ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ

ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು

Team Udayavani, Mar 16, 2021, 9:04 PM IST

vcvcvbhdfgh

ಶಬರಿಮಲೆ : ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿಕೊಂಡರು.

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ಸೇರಿಕೊಂಡರು. ಅದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದ ಅವರು ತದ ನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ:

ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ಶ್ರೀ ರಾಜಶೇಖರ ಪೆರುಮಾಳ್‌ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ಪಡೆದರು ಡಿಸಿಎಂ.

ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ  ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ‌ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.