ಗೈರಾದ ತಾಲೂಕು ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ
Team Udayavani, Dec 3, 2021, 2:24 PM IST
ದೋಟಿಹಾಳ: ಸಮೀಪದ ಮುದೇನೂರು ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ನಿವಾರಣ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು.
ಬೆಳಗ್ಗೆ 10 ಗಂಟೆಗೆ ಆರಂಭವಾಗಬೇಕಾದ ಕಾರ್ಯಕ್ರಮ ಮಧ್ಯಾಹ್ನ ಒಂದು ಗಂಟೆಯಾದರೂ ಯಾವ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರದಿದ್ದ ಕಾರಣಕ್ಕೆ ರದ್ದು ಮಾಡಬೇಕಾಯಿತು.
ಮಳೆಯಲ್ಲೇ ಕಾದು ಸುಸ್ತಾದ. ಸಾರ್ವಜನಿಕರು, ದಲಿತ ಮುಖಂಡರು. ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡರು.
ನೀವು ತಾಲೂಕು ಅಧಿಕಾರಿಗಳು ಮಾಹಿತಿ ನೀಡಿದರೂ ಯಾಕೆ ಆಗಮಿಸಿಲ್ಲ. ಇದು ಕೇವಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾರ್ಯಕ್ರಮ ಮಾಡುತ್ತಿರುವುದು ತಪ್ಪು, ಹಿಂದೆ ಇದೇ ರೀತಿ ಜುಮಲಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಯಾವ ಅಧಿಕಾರಿಗಳು ಭಾಗವಹಿಸಿಲ್ಲ ಈಗ ಅದೇ ರೀತಿ ಅಧಿಕಾರಗಳು ಮಾಡುತ್ತಿದ್ದಾರೆ ಇದು ಅಸ್ಪೃಶ್ಯತೆಯ ನಿವಾರಣೆ ಕಾರ್ಯಕ್ರಮವು ಅಥವಾ ನಮಗೆ ಮಾಡುತ್ತಿರುವ ಅವಮಾನವೇ? ಎಂದು ದಲಿತ ಮುಖಂಡರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೂಡಲೇ ಕಾರ್ಯಕ್ರಮಕ್ಕೆ ಆಗಮಿಸದ ತಾಲೂಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಬೇಕೆಂದು ದಲಿತ ಮುಖಂಡರು ಆಗ್ರಹಿಸಿದರು. ಇನ್ನು ಮುಂದೆ ಇದೇ ರೀತಿಯ ಕಾರ್ಯಕ್ರಮ ಮಾಡುವ ಅವಶ್ಯಕತೆ ನಮಗೆ ಇಲ್ಲ ಎಂದು ಮುಖಂಡರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ