
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾದಲ್ಲಿ ಶತವೀಣಾವಲ್ಲರಿ
Team Udayavani, Sep 30, 2022, 11:40 PM IST

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಮತ್ತು ಉಚ್ಚಿಲ ದಸರಾ ಪ್ರಯುಕ್ತ ಶುಕ್ರವಾರ ಲಲಿತಾ ಪಂಚಮಿಯ ಪ್ರಯುಕ್ತ ಮಹಾಲಕ್ಷ್ಮೀ, ನವದುರ್ಗೆಯರು ಮತ್ತು ಶಾರದಾ ಮಾತೆಯ ಮುಂಭಾಗದಲ್ಲಿ ಶತವೀಣಾವಲ್ಲರಿ ಕಾರ್ಯಕ್ರಮ ನಡೆಯಿತು.
ವೀಣಾ ವಾದಕಿ ವಿದ್ವಾನ್ ಪವನ ಬಿ. ಆಚಾರ್ ಮಣಿಪಾಲ ಅವರ ನಿರ್ದೇಶನ ಮತ್ತು ನಿರ್ವಹಣೆಯೊಂದಿಗೆ 101 ಕಲಾವಿದರಿಂದ ವೀಣಾ ನಡೆಯಿತು. 14 ಸಹ ಕಲಾವಿದರು, 6 ಹಿನ್ನೆಲೆ ವಾದಕರು ಸಹಕರಿಸಿದರು. 10 ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸಾಕ್ಷಿಯಾದರು.
ಶತವೀಣಾ ವಾದನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವರುಣಾ ಗಮನವಾಗಿದ್ದು ಶಾರದಾ ಮಾತೆ ಸಂತೃಪ್ತಳಾಗಿದ್ದಾಳೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಗೌರವಸಲಹೆಗಾರ ಡಾ| ಜಿ. ಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿರುದು ಪ್ರದಾನ
ಶತವೀಣಾವಲ್ಲರಿ ಸಂಯೋಜಿಸಿದ ವಿ| ಪವನ ಬಿ. ಆಚಾರ್ ಅವರನ್ನು ಡಾ| ಜಿ. ಶಂಕರ್ ಅವರು “ವೀಣಾ ವಿನೋದಿನಿ’ ಬಿರುದು ಪ್ರದಾನಿಸಿ ಗೌರವಿಸಿದರು.
ಸುಮಂಗಲೆಯರಿಗೆ ಗೌರವ
ಲಲಿತಾ ಪಂಚಮಿ ಪ್ರಯುಕ್ತ ದೇಗುಲದಲ್ಲಿ ಸಾವಿರಾರು ಸುಮಂಗಲೆ ಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. 5 ಸಾವಿರಕ್ಕೂ ಅಧಿಕ ಸುಮಂಗಲೆಯರಿಗೆ ಪ್ರಸಾದ ರೂಪದಲ್ಲಿ ವಸ್ತ್ರ(ಸೀರೆ)ದಾನ ಸಹಿತವಾಗಿ ಗೌರವಾರ್ಪಣೆ ಸಲ್ಲಿಸ ಲಾಯಿತು.
ಉಡುಪಿ ಕಿದಿಯೂರು ಹೊಟೇಲ್ ಪ್ರ„.ಲಿ. ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್, ಜತೆ ಕಾರ್ಯದರ್ಶಿ ಮೋಹನ್ ಕರ್ಕೇರ, ಆಡಳಿತ ಸಮಿತಿ ಸದಸ್ಯ ವೈ. ಗಂಗಾಧರ ಸುವರ್ಣ, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್. ಸಾಲ್ಯಾನ್, ಕಾಪು ನಾಲ್ಕು ಪಟ್ಣ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಯಶೋದಾ ಕುಂದರ್ ಉಪಸ್ಥಿತರಿದ್ದರು.ದೇಗುಲದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ಸ್ವಾಗತಿಸಿ, ವಂದಿಸಿದರು.
ನಿರಂತರ ಕಾರ್ಯಕ್ರಮ
ನವರಾತ್ರಿ 5ನೇ ದಿನದ ಲಲಿತಾ ಪಂಚಮಿ ಪ್ರಯುಕ್ತ ಬೆಳಗ್ಗೆಚಂಡಿಕಾ ಹೋಮ, ನವದುರ್ಗೆಯರಿಗೆ ಮಹಾ ಮಂಗಳಾರತಿ, ಮಹಾಪೂಜೆ, ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ಅಂಬಿಕಾ ಕಲೊ³àಕ್ತ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್