ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು


Team Udayavani, Jun 18, 2021, 8:38 PM IST

ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ತಪಾಸಣೆ ತೀವ್ರಗೊಳಿಸಲಾಗಿದ್ದು, ಪಾಸಿಟಿವ್‌ ಸಂಖ್ಯೆಯೂ ಏರತೊಡಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 1006 ಮಂದಿಗೆ ಕೊರೊನಾ ದೃಢಪಟ್ಟಿದೆ. ಜತೆಗೆ, ಕೊರೊನಾದಿಂದಾಗಿ ಇದೇ ಮೊದಲು ಜಿಲ್ಲೆಯಲ್ಲಿ ಒಂದು ದಿನದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ.

ಶುಕ್ರವಾರದಂದು 665 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 87,350 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, ಈ ಪೈಕಿ 79,395 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6,931 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1024 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದಂದು ಶೇ.10.07 ಪಾಸಿಟಿವಿಟಿ ದರ ದಾಖಲಾಗಿದೆ.

23 ಕಡೆ ಕಂಟೈನ್‌ಮೆಂಟ್‌ ವಲಯ
ದಕ್ಷಿಣ ಕನ್ನಡ ಜಿಲ್ಲೆಯ 23 ಕಡೆಗಳಲ್ಲಿ ಶುಕ್ರವಾರ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮಂಗಳೂರಿನ 7, ಬೆಳ್ತಂಗಡಿ ತಾಲೂಕಿನ 8, ಪುತ್ತೂರು ಸುಳ್ಯ ತಾಲೂಕಿನಲ್ಲಿ ತಲಾ 2, ಬಂಟ್ವಾಳ ತಾಲೂಕಿನ 4 ಕಡೆಗಳಲ್ಲಿ ಕಂಟೈನ್‌ಮೆಂಟ್‌ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ :ಕೋವಿಡ್: ರಾಜ್ಯದಲ್ಲಿಂದು 15290 ಸೋಂಕಿತರು ಗುಣಮುಖ; 5783 ಹೊಸ ಪ್ರಕರಣ ಪತ್ತೆ

ಸರಾಸರಿ 10 ಸಾವಿರ ಪರೀಕ್ಷೆ
ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ತಪಾಸಣಾ ಪರೀಕ್ಷೆ ಏರಿಕೆ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ ಕೆಲ ದಿನದಿಂದ ಪ್ರತೀ ದಿನ ಸರಾಸರಿ 10,000 ಮಂದಿಯ ತಪಾಸಣೆ ಮಾಡಲಾಗುತ್ತಿದೆ. ಶುಕ್ರವಾರದಂದು ಒಟ್ಟು 9984 ಮಂದಿಯ ತಪಾಸಣೆ ಮಾಡಲಾಗಿದ್ದು, ಇದರಲ್ಲಿ 1006 ಮಂದಿಗೆ ಕೊರೊನಾ ದೃಢಪಟ್ಟಿದೆ. ಅಪಾರ್ಟ್‌ಮೆಂಟ್‌ ವಾಸಿಗಳು ಕೊರೊನಾ ಪಾಸಿಟಿವ್‌ಗೆ ಒಳಗಾಗದಂತೆ ದ.ಕ. ಜಿಲ್ಲಾಡಳಿತ ಹೆಚ್ಚಿನ ನಿಗಾ ಇರಿಸಿದೆ. ಈ ಕಾರಣಕ್ಕೆ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದು, ಅದರಂತೆ ರಿಂಗ್‌ ಸರ್ವೆಲೆನ್ಸ್‌ಗೆ ಆದ್ಯತೆ ನೀಡಲಾಗಿದೆ. ವಸತಿ ಸಮುತ್ಛಯಗಳಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದ ವ್ಯಕ್ತಿ ವಾಸಿಸುವ ಮಹಡಿ, ಮೇಲಿನ ಮಹಡಿ ಹಾಗೂ ಕೆಳಗಿನ ಮಹಡಿಗಳಲ್ಲಿ ವಾಸವಿರುವ ವ್ಯಕ್ತಿಗಳನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಕೋವಿಡ್‌ ಪ್ರಕರಣ ಕಂಡು ಬಂದ ಮನೆಯ ಸುತ್ತಲಿನ ಪ್ರದೇಶದ 50 ಮನೆಗಳ ಸದಸ್ಯರ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.

ಬೆಂಗಳೂರು ಬಳಿಕ ದ.ಕ.ದಲ್ಲೇ ಅಧಿಕ !
ಕೊರೊನಾ ದೈನಂದಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಗಳೂರು ನಗರದ ಬಳಿಕ ದ.ಕ. ಜಿಲ್ಲೆಯಲ್ಲೇ ಅತ್ಯಧಿಕ ಕೊರೊನಾ ಪ್ರರಕಣ ದಾಖಲಾಗುತ್ತಿದೆ. ಶುಕ್ರವಾರದಂದು ಬೆಂಗಳೂರು ನಗರದಲ್ಲಿ 1100 ದೈನಂದಿನ ಪ್ರಕರಣ ದಾಖಲಾಗಿ 39 ಮಂದಿ ಸಾವನ್ನಪ್ಪಿದ್ದಾರೆ. ಬಳಿಕ ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೊರೊನಾ ದಾಖಲಾಗಿ 14 ಮಂದಿ ಸಾವನ್ನಪ್ಪಿದ್ದಾರೆ.

ತಪಾಸಣೆ ಹೆಚ್ಚಳ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ರೋಗ ತಪಾಸಣೆ ಏರಿಕೆ ಮಾಡಲಾಗಿದ್ದು ಪ್ರತೀ ದಿನ ಸರಾಸರಿ 10,000 ಮಂದಿಗೆಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ಕಾರಣಕ್ಕೆ ದೈನಂದಿನ ಪ್ರಕರಣದಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ಖಾಸಗಿ ಮತ್ತು ಸರಕಾರಿ ಲ್ಯಾಬ್‌ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸ್ವಾಬ್‌ ಟೆಸ್ಟ್‌ ನಡೆಸಲಾಗುತ್ತಿದೆ.
– ಡಾ| ಕಿಶೋರ್‌ ಕುಮಾರ್‌, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.