ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !


Team Udayavani, Apr 18, 2021, 6:55 AM IST

ಟೀಕಿಸಿದ ಕ್ರಿಕೆಟ್‌ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್‌ ಚಹರ್ !

ಮುಂಬಯಿ: ಚೆನ್ನೈ ತಂಡದ ಮಧ್ಯಮ ವೇಗಿ ದೀಪಕ್‌ ಚಹರ್‌ ತಮ್ಮ ಪಂದ್ಯಶ್ರೇಷ್ಠ ಗೌರವವನ್ನು ಟೀಕಿಸಿದ ಕ್ರಿಕೆಟ್‌ ಅಭಿಮಾನಿಯೊಬ್ಬರಿಗೆ ಅರ್ಪಿಸಿದ್ದಾರೆ!

ಶುಕ್ರವಾರದ ಪಂದ್ಯದಲ್ಲಿ ಚಹರ್‌ 13ಕ್ಕೆ 4 ವಿಕೆಟ್‌ ಉಡಾಯಿಸಿ ಪಂಜಾಬ್‌ ತಂಡವನ್ನು ಅಲ್ಪ ಮೊತ್ತಕ್ಕೆ ಕುಸಿಯುವಂತೆ ಮಾಡಿದ್ದರು. ಇದರಲ್ಲಿ 3 ವಿಕೆಟ್‌ಗಳನ್ನು ಪವರ್‌ ಪ್ಲೇ ಆವಧಿಯಲ್ಲೇ ಉಡಾಯಿಸಿದ್ದರು. ಅಗರ್ವಾಲ್‌, ಗೇಲ್‌ ಮತ್ತು ಪೂರಣ್‌ ಅವರ ಬಿಗ್‌ ವಿಕೆಟ್‌ ಇದರಲ್ಲಿ ಸೇರಿತ್ತು. ಒಂದು ಮೇಡನ್‌ ಓವರ್‌ ಸೇರಿದಂತೆ ಒಟ್ಟು 18 ಡಾಟ್‌ ಬಾಲ್‌ ಎಸೆದದ್ದು ಚಹರ್‌ ಸಾಧನೆ.

ಪಂದ್ಯದ ಬಳಿಕ ತಂಡದ ಸಹ ಆಟಗಾರ ಶಾರ್ದೂಲ್‌ ಠಾಕೂರ್‌ ಜತೆ ನಡೆಸಿದ ಚಾಟ್‌ ಶೋ ಒಂದರ ವೇಳೆ ದೀಪಕ್‌ ಚಹರ್‌ ಸ್ವಾರಸ್ಯಕರ ಘಟನೆಯೊಂದನ್ನು ಹೇಳಿದರು.

ಸಾಮಾನ್ಯವಾಗಿ ಚಹರ್‌ ಕ್ರಿಕೆಟ್‌ ಅಭಿಮಾನಿಗಳು ಕಳುಹಿಸುವ ಪ್ರತಿಯೊಂದು ಸಂದೇಶವನ್ನೂ ಓದುತ್ತಾರೆ. ಡೆಲ್ಲಿ ಎದುರಿನ ಮೊದಲ ಪಂದ್ಯದಲ್ಲಿ ವಿಕೆಟ್‌ ಉರುಳಿಸಲು ವಿಫ‌ಲರಾದಾಗ ಅಭಿಮಾನಿಯೊಬ್ಬ ವ್ಯಂಗ್ಯ ಧಾಟಿಯಲ್ಲಿ ಮೆಸೇಜ್‌ ಹಾಕಿದ್ದ.

“ನೀವು ಅತ್ಯುತ್ತಮ ಬೌಲರ್‌ ನಿಜ. ಆದರೆ ನನ್ನ ಕೋರಿಕೆ ಏನೆಂದರೆ, ದಯವಿಟ್ಟು ನೀವು ಮುಂದಿನ ಪಂದ್ಯದಲ್ಲಿ ಆಡಬೇಡಿ’ ಎಂದಿದ್ದ. ಚಹರ್‌ ಈ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವವನ್ನು ಅರ್ಪಿಸಿದ್ದಾರೆ!

“ಒಬ್ಬ ಆಟಗಾರನ ವೈಫ‌ಲ್ಯವನ್ನು ಟೀಕಿಸುವ ಬದಲು ಆತನನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು’ ಎಂದೂ ದೀಪಕ್‌ ಚಹರ್‌ ಈ ಸಂದರ್ಭದಲ್ಲಿ ವಿನಂತಿಸಿಕೊಂಡರು.

ಕಪ್ತಾನ ಧೋನಿ ಪ್ರಶಂಸೆ
ದೀಪಕ್‌ ಚಹರ್‌ ಸಾಧನೆಯನ್ನು ನಾಯಕ ಎಂ.ಎಸ್‌. ಧೋನಿ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. “ಚಹರ್‌ ಅತ್ಯುತ್ತಮ ಡೆತ್‌ ಓವರ್‌ ಬೌಲರ್‌ ಆಗಿ ರೂಪುಗೊಳ್ಳುತ್ತಿದ್ದಾರೆ. ಆದರೆ ಇಲ್ಲಿ ಅವರಿಗೆ ಪಿಚ್‌ ಬಹಳ ಸಹಕರಿಸುತ್ತಿದ್ದುದರಿಂದ ಆರಂಭದಲ್ಲೇ ಸತತ 4 ಓವರ್‌ ನೀಡಲು ನಿರ್ಧರಿಸಲಾಯಿತು. ಚಹರ್‌ ಇದರ ಭರಪೂರ ಲಾಭವೆತ್ತಿದರು’ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.