ರಕ್ಷಣ ಇಲಾಖೆಯ ಸಮುಚಿತ ನಿರ್ಧಾರ ಆತ್ಮನಿರ್ಭರತೆಯ ಹಾದಿಯಲ್ಲಿ


Team Udayavani, Aug 10, 2020, 11:49 AM IST

ರಕ್ಷಣ ಇಲಾಖೆಯ ಸಮುಚಿತ ನಿರ್ಧಾರ ಆತ್ಮನಿರ್ಭರತೆಯ ಹಾದಿಯಲ್ಲಿ

ಭಾರತವನ್ನು ಆತ್ಮನಿರ್ಭರತೆಯ ಹಾದಿಯಲ್ಲಿ ಕೊಂಡೊಯ್ಯುವ ವಿಚಾರದಲ್ಲಿ ಹಾಗೂ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆಯಿಡುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಈಗ ದೇಶದ ರಕ್ಷಣ ಕೈಗಾರಿಕೆ ಮತ್ತು ಉತ್ಪಾದನಾ ವಲಯಗಳಿಗೆ ಹೆಚ್ಚಿನ ಅವಕಾಶ ದೊರಕಿಸುವ ನಿಟ್ಟಿನಲ್ಲಿ ರಕ್ಷಣ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ವಿದೇಶಗಳಿಂದ 101 ರಕ್ಷಣ ಸಾಮಗ್ರಿಗಳ ಆಮದಿನ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿದೆ ರಕ್ಷಣ ಇಲಾಖೆ. ಈ ಪಟ್ಟಿಯಲ್ಲಿ ಕೇವಲ ಸರಳ ರಕ್ಷಣ ಪರಿಕರಗಳಷ್ಟೇ ಅಲ್ಲ, ಬದಲಾಗಿ ಫಿರಂಗಿ ಬಂದೂಕುಗಳು, ಸೋರ್ನಾ ಸಿಸ್ಟಮ್ಸ್ , ರಾಡಾರ್ಗಳು, ಸಾರಿಗೆ ವಿಮಾನ, ಶಸ್ತ್ರಾಸ್ತ್ರ ಗಳಿವೆ ಎನ್ನುವುದನ್ನು ಗಮನಿಸಬೇಕು. ಈ ವೇಳೆಯಲ್ಲೇ ಮುಂದಿನ 6-7 ವರ್ಷಗಳವರೆಗೆ ರಕ್ಷಣ ಇಲಾಖೆಯ 4 ಲಕ್ಷ ಕೋ. ರೂ. ಪ್ರಮಾಣದ ಕಾಂಟ್ರಾಕ್ಟರ್ ಗಳನ್ನು ಭಾರತೀಯ ಕಾರ್ಖಾನೆಗಳಿಗೆ ನೀಡಲು ಸರಕಾರ ನಿರ್ಧರಿಸಿದೆ.

ನಿಸ್ಸಂಶಯವಾಗಿಯೂ ಇದು ದಿಟ್ಟ ನಡೆಯೇ ಹೌದು. ಕೋವಿಡ್ -19 ಜಗತ್ತಿನಾದ್ಯಂತ ಸೃಷ್ಟಿಸಿರುವ ಆರ್ಥಿಕ ಆವಾಂತರವು, ಒಂದು ದೇಶ ಎಲ್ಲ ರೀತಿಯಿಂ ದಲೂ ಸ್ವಾವಲಂಬಿಯಾಗುವುದು ಎಷ್ಟು ಮುಖ್ಯ ಎನ್ನುವುದನ್ನು ಮನವರಿಕೆ ಮಾಡಿಕೊಡುತ್ತಿದೆ. ಉದಾಹರಣೆಗೆ, ಇಂದು ಚೀನವನ್ನೇ ಗಮನಿಸಿ. ಇಷ್ಟೆಲ್ಲ ಅವಾಂತರ ಸೃಷ್ಟಿಸಿದರೂ ಡ್ರ್ಯಾಗನ್‌ ರಾಷ್ಟ್ರ ಜಾಗತಿಕ ಒತ್ತಡಕ್ಕೆ ಮಣಿಯದೇ ತನ್ನ ಇಚ್ಛೆಯಂತೆ ತಾನು ನಡೆಯುತ್ತಿರುವುದರ ಹಿಂದೆ, ಅದರ ಸ್ವಾವಲಂಬನೆಯೇ ಮುಖ್ಯ ಅಂಶ ಎನ್ನುತ್ತಾರೆ ವಿತ್ತ ವಿಶ್ಲೇಷಕರು. ಈ ಕಾರಣಕ್ಕಾಗಿಯೇ, ಸ್ವಾವಲಂಬನೆ ಯಾ ಆತ್ಮನಿರ್ಭರತೆ ಎನ್ನುವುದು ದುರ್ಬಲವಾಗುತ್ತಿರುವ ದೇಶಗಳ ಆರ್ಥಿಕತೆಗಳಿಗೆ ದೀರ್ಘಾವಧಿ ಬಲ ತುಂಬಬಲ್ಲ ಇಂಧನವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ದೊಡ್ಡ ಮಟ್ಟದಲ್ಲೇ ಚಿಂತನೆ ನಡೆಸಿರುವುದು, ನಿಸ್ಸಂಶಯವಾಗಿಯೂ ಭವಿಷ್ಯದಲ್ಲಿ ಭಾರತಕ್ಕೆ ಬಲ ತರಲಿದೆ.

ರಕ್ಷಣ ಸಾಮಗ್ರಿಗಳ ವಿಚಾರಕ್ಕೇ ಬರುವುದಾದರೆ, ಭಾರತವು ಜಗತ್ತಿನಲ್ಲೇ ಎರಡನೇ ಅತಿದೊಡ್ಡ ರಕ್ಷಣ ಪರಿಕರಗಳ ಆಮದುದಾರ ದೇಶವಾಗಿದೆ. ಆದರೆ ಇನ್ನೊಂದೆಡೆ ಶಸ್ತ್ರಾಸ್ತ್ರ ರಫ್ತುದಾರ ದೇಶಗಳ ಪಟ್ಟಿಯಲ್ಲಿ ಅದು 23ನೇ ಸ್ಥಾನದಲ್ಲಿದೆ! ಈ ಕಾರಣಕ್ಕಾಗಿಯೇ, ರಕ್ಷಣ ಸಾಮಗ್ರಿಗಳ ಉತ್ಪಾದನ ಹಬ್‌ ಆಗುವ ನಿಟ್ಟಿನಲ್ಲಿ ಭಾರತ ಚಿಂತಿಸುವುದು ಒಳಿತು. ಈಗಾಗಲೇ ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿದ್ದು, 2025ರ ವೇಳೆಗೆ ಭಾರತದ ರಕ್ಷಣ ಉತ್ಪಾದನೆಯ ಪ್ರಮಾಣ 1.75 ಲಕ್ಷ ಕೋ. ರೂ. ತಲುಪುವ ನಿರೀಕ್ಷೆಯಿದೆ. ಒಟ್ಟಲ್ಲಿ ಆತ್ಮನಿರ್ಭರತೆಯ ಕನಸು ನನಸಾದಷ್ಟೂ ದೇಶ ಬಲಿಷ್ಠವಾಗುತ್ತಾ ಸಾಗುತ್ತದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.