ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್‌ನಾರಾಯಣ


Team Udayavani, Jan 25, 2021, 9:10 PM IST

ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್‌ನಾರಾಯಣ

ಮಂಡ್ಯ: ನಮಗೆ ಸಚಿವ ಸ್ಥಾನ ಎಂಬ ದೊಡ್ಡ ಜವಾಬ್ದಾರಿ ಸಿಕ್ಕ ಮೇಲೆ ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿ, ಅದರಲ್ಲಿ ಯಶಸ್ಸು ಸಾಧಿಸಬೇಕು. ಸಮರ್ಥವಾಗಿ ಕೆಲಸ ಮಾಡಿ ಎಲ್ಲರಿಗೂ ನಾವು ಮಾದರಿಯಾದಾಗ ಮಾತ್ರ ನಮ್ಮ ಮೇಲಿನ ಭರವಸೆ ದುಪ್ಪಟ್ಟಾಗುವುದು ಎಂದು ಹೇಳುವ ಮೂಲಕ ಖಾತೆ ಅಸಮಾಧಾನಿತ ಸಚಿವರಿಗೆ ಉಪಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ ಸಲಹೆ ನೀಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮಂಡ್ಯದವರೇ ಆದ ಕೆ.ಎನ್.ನಾಗೇಗೌಡ ಪಶುಸಂಗೋಪನಾ ಮಂತ್ರಿಯಾಗುವವರೆಗೂ ಆ ಖಾತೆಗೆ ಯಾವುದೇ ಮಹತ್ವವೇ ಇರಲಿಲ್ಲ. ಆದರೆ ಪಶುಸಂಗೋಪನಾ ಇಲಾಖೆಯಲ್ಲಿ ಕ್ರಾಂತಿ ಮಾಡಿದ ನಾಗೇಗೌಡರು ಮಹತ್ವದ ಕೆಲಸಗಳನ್ನು ಮಾಡಿ, ಆ ಖಾತೆ ಪ್ರಭಾವಿ ಖಾತೆಯಾಗುವ ಹಾಗೆ ಮಾಡಿದರು ಎಂದು ಸ್ಮರಿಸಿಕೊಂಡರು.

ಅಧಿಕಾರದ ಸಮರ್ಪಕ ಬಳಕೆಯಾಗಬೇಕು:
ಯಾರೇ ಆದರೂ ಅಧಿಕಾರ ಪಡೆಯುವುದು ಮುಖ್ಯವಲ್ಲ. ಪಡೆದ ಅಧಿಕಾರದಿಂದ ಸಮರ್ಪಕ ಕೆಲಸ ಮಾಡುವುದು ಅತಿಮುಖ್ಯವಾಗಿರುತ್ತದೆ. ಮಂಡ್ಯ ಜಿಲ್ಲೆಯ ಬೇಸಾಯಕ್ಕೆ ಹೆಸರಾದ ಜಿಲ್ಲೆ. ಬೇಸಾಯದಲ್ಲೂ ನಮ್ಮ ರೈತರು ಆಧುನಿಕತೆಯನ್ನು ಮೈಗೂಡಿಸಿಕೊಂಡು ಸಮಗ್ರ ಬೆಳೆ ಬೆಳೆದು ಅಧಿಕ ಲಾಭ ಪಡೆಯಬೇಕೆಂದು ತಿಳಿಸಿದರು.

ಇದನ್ನೂ ಓದಿ:ಹುಣಸೋಡು ಸ್ಫೋಟ ಪ್ರಕರಣ :ಕಲ್ಲುಕ್ವಾರಿ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು

ವೈಜ್ಞಾನಿಕ ವರ್ಗಾವಣೆಗೆ ಹೊಸ ಕಾನೂನು:
ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಬಹಳಷ್ಟು ಶಿಸ್ತು, ಸಂಯಮವನ್ನು ಮೈಗೂಡಿಸಿಕೊಂಡಿದ್ದು, ಪಾರದರ್ಶಕವಾಗಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದೆ. ಅಧಿಕಾರಿಗಳ ವೈಜ್ಞಾನಿಕ ವರ್ಗಾವಣೆಗೆ ಹೊಸ ಕಾನೂನು ತರಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಕೆ.ಆರ್.ಪೇಟೆ ಗೆಲುವು ಹುರುಪು ತಂದಿದೆ:
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ಗೆಲುವು ನಮಗೆ ಮತ್ತು ನಮ್ಮ ಕಾರ್ಯಕರ್ತರಿಗೆ ಹೊಸ ಹುರುಪು ತಂದಿದೆ. ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿ ಗೆದ್ದಿತ್ತು. ಆದರೆ ಮಂಡ್ಯದಲ್ಲಿ ಮಾತ್ರ ಖಾತೆಯನ್ನೇ ತೆರೆದಿರಲಿಲ್ಲ. ಆದರೆ ಅದು ಹುಸಿಯಾಗಿ ನಾವು ದಿಗ್ವಿಜಯ ಸಾಧಿಸಿದ್ದೇವೆ. ಈ ಗೆಲುವು ಜಿಲ್ಲಾದ್ಯಂತ ವಿಸ್ತಾರಗೊಳ್ಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನಾರಾಯಣಗೌಡರಿಂದ ಹೊಸ ನಾಯಕತ್ವ:
ಮಂಡ್ಯ ಜಿಲ್ಲೆಯ ಬಿಜೆಪಿಗೆ ಕೆ.ಸಿ.ನಾರಾಯಣಗೌಡರು ಸಚಿವರಾಗುವ ಮೂಲಕ ಹೊಸ ನಾಯಕತ್ವ ಸಿಕ್ಕಂತಾಗಿದೆ. ಅವರು ಮಂತ್ರಿಯಾಗಿ ಮೂರು ಖಾತೆಯ ಜವಾಬ್ದಾರಿಯನ್ನು ಹೊತ್ತಿದ್ದರು. ಮೂರು ಖಾತೆಯಲ್ಲೂ ಮಹತ್ವದ ಕೆಲಸ ಮಾಡುವ ಮೂಲಕ ಜಿಲ್ಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ನಾನು ಮಂಡ್ಯ ಜಿಲ್ಲೆಯ ಮೊಮ್ಮಗನಾಗಿದ್ದು, ಜಿಲ್ಲೆಯ ಒಡನಾಟ ಸಾಕಷ್ಟಿದೆ. ಮಂಡ್ಯ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾನು ಎಲ್ಲಾ ರೀತಿಯ ಸಹಕಾರ ನೀಡಲು ಕಟಿಬದ್ಧನಾಗಿದ್ದೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುoಡೇಗೌಡ, ಮೈಷುಗರ್ ಅಧ್ಯಕ್ಷ ಶಿವಲಿಂಗಯ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್, ಮುಖಂಡರಾದ ಸಿದ್ದರಾಮಯ್ಯ, ನಾಗಣ್ಣಗೌಡ, ಅಶೋಕ್, ಶ್ರೀಧರ್ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.