ಬಿಜೆಪಿ ಪ್ರಣಾಳಿಕೆ ಆಧರಿಸಿ ಎಸಿಬಿ ಕುರಿತು ತೀರ್ಮಾನ: ಸಿಎಂ ಬೊಮ್ಮಾಯಿ
Team Udayavani, Aug 12, 2022, 12:05 PM IST
ಬೆಂಗಳೂರು: ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಹೈಕೋರ್ಟ್ ಆದೇಶ ಆಧರಿಸಿ ಏನು ತೀರ್ಮಾನ ತೆಗೆದುಕೊಳ್ಳಬೇಕೋ, ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.
ನಿನ್ನೆ ಹೈಕೋರ್ಟ್ ನಲ್ಲಿ ಎಸಿಬಿ ಬಗ್ಗೆ ತೀರ್ಮಾನವಾಗಿದೆ. ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು, ಹೈಕೋರ್ಟ್ ಆದೇಶ ಕೊಟ್ಟಿರೋದನ್ನು ಗಮನಿಸಿದ್ದೇನೆ. ನಮ್ಮ ಪಕ್ಷದ ಪ್ರಣಾಳಿಕೆ ಮೂಲ ಪ್ರತಿ ತೆಗೆದುಕೊಂಡು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಪ್ರಣಾಳಿಕೆ ತೆಗೆದುಕೊಂಡು ಏನೆಲ್ಲಾ ಮಾಡಬಹುದು ತೀರ್ಮಾನ ಮಾಡುತ್ತೇವೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಎಸಿಬಿ ರದ್ದು ಮಾಡಲಾಗಿತ್ತು ಎಂದು ತಿಳಿಸಿದರು.