ಮುಷ್ಕರ ವಿಚಾರದಲ್ಲಿ ರಾಜಕೀಯ ಬೇಡ : ವಿರೋಧ ಪಕ್ಷಗಳಿಗೆ ಡಿಸಿಎಂ ಕಿವಿಮಾತು
Team Udayavani, Apr 10, 2021, 7:48 PM IST
ಬೆಂಗಳೂರು : ಮುಷ್ಕರ ನಿರತ ಸಾರಿಗೆ ನೌಕರರಿಗೆ ತಿಳಿವಳಿಕೆ ನೀಡಿ ಅವರನ್ನು ತಕ್ಷಣ ಕರ್ತವ್ಯಕ್ಕೆ ಮರಳುವಂತೆ ಮನವೊಲಿಸುವುದನ್ನು ಬಿಟ್ಟು ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕಾಂಗ್ರೆಸ್ ಮುಖಂಡರು ನಮ್ಮ ಸರ್ಕಾರದ ಮೇಲೆಯೇ ಗೂಬೆ ಕೂರಿಸಿ ರಾಜಕೀಯ ಲಾಭಗಳಿಸಿಕೊಳ್ಳುವ ಹುನ್ನಾರ ನಡೆಸುತ್ತಿರುವುದು ದುರ್ದೈವದ ಬೆಳವಣಿಗೆ ಎಂದು ಉಪಮುಖ್ಯಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ವಿಷಾದ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು 6ನೇ ವೇತನದ ಆಯೋಗದ ಶಿಫಾರಸ್ಸುಗಳನ್ನು ಸಾರಿಗೆ ನೌಕರರಿಗೆ ಅನ್ವಯಿಸಬೇಕು ಎಂದು ಈಗ ಮೊಸಳೆ ಕಣ್ಣೀರು ಸುರಿಸುವ ವಿರೋಧ ಪಕ್ಷಗಳು, ಹಿಂದೆ ತಾವೇ ಅಧಿಕಾರದಲ್ಲಿದ್ದಾಗ ವೇತನ ಆಯೋಗದ ಶಿಫಾರಸ್ಸುಗಳಂತೆ ಎಂದಾದರೂ ನಮ್ಮ ಸಾರಿಗೆ ನೌಕರರಿಗೆವೇತನಗಳನ್ನು ನೀಡಿದ ಇತಿಹಾಸವಿದೆಯೇ? ಹಿಂದೆ ಹಲವು ದಶಕಗಳ ಕಾಲ ಆಡಳಿತ ನಡೆಸಿದ ಇದೇ ವಿರೋಧ ಪಕ್ಷಗಳು ಎಂದಾದರೂ ಸಾರಿಗೆ ನಿಗಮಗಳ ನೌಕರರಿಗೆ ವೇತನ ಆಯೋಗದ ಶಿಫಾರಸ್ಸುಗಳ ಪ್ರಕಾರ ಸಂಬಳ ನೀಡಿದ ದಾಖಲೆ ಇದೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ :ಅಚ್ಚುಕಟ್ಟು ಪ್ರದೇಶದ ಗ್ರಾಮಗಳ ನೀರಾವರಿಗೆ ಮೊದಲು ಆದ್ಯತೆ ನೀಡಬೇಕು :ಪ್ರತಾಪ್ಚಂದ್ರ ಶೆಟ್ಟಿ
ಲಾಕ್ಡೌನ್ ಸಂಕಷ್ಟದಿಂದಾಗಿ ಸಾರಿಗೆ ನೌಕರರಿಗೆ ಸಂಬಳ ನೀಡುವುದಕ್ಕೂ ಕಷ್ಟವಾದಾಗ ನಮ್ಮ ಮುಖ್ಯಮಂತ್ರಿಗಳು ಸುಮಾರು 2 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಸರ್ಕಾರದಿಂದ ನಾಲ್ಕೂ ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದ್ದು ಒಂದು ದಾಖಲೆಯಾಗಿದೆ.ಕೇವಲ ಒಂದೇ ವರ್ಷದಲ್ಲಿ ಇಷ್ಟೊಂದು ಬೃಹತ್ ಮೊತ್ತವನ್ನು ಹಿಂದೆ ಯಾವುದೇ ಸರ್ಕಾರವೂ ಸಾರಿಗೆ ನಿಗಮಗಳಿಗೆ ನೀಡಿದ ನಿದರ್ಶನಗಳಿಲ್ಲ. ಈ ಬಗ್ಗೆ ವಿರೋಧ ಪಕ್ಷದವರೇ ಅತ್ಮಾವಲೋಕನ ಮಾಡಿಕೊಂಡು ಮಾತನಾಡಿದರೆ ಒಳ್ಳೆಯದು. ಸಾರಿಗೆಯಂತಹ ಸಾರ್ವಜನಿಕ ಹಿತದೃಷ್ಟಿಯ ವಿಷಯಗಳಲ್ಲಿ ಯಾರೂ ರಾಜಕೀಯ ಬೆರೆಸಬಾರದು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…