ದಾವಣಗೆರೆ ಜಿಲ್ಲೆಯಲ್ಲಿ 853 ಸೋಂಕಿತರು ಗುಣಮುಖ : 698 ಹೊಸ ಪ್ರಕರಣ
Team Udayavani, May 30, 2021, 9:31 PM IST
ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಕೊರೊನಾದಿಂದ ಗುಣಮುಖರಾದ 853 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 342, ಹರಿಹರದಲ್ಲಿ 124, ಜಗಳೂರಿನಲ್ಲಿ 61, ಚನ್ನಗಿರಿ ಯಲ್ಲಿ 148, ಹೊನ್ನಾಳಿಯಲ್ಲಿ 161 ಹಾಗೂ ಹೊರ ಜಿಲ್ಲೆಯ 17 ಜನ ಒಳಗೊಂಡಂತೆ 853 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತೊಮ್ಮೆ ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ.
ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 338 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 72 , ಜಗಳೂರಿನಲ್ಲಿ 38, ಚನ್ನಗಿರಿಯಲ್ಲಿ137, ಹೊನ್ನಾಳಿಯಲ್ಲಿ 100 ಹಾಗೂ ಹೊರ ಜಿಲ್ಲೆಯ 13 ಜನರು ಒಳಗೊಂಡಂತೆ 698 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.
ಇದನ್ನೂ ಓದಿ :ಸುಲಿಗೆ ಮಾಡುವ ಆ್ಯಂಬುಲೆನ್ಸ್ ಚಾಲಕರ ವಿರುದ್ಧ ಕಠಿಣ ಕ್ರಮ: ಆರ್ ಅಶೋಕ್
ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 22788, ಹರಿಹರದಲ್ಲಿ 5839, ಜಗಳೂರಿನಲ್ಲಿ 2232, ಚನ್ನಗಿರಿಯಲ್ಲಿ4798, ಹೊನ್ನಾಳಿಯಲ್ಲಿ 5151, ಹೊರ ಜಿಲ್ಲೆಯ 1226 ಜನರು ಸೇರಿದಂತೆ ಈವರೆಗೆ ಒಟ್ಟು 42,034 ಜನರು ಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 20537, ಹರಿಹರದಲ್ಲಿ5176, ಜಗಳೂರಿನಲ್ಲಿ 1882, ಚನ್ನಗಿರಿಯಲ್ಲಿ 3892, ಹೊನ್ನಾಳಿಯಲ್ಲಿ 4415, ಹೊರ ಜಿಲ್ಲೆಯ 1142 ಜನರು ಸೇರಿದಂತೆ 36,906 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4773ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಕೊರೊನಾದಿಂದ ಎಂಟು ಜನರು ಮೃತಪಟ್ಟಿದ್ದಾರೆ. ದಾವಣಗೆರೆ ಸಮೀಪದ ಮಾಗಾನಹಳ್ಳಿಯ 30 ವರ್ಷದ ವ್ಯಕ್ತಿ, ಜಗಳೂರುನ ಗೊಲ್ಲರಹಟ್ಟಿಯ 70 ವರ್ಷದ ವೃದ್ಧ, ಹರಿಹರ ತಾಲೂಕಿನ ಭಾನುವಳ್ಳಿಯ 40 ವರ್ಷದ ವ್ಯಕ್ತಿ, ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯ 48 ವರ್ಷದ ಮಹಿಳೆ, ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ 60 ವರ್ಷದ ವೃದ್ಧ, ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದ 42 ವರ್ಷದ ವ್ಯಕ್ತಿ, ಯಕ್ಕನಹಳ್ಳಿಯ 80 ವರ್ಷದ ವೃದ್ಧ, ಹತ್ತೂರು ಗ್ರಾಮದ 40 ವರ್ಷದ ವ್ಯಕ್ತಿ ಮೃತಪಟ್ಟವರು. ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 355 ಜನರು ಸಾವನ್ನಪ್ಪಿದ್ದಂತಾಗಿದೆ.
ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 248 ಸೋಂಕಿತರು ಸಾಮಾನ್ಯ, 720 ಸೋಂಕಿತರು ಆಕ್ಸಿಜನ್, 30 ಸೋಂಕಿತರು ಎಚ್ಎಫ್ಎನ್ಸಿ, 52 ಸೋಂಕಿತರು ವೆಂಟಿಲೇಟರ್ 34 ಸೋಂಕಿತರು ವೆಂಟಿಲೇಟರ್ ರಹಿತ, 2571 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 1281ಸೋಂಕಿತರು ಕೋವಿಡ್ ಕೇರ್ ಸೆಂಟರ್ನಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!