ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?
Team Udayavani, May 14, 2022, 8:16 AM IST
14-05-2022
ಮೇಷ: ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಗೌರವ. ಭ್ರಾತೃಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಪ್ರಯಾಣ ಸುಖಕರ.
ವೃಷಭ: ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸಿಕೊಳ್ಳುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ, ಶುಭ.
ಮಿಥುನ: ಸಂಚಾರದಿಂದ ನಿರೀಕ್ಷಿತ ಸಫಲತೆ. ಉತ್ತಮ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ಪ್ರೋತ್ಸಾಹ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪರಾಕ್ರಮ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ.
ಕರ್ಕ: ಧಾರ್ಮಿಕ ಸಾಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಾದಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆಗೆ ಗಮನಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ.
ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕರಿಂದಲೂ ಸುಖ ಲಭಿಸುವ ದಿನ. ಸಹಾಯ ಮಾಡುವಾಗ ಎಚ್ಚರಿಕೆ. ವಿದ್ಯಾರ್ಥಿಗಳಿಗೆ ಅನುಕೂಲ.
ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫಲಿತಾಂಶ ಲಭಿಸುವ ಅವಕಾಶ. ಸಾಂಸಾರಿಕ ಸುಖ ವೃದ್ಧಿ.
ತುಲಾ: ಶಾರೀರಿಕ ಮಾನಸಿಕ ಆರೋಗ್ಯ ವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರವರ್ಗದಿಂದ ನಿರೀಕ್ಷಿತ ಸಹಾಯ. ಮಕ್ಕಳ ವಿಚಾರದಲ್ಲಿ ಮನೋರಂಜನೆಗಾಗಿ ಧನ ವ್ಯಯ.ದೇವತಾ ಉಪಾಸನೆ ವೃದ್ಧಿ. ಹಿರಿಯರ ಆರೋಗ್ಯ ಉತ್ತಮ.
ವೃಶ್ಚಿಕ: ದೈಹಿಕ ಮಾನಸಿಕ ಆರೋಗ್ಯ ದೃಢತೆ. ರಾಜಕೀಯ, ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ಅನಿರೀಕ್ಷಿತ ಧನಾರ್ಜನೆ. ಉತ್ತಮ ವಾಕ್ಚತುರತೆಯಿಂದ ಕಾರ್ಯ ಸಿದ್ಧಿ. ಸಹೋದರರ ಸಹಾಯ. ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನ ಸುಖ. ದೇವತಾ ಕಾರ್ಯದಲ್ಲಿ ಶ್ರದ್ಧೆ.
ಧನು: ದೈಹಿಕ ಆರೋಗ್ಯ ತೃಪ್ತಿದಾಯಕ. ಕಾರ್ಯಕ್ಷೇತ್ರದಲ್ಲಿ ಪರರ ಸಹಾಯದಿಂದಲೂ ವೃತ್ತಿ ನಿಷ್ಠೆಯಿಂದಲೂ ಅನಿರೀಕ್ಷಿತ ಧನಾರ್ಜನೆ ಸ್ಥಾನ ಗೌರವಾದಿ ಸುಖ. ಮಿತ್ರರಿಂದ ಸಹಾಯ. ಜನಮನ್ನಣೆ. ದಾಂಪತ್ಯ ಸುಖ, ಲಾಭದಾಯಕ ಪರಿಸ್ಥಿತಿ, ಮಕ್ಕಳ ವಿಚಾರದಲ್ಲಿ ಪ್ರಗತಿ.
ಮಕರ: ಆರೋಗ್ಯ ಅಭಿವೃದ್ಧಿದಾಯಕ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಧನಾಗಮ ಇದ್ದರೂ ಕಷ್ಟಕರ ಪರಿಸ್ಥಿತಿ. ಕಾರ್ಮಿಕ ವರ್ಗದವರಿಗೆ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಶ್ರಮ. ಉದ್ಯೋಗದಲ್ಲಿ ಗೌರವ. ಹಿರಿಯರ ಆರೋಗ್ಯ ಗಮನಿಸಿ.
ಕುಂಭ: ದೈಹಿಕ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ಸಹೋದರ ಬಂಧುಗಳ ಸಹಾಯ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಉದ್ಯೋಗ ವ್ಯವಹಾರದಲ್ಲಿ ಜನಮನ್ನಣೆ. ದೈಹಿಕ ಆರೋಗ್ಯದ ಬಗ್ಗೆ ಗಮನಿಸಿ. ದೇವತಾ ಕಾರ್ಯದಿಂದ ಶ್ರೇಯ.
ಮೀನ: ಮಾನಸಿಕ ಪ್ರಪುಲ್ಲತೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಪರಿಸ್ಥಿತಿ. ಕಾರ್ಮಿಕ ವರ್ಗ, ಸಹೋದರ ವರ್ಗದವರಿಗೆ ಪ್ರಯಾಣ ಭಾಗ್ಯ. ಹಿರಿಯರ ಆರೋಗ್ಯ ವೃದ್ಧಿದಾಯಕ. ದೇವತಾ ಸ್ಥಳ ಸಂದರ್ಶನ. ವಿದ್ಯಾರ್ಥಿಗಳಿಗೆ, ಅಧ್ಯಯನಾಸಕ್ತರಿಗೆ ಕಠಿಣ ಪ್ರಯತ್ನದಿಂದ ಯಶಸ್ಸು. ಉದ್ಯೋಗಸ್ಥರಿಗೆ, ವ್ಯಾಪಾರಸ್ಥರಿಗೆ ಶುಭ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ
Horoscope Today: ಈ ರಾಶಿಯವರಿಗೆ ಅಕಸ್ಮಾತ್ ಧನಾಗಮ ಯೋಗ ಇರಲಿದೆ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ