ಮೀಸಲಾತಿ ಬೇಡಿಕೆಗೆ ಗಡುವು ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ್
Team Udayavani, Jan 6, 2023, 10:30 PM IST
ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ನೀಡಿರುವ 24 ಗಂಟೆ ಗಡುವು ವಾಪಸ್ ಪಡೆಯಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಸಮುದಾಯಕ್ಕೆ ಮೀಸಲಾತಿ ಸಂಬಂಧ ಸದ್ಯದಲ್ಲಿಯೇ ಸಿಹಿ ಸುದ್ದಿ ಸಿಗಲಿದೆ. ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಮಧ್ಯಂತರ ವರದಿ ಕೊಡಲಾಗಿದೆ. ಸ್ವಾಮೀಜಿಗಳು 24 ಗಂಟೆ ಗಡುವು ಕೊಟ್ಟಿದ್ದು ಸರಿಯಲ್ಲ. ಮೀಸಲಾತಿ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಭಾವನಾತ್ಮಕವಾಗಿ ಮಾತಾಡಿದ್ದಾರೆ. ನಂತರ ಹೋರಾಟಗಾರರನ್ನು ಭೇಟಿ ಮಾಡಿ ಸಂಪುಟದ ನಿರ್ಧಾರ ತಿಳಿಸಲಾಗಿದೆ. ಸಮುದಾಯಕ್ಕೆ ಕಾನೂನಾತ್ಮಕ ಮೀಸಲಾತಿ ಕೊಡೋದು ಮುಖ್ಯಮಂತ್ರಿಗಳ ಉದ್ದೇಶ. 2ಎ ಗೆ ಸೇರಿಸಬಾರದು ಅನ್ನುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
24 ಗಂಟೆಯೊಳಗೆ ಯಾವುದೇ ತೀರ್ಮಾನ ಕೈಗೊಳ್ಳಲು ಆಗಲ್ಲ. ಸ್ವಾಮೀಜಿಗಳು, ಹೋರಾಟಗಾರರು ಸರ್ಕಾರದ ಜತೆ ಚರ್ಚೆ ಮಾಡೋಣ. ಮುಖ್ಯಮಂತ್ರಿಗಳ ಜತೆ ಸಮಯ ನಿಗದಿ ಮಾಡುತ್ತೇವೆ. ಮೀಸಲಾತಿ ವಿಚಾರದಲ್ಲಿ ಸರಿಯಾದ ಮಾರ್ಗದಲ್ಲಿ ಸರ್ಕಾರ ಸಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ