ಕೋವಿಡ್: ಈ ಬಾರಿಯ ದೀಪಾವಳಿಗೆ ಪಟಾಕಿ ನಿಷೇಧವಾಗುತ್ತಾ? ಅಧಿಕಾರಿಗಳು ಏನು ಹೇಳುತ್ತಾರೆ
Team Udayavani, Nov 4, 2020, 7:19 PM IST
ಬೆಂಗಳುರು: ಕೋವಿಡ್ ಹಿನ್ನೆಲೆಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದಕ್ಕೆ ಅನುಮತಿ ನೀಡುವ ಅಥವಾ ನಿಷೇಧಿಸುವ ಸಂಬಂಧ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಪಟಾಕಿ ವಿಚಾರದಲ್ಲಿ ಕೆಲವು ರಾಜ್ಯಗಳಲ್ಲಿ ಈ ಕುರಿತು ಕೈಗೊಂಡಿರುವ ಕ್ರಮ ಗಮನದಲ್ಲಿಟ್ಟುಕೊಂಡು ಇಲ್ಲಿಯೂ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ದೀಪಾವಳಿ ಆಚರಣೆಗೆ ಸಂಬಂಧಿಸಿದಂತೆ ವರದಿ ನೀಡಲು ತಜ್ಞರಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು. ದೀಪಾವಳಿ ಸಮಯದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಮಾಲಿನ್ಯ ಅದರಿಂದ ಕೊರೊನಾ ಸೋಂಕಿತರ ಮೇಲೆ ಆಗುವ ಪರಿಣಾಮ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ತಿಳಿಸಲಾಗಿದೆ ಎಂದು ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಹಬ್ಬಗಳನ್ನು ಸರಳ ಹಾಗೂ ಸಂಪ್ರದಾಯವಾಗಿ ಆಚರಿಸಬೇಕು. ನಮಗೆ ಜನರ ಜೀವ ಹಾಗೂ ಸುರಕ್ಷತೆ ಮುಖ್ಯ ಎಂದು ಹೇಳಿದರು.
ಇದನ್ನೂ ಓದಿ:ನಿವೃತ್ತ ಸೇನಾಧಿಕಾರಿ ಮೇಲೆ ಕಾಡಾನೆ ದಾಳಿ : ಕರ್ನಲ್ ಮುತ್ತಣ್ಣ ಮೈಸೂರು ಆಸ್ಪತ್ರೆಗೆ ದಾಖಲು
ಶಾಲೆಗಳ ಆರಂಭ ಸಂಬಂಧ ಆರೋಗ್ಯ ಇಲಾಖೆಯ ಅಭಿಪ್ರಾಯ ಸಹ ಕೇಳಲಾಗಿದೆ. ಶಿಕ್ಷಣ ಸಚಿವರ ಜತೆ ಈ ಕುರಿತು ಸಮಾಲೋಚನೆ ನಡೆಸಲಾಗುವುದು. ಎರಡೂ ಇಲಾಖೆ ಅಧಿಕಾರಿಗಳ ಸಭೆಯೂ ನಡೆಯಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್