೆಬ್ ಸರಣಿ-ರುದ್ರ- ದಿ ಎಡ್ಜ್ ಆಫ್ ಡಾರ್ಕ್ ನೆಸ್
ವರ್ಷದ ಟಿವಿ ಸೀರೀಸ್-ಅನುಪಮಾ
ಕ್ರಿಟಿಕ್ಸ್ ಅತ್ಯುತ್ತಮ ನಟ-ವರುಣ್ ಧವನ್ (ಭೇಡಿಯಾ)
ವರ್ಷದ ಅತ್ಯುತ್ತಮ ಪ್ರತಿಭಾವಂತ ನಟ-ಅನುಪಮ್ ಖೇರ್ (ದಿ ಕಾಶ್ಮೀರ್ ಫೈಲ್ಸ್)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್