ಕಾರ್ಕಳ: ಬೈಪಾಸ್‌ನ ಸರ್ವಜ್ಞ ವೃತ್ತ ಡೇಂಜರ್‌ ಸ್ಪಾಟ್‌!

ಬ್ಯಾರಿಕೇಡ್‌, ಹಂಪ್ಸ್‌ , ಎಲ್‌ಇಡಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಕೆ ಅಗತ್ಯ

Team Udayavani, Mar 13, 2021, 5:50 AM IST

ಕಾರ್ಕಳ: ಬೈಪಾಸ್‌ನ ಸರ್ವಜ್ಞ ವೃತ್ತ ಡೇಂಜರ್‌ ಸ್ಪಾಟ್‌!

ಕಾರ್ಕಳ: ಬಜಗೋಳಿ-ಉಡುಪಿ ಸಂಪರ್ಕ ರಾಜ್ಯ ಹೆದ್ದಾರಿಯ ಬೈಪಾಸ್‌ನ ಸರ್ವಜ್ಞ ಸರ್ಕಲ್‌ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಇಲ್ಲಿ ಅಪಘಾತ ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಅಪಘಾತ ತಡೆಗೆ ಇಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಬೈಪಾಸ್‌ ಜಂಕ್ಷನ್‌ ಸಂಧಿಸುವ ಈ ಸ್ಥಳ ವಾಹನ ಚಾಲಕರು, ಪಾದಚಾರಿಗಳಲ್ಲಿ ಸದಾ ಗೊಂದಲ ಮೂಡಿಸುತ್ತಲೇ ಇರುತ್ತದೆ. ಯಾವ ಕಡೆಗೆ ಯಾವ ವಾಹನಗಳು ಹೋಗುತ್ತವೆ ಎಂದು ತತ್‌ಕ್ಷಣಕ್ಕೆ ತಿಳಿಯುವುದೇ ಇಲ್ಲ. ಪಾದಚಾರಿಗಳಂತೂ ರಸ್ತೆ ದಾಟಲು ಯೋಚಿಸುವಷ್ಟರಲ್ಲಿ ಇನ್ನೊಂದು ಕಡೆಯಿಂದ ವಾಹನಗಳು ನುಗ್ಗುವ ಅಪಾಯವಿದೆ. ವಾಹನಗಳು ಶರವೇಗದಲ್ಲಿ ಸಾಗಿ ಬರುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ.

ಶಾಲಾ ಮಕ್ಕಳಿಗೆ ಭೀತಿ
ಸರ್ವಜ್ಞ ವೃತ್ತ ಒಂದು ಕೇಂದ್ರ ಬಿಂದು ಇದ್ದಂತೆ. ಇಲ್ಲಿ ಸಾರ್ವಜನಿಕರಷ್ಟೆ ಅಲ್ಲ. ಶಾಲಾ ಕಾಲೇಜು, ಬಹುತೇಕ ಸರಕಾರಿ ಕಚೇರಿಗಳು ಪರಿಸರದಲ್ಲಿ ಇರುವುದರಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಜಂಕ್ಷನ್‌ನಲ್ಲಿ ಅಡ್ಡಾಡುತ್ತಿರುತ್ತಾರೆ. ಇಲ್ಲಿ ಹಂಪ್ಸ್‌ ಅಥವಾ ಕನಿಷ್ಠ ಬ್ಯಾರಿಕೇಡ್‌ ಹಾಕಿದರೆ ಉತ್ತಮವೆಂದು ಹೇಳುತ್ತಾರೆ.

ಸಿಬಂದಿ ಇಲ್ಲ
ಜಂಕ್ಷನ್‌ನಲ್ಲಿ ಎಲ್ಲ ಸಂದರ್ಭದಲ್ಲಿ ಅಲ್ಲದೇ ಇದ್ದರೂ ಜನ-ವಾಹನ ಸಂಚಾರ ಹೆಚ್ಚಿದ್ದಾಗ ಕನಿಷ್ಠ ಗೃಹರಕ್ಷಕ ದಳದ ಸಿಬಂದಿಯನ್ನಾದರೂ ಕರ್ತವ್ಯಕ್ಕೆ ನಿಯೋಜಿಸಿದರೆ ಸಂಭಾವ್ಯ ಅವಘಡಗಳನ್ನು ತಪ್ಪಿಸಬಹುದು. ವಾಹನಗಳು ಬೇಕಾಬಿಟ್ಟಿ ಸಂಚರಿಸುವುದರ ತಡೆಗೆ ಸಿಬಂದಿ ನೇಮಕ ಇಲ್ಲಿ ಅಗತ್ಯವಾಗಿದೆ.

ರೂಲ್ಸ್‌ ಬ್ರೇಕ್‌
ರಾತ್ರಿ ಕೂಡ ಈ ಜಂಕ್ಷನ್‌ ಅಪಾಯಕಾರಿಯಾಗಿದೆ. ರಾತ್ರಿ ವೇಳೆ ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂ ಸಿ ವಾಹನ ಚಲಾಯಿಸುತ್ತಾರೆ. ಇದರಿಂದಲೇ ಅತಿ ಹೆಚ್ಚು ಅಪಘಾತಗಳು ರಾತ್ರಿ ವೇಳೆಯಲ್ಲೂ ಸಂಭವಿಸುತ್ತಿರುತ್ತದೆ.
ಜಂಕ್ಷನ್‌ನ ಆಸುಪಾಸು ದಿಕ್ಕುಗಳ ರಸ್ತೆಗಳಿಗೆ ಹಂಪ್ಸ್‌, ಬ್ಯಾರಿಕೇಡ್‌, ಎಲ್‌ಇಡಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಿ ಅಪಘಾತ ನಿಯಂತ್ರಿಸುವುದು ಅಗತ್ಯವಾಗಿದೆ.

ಹಲವು ರಸ್ತೆ ಸಂಪರ್ಕಿಸುವ ಜಂಕ್ಷನ್‌!
ಬೈಪಾಸ್‌ ರಸ್ತೆಯ ಈ ಅಪಾಯಕಾರಿ ಜಂಕ್ಷನ್‌ ಇರುವುದು ಬಜಗೋಳಿ-ಉಡುಪಿ ಸಂಪರ್ಕ ರಸ್ತೆ ಮಧ್ಯೆ. ಜಂಕ್ಷನ್‌ನಿಂದ ಕವಲೊಡೆದು 5 ಸಂಪರ್ಕ ರಸ್ತೆಗಳಿವೆ. ಬಜಗೋಳಿ-ಉಡುಪಿ ಸಂಪರ್ಕ ರಸ್ತೆ ಒಂದಾದರೆ, ನಕ್ರೆ, ತಾಲೂಕು ಕಚೇರಿ ಎದುರಾಗಿ ಬಂಡಿಮಠಕ್ಕೆ, ಸಾಲ್ಮರಕ್ಕೆ ಒಳ ಮಾರ್ಗವಾಗಿ ಪೇಟೆಗೆ ತೆರಳುತ್ತದೆ.

ವಾಹನ, ಜನಸಂದಣಿಯಿರುವ ಸ್ಥಳ: ಹೆಚ್ಚಿದ ಅವಘಡ
ಕಾರ್ಮಿಕರು, ವಿದ್ಯಾರ್ಥಿಗಳು ಬೆಳಗ್ಗೆ ಹಾಗೂ ಸಂಜೆ ಹೊತ್ತು ಇದೇ ಜಂಕ್ಷನ್‌ ಮೂಲಕ ವಿವಿಧೆಡೆಗೆ ಹೆಚ್ಚು ತೆರಳುತ್ತಿರು ತ್ತಾರೆ. ಇಲ್ಲಿ ವಾಹನ ಸಂಚಾರ, ಜನಸಂಚಾರ ತಪ್ಪುವುದೇ ಇಲ್ಲ. ಎಲ್ಲ ಕಡೆಯ ರಸ್ತೆಗಳಿಂದಲೂ ವಾಹನ ಸವಾರರು ನುಗ್ಗುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಹೆಚ್ಚಿನ ಅವಘಡಗಳು ಸಂಭವಿಸಿದೆ. ಮಾ.12ರಂದು ಟೆಂಪೋ-ಬೈಕ್‌ ಮಧ್ಯೆ ಅಪಘಾತ ಸಂಭವಿಸಿ, ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.

ಕ್ರಮ ಕೈಗೊಳ್ಳಲಾಗುವುದು
ವೃತ್ತದಲ್ಲಿ ಸರಣಿ ಅಪಘಾತ ಆಗುತ್ತಿರುವುದು ಗಮನಕ್ಕೆ ಬಂದಿದೆ. ಈ ಅಪಘಾತ ತಪ್ಪಿಸಲು ಇಲಾಖೆಯಿಂದ ಕ್ರಮ ಕೈಗೊಂಡು ಸಂಚಾರ ನಿಯಂತ್ರಣಕ್ಕೆ ಪ್ರಯತ್ನಿಸಲಾಗುವುದು.
-ಸಂಪತ್‌ ಕುಮಾರ್‌, ಸರ್ಕಲ್‌ ಇನ್ಸ್‌ಪೆಕ್ಟರ್‌

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.