ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : ಗ್ರಾಮಸ್ಥರಿಗೆ ಭಾರೀ ನಿರೀಕ್ಷೆ
Team Udayavani, Mar 19, 2021, 5:00 AM IST
ವಿಟ್ಲ: ದ.ಕ.ಜಿಲ್ಲಾ ಧಿಕಾರಿ ರಾಜೇಂದ್ರ ಅವರು ಮಾ.20ರಂದು ವಿಟ್ಲಪಟ್ನೂರು ಗ್ರಾಮದ ಕೊಡಂಗಾಯಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಬೆಳಗ್ಗೆ ಗಂಟೆ 11ರಿಂದ ಸಂಜೆ ಗಂಟೆ 5.30ರ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. 34 ಇಲಾಖೆಗಳ ಅಧಿಕಾರಿಗಳು ಆಗಮಿಸಲಿದ್ದು 8 ಸ್ಟಾಲ್ಗಳನ್ನು ಹಾಕಲಾಗುತ್ತದೆ. ಕೆಲ ವೊಂದು ಸಮಸ್ಯೆಗಳು ಸ್ಥಳದಲ್ಲೇ ಇತ್ಯರ್ಥ ವಾಗಲಿದ್ದು, ಮತ್ತೆ ಕೆಲವು ಹಂತ ಹಂತವಾಗಿ ಪೂರ್ಣಗೊಳ್ಳಲಿದೆ. ಗಣಕಯಂತ್ರಗಳನ್ನು ಬಳಸಿ, ಸ್ಥಳೀಯ ಗ್ರಾಮಸ್ಥರ ಸಮಸ್ಯೆ ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದು ಪರಿಣಾಮಕಾರಿಯಾಗಬಹುದು ಮತ್ತು ಈ ಎಲ್ಲ ವಿಚಾರಗಳು ಗ್ರಾಮಸ್ಥರ ಕುತೂಹಲಕ್ಕೆ ಕಾರಣವಾಗಿದ್ದು ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.
ಅರಣ್ಯ ಇಲಾಖೆಯ ವ್ಯಾಪ್ತಿಯ ಕೋಟಿಮೂಲೆಯಲ್ಲಿ 9 ಮಂದಿಗೆ ಹಕ್ಕುಪತ್ರ ವಿತರಣೆಯಾಗದೆ ಇರುವ ಸಮಸ್ಯೆ ಪರಿಹಾರವಾಗಬಹುದೆಂಬ ನಿರೀಕ್ಷೆಯನ್ನಿಡಲಾಗಿದೆ.
ಗ್ರಾಮದ ಗಡಿ ಭಾಗದಿಂದ 3 ಕಿಮೀ ದೂರದಕೃಷಿಕರಿಗೆ ಕುಮ್ಕಿ ಹಕ್ಕು ಸಕ್ರಮವಾಗುತ್ತಿಲ್ಲ. ಶೇ.90 ರಷ್ಟು ಫಲಾನುಭವಿಗಳು ಈ ಹಕ್ಕಿನಿಂದ ವಂಚಿತರಾಗಿದ್ದಾರೆ. ಈ ಸಮಸ್ಯೆ ನಿವಾರಣೆಯಾಗಬಹುದೆಂಬ ನಿರೀಕ್ಷೆಯೂ ಇದೆ. ಬಿಎಸ್ಸೆನ್ನೆಲ್ ಅಥವಾ ಇನ್ನಾವುದೇ ನೆಟÌರ್ಕ್ ಸಿಗ್ನಲ್ ಸರಿಯಿಲ್ಲದೇ ಗ್ರಾಮಸ್ಥರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ.
ವಿದ್ಯುತ್ ಕಡಿತ, ಅಪಾಯಕಾರಿ ವಿದ್ಯುತ್ ಕಂಬಗಳ ಬದಲಾವಣೆ ಇತ್ಯಾದಿ ಸಂಕಷ್ಟಕ್ಕೆ ಪರಿಹಾರ ಸಿಕ್ಕಿಲ್ಲ.
ಆಧಾರ ಸಮಸ್ಯೆ
ಆಧಾರ್ ಕಾರ್ಡ್ ಸಿಗದಿರುವವರಿಗೆ ಒದಗಿಸುವ ವ್ಯವಸ್ಥೆಯಾಗಬಹುದು. ಪಡಿತರ ಚೀಟಿ, ನ್ಯಾಯಬೆಲೆ ಅಂಗಡಿ ಯಲ್ಲಿ ಪಡಿತರ ಸಾಮಗ್ರಿ ವಿತರಣೆಯನ್ನು ಸಮರ್ಪಕವಾಗಿಸುವ ನಿಟ್ಟಿನಲ್ಲಿ ಪ್ರಯೋಜನ ವಾಗಬಹುದೆಂಬ ನಿರೀಕ್ಷೆಯಿದೆ.
ತೀರಾ ಗ್ರಾಮೀಣ ಭಾಗದಲ್ಲಿ ರಸ್ತೆ, ನೀರು ಇತ್ಯಾದಿ ಮೂಲಭೂತ ಆವಶ್ಯಕತೆಗಳನ್ನು ಒದಗಿಸಲು ಸೂಕ್ತ ಕ್ರಕೈಗೊಳ್ಳಲು ಜಿಲ್ಲಾಧಿಕಾರಿ ಕ್ರಮಕೈಗೊಳ್ಳುವ ಬಗ್ಗೆ ಜನತೆ ನಿರೀಕ್ಷೆಯನ್ನಿಟ್ಟುಕೊಂಡಿದೆ. ಇದಲ್ಲದೇ ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಇತ್ಯಾದಿ ಅನುಕೂಲಗಳನ್ನು ಸ್ಥಳದಲ್ಲೇ ನೀಡುವ ಸಾಧ್ಯತೆಯಿದೆ.
ವಿಸ್ತೃತ ರೂಪ
ಹಿಂದೆ ಕಂದಾಯ ಅದಾಲತ್ ನಡೆಯುತ್ತಿತ್ತು. ಅದರ ವಿಸ್ತೃತ ರೂಪವಾಗಿರುವ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯವು ನಾಗರಿಕರ ಮನೆಬಾಗಿಲಿಗೆ ತಲುಪುವಂತಾಗಿದೆ. ಅದರ ಸ್ವರೂಪ ಇನ್ನಷ್ಟು ಗಟ್ಟಿಯಾಗಬೇಕಿತ್ತು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ