ಕಾರವಾರ : ಫೆ. 20 ರಂದು ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
ಹಳ್ಳಿ ಕಡೆಗೆ ಜಿಲ್ಲಾಧಿಕಾರಿ ನಡಿಗೆ
Team Udayavani, Feb 17, 2021, 8:42 PM IST
ಕಾರವಾರ : ಗ್ರಾಮೀಣ ಜನರ ಅಹವಾಲು ಹಾಗೂ ಬೇಡಿಕೆಗಳ ಕುರಿತಂತೆ ಸ್ಥಳದಲ್ಲಿಯೇ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಇದೇ ಫೆಬ್ರುವರಿ 20 ರ ಮೂರನೇ ಶನಿವಾರ ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳ ಗ್ರಾಮ ವಾಸ್ತವ್ಯ ಆರಂಭಗೊಳ್ಳಲಿದೆ. ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಕಂದಾಯ ಸಚಿವರ ನಿರ್ದೇಶನದಂತೆ “ಹಳ್ಳಿಕಡೆಗೆ ಜಿಲ್ಲಾಧಿಕಾರಿಗಳ ನಡಿಗೆ” ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕುರಿತಂತೆ ಜಿಲ್ಲಾಧಿಕಾರಿ ಸೂಚನೆ ಹೊರಡಿಸಿದ್ದು, ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಗ್ರಾಮ ವಾಸ್ತವ್ಯ ಕೈಗೊಂಡು ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳನ್ನು ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:ಬಾಲ್ಕನಿಂದ ಕೆಳಗೆ ಬಿದ್ದು ಮೃತಪಟ್ಟ ಹಸುಗೂಸು: ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ
ಇದೇ ದಿನ ಫೆಬ್ರುವರಿ 20 ರಂದು ಶನಿವಾರ ಆಯಾ ತಾಲೂಕಾ ತಹಶೀಲ್ದಾರಗಳ ನೇತೃತ್ವದಲ್ಲಿ ಕೂಡ ಗ್ರಾಮ ವಾಸ್ತವ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದು, ಕಾರವಾರ ತಾಲೂಕಿನ ಬಾಡ ಹೋಬಳಿಯ ಗುಡ್ಡಳಿ ಗ್ರಾಮ, ಹೊನ್ನಾವರ ತಾಲೂಕಿನ ಸಾಲಕೊಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಳಸಾಣಿ ಗ್ರಾಮ, ಜೋಯಿಡಾ ತಾಲೂಕು ಅಸು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊನಕೇಶ ಗ್ರಾಮ, ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಗೋಡ, ಅಂಕೋಲಾ ತಾಲೂಕಿನ ಸುಂಕನಾಳ ಗ್ರಾ ಪಂ ವ್ಯಾಪ್ತಿಯ ವಜ್ರಳ್ಳಿ, , ಮುಂಡಗೋಡ ತಾಲೂಕಿನ ಕ್ಯಾದಗಿಕೊಪ್ಪ, ಯಲ್ಲಾಪುರ ತಾಲೂಕಿನ ಬಿಸಗೋಡ, ಕುಮಟಾ ತಾಲೂಕಿನ ಗೋಕರ್ಣ, ಹಳಿಯಾಳ ತಾಲೂಕಿನ ಸಾಂಬ್ರಾಣಿ, ಶಿರಸಿ ತಾಲೂಕಿನ ಕೊಳಗಿಬೀಸ ಗ್ರಾಮಗಳಲ್ಲಿ ವಾಸ್ತವ್ಯ ನಡೆಸಲು ಸ್ಥಳ ನಿಗದಿ ಮಾಡಿದ್ದು, ತಾಲೂಕು ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಗ್ರಾಮದ ಸಾರ್ವಜನಿಕರಿಂದ ಅಹವಾಲು ಹಾಗೂ ಬೇಡಿಕೆ ಸ್ವೀಕರಿಸಿ ಸೂಕ್ತ ಪರಿಹಾರಕ್ಕೆ ಕ್ರಮವಹಿಸಲು ಆಯಾ ತಾಲೂಕಿನ ತಹಶೀಲ್ದಾರಗಳಿಗೆ ಸೂಚನೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ