ರಾಜ್ಯದಲ್ಲಿ ಇಂದಿನಿಂದ ಕಾರ್ಮಿಕರಿಗೆ ಕೆಲಸದ ಅವಧಿ 8 ಗಂಟೆಗೆ ಸೀಮಿತ
Team Udayavani, Jun 12, 2020, 3:39 PM IST
ಬೆಂಗಳೂರು :ಇಂದಿನಿಂದ ರಾಜ್ಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ ದೇಶದೆಲ್ಲೆಡೆ ಲಾಕ್ ಡೌನ್ ಘೋಷಣೆ ಮಾಡಿದ ಸಂದರ್ಭ ಕೈಗಾರಿಕೆಗಳು, ಕಂಪೆನಿಗಳು ಕೆಲವು ತಿಂಗಳು ಬೀಗ ಹಾಕಿದ್ದವು ಇದರಿಂದ ಸಾಕಷ್ಟು ನಷ್ಟವನ್ನು ಅನುಭವಿಸಿದವು ಆದರೆ ಲಾಕ್ ಡೌನ್ ಸಡಿಲಿಕೆ ಆದ ಬಳಿಕ ಕೈಗಾರಿಕೆಗಳಲ್ಲಿ , ಕಂಪೆನಿಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ಕಾರ್ಮಿಕ ಇಲಾಖೆಯು ರಾಜ್ಯದಲ್ಲಿದ್ದ ವಾರಕ್ಕೆ 40 ಗಂಟೆ ಇದ್ದ ದುಡಿಯುವ ಸಮಯವನ್ನು 60 ಗಂಟೆಗೆ ಏರಿಸಿತ್ತು, ಆದರೆ ಇತರೆ ರಾಜ್ಯಗಳಲ್ಲಿ 8 ಗಂಟೆ ಇದ್ದ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸಿತ್ತು,
ಇದರಿಂದಾಗಿ ಕಾರ್ಮಿಕರ ಮತ್ತು ಶ್ರಮಿಕರ ಶಕ್ತಿಗೆ ತೂಂದರೆಯಾಗುತ್ತದೆ ಎಂಬ ದೃಷ್ಟಿಯಿಂದ ವಿವಿಧ ಸಂಘಟನೆಗಳು, ಕಾರ್ಮಿಕ ಮುಖಂಡರು ಸರಕಾರದ ನಿರ್ಣಯವನ್ನು ಪುನರ್ ವಿಮರ್ಶಿಸಲು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ