ಕಾಪು ಪಡು ಬೀಚ್ನಲ್ಲಿ ಶವ ಪತ್ತೆ
Team Udayavani, Sep 21, 2021, 7:08 PM IST
ಕಾಪು : ಹೆಜಮಾಡಿಯಲ್ಲಿ ಸಮುದ್ರ ಪಾಲಾಗಿರುವ ಸಂತೋಷ್ ಪೂಜಾರಿ (40) ಎಂಬಾತನ ಮೃತದೇಹವು ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಮುದ್ರ ಕಿನಾರೆಯಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ.
ಸಮುದ್ರದಲ್ಲಿ ಅಪರಿಚಿತ ಶವವೊಂದು ತೇಲಿ ಬರುತ್ತಿರುವ ಬಗ್ಗೆ ಸ್ಥಳೀಯರಿಗೆ ದೊರಕಿದ ಮಾಹಿತಿಯ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿ ಕಾಪು ಪುರಸಭೆಯ ವಾಹನ ಚಾಲಕ ನಿತೇಶ್ ಕುಮಾರ್ ಅವರು ಶವವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಸೂರಿ ಶೆಟ್ಟಿ ಅವರ ನೇತೃತ್ವದಲ್ಲಿ ಶವವನ್ನು ಉಡುಪಿ ಶವಾಗಾರಕ್ಕೆ ಸಾಗಿಸಲಾಗಿದೆ.
ಬಳಿಕ ಕಾಪು ಬೀಚ್ನ ಲೈಫ್ಗಾರ್ಡ್ ಚಂದ್ರಶೇಖರ್ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಕಾಪು ಎಸ್ಸೈ ರಾಘವೇಂದ್ರ ಸಿ., ಎಎಸ್ಸೈ ಗಳಾದ ರಾಜೇಂದ್ರ ಮಣಿಯಾಣಿ, ಗೋಪಾಲ ಶೆಟ್ಟಿಗಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿವಾಹಿತನಾಗಿರುವ ಸಂತೋಷ್ ಪೂಜಾರಿ ಹೆಜಮಾಡಿ ಪೇಟೆಯಲ್ಲಿ ಸೈಕಲ್ ಅಂಗಡಿ ನಡೆಸುತ್ತಿದ್ದು ಸಾವಿಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು 818 ಹೊಸ ಪ್ರಕರಣ | 1414 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ