ಎಲ್ ಎಸಿಯಲ್ಲಿ ಚೀನಾ ಕಳ್ಳಾಟ: ಜೂ.27ರಂದು ಲಡಾಖ್ ಗೆ ರಕ್ಷಣಾ ಸಚಿವ ಸಿಂಗ್ ಭೇಟಿ
ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ನಿರ್ಧರಿಸಲು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
Team Udayavani, Jun 26, 2021, 3:10 PM IST
ನವದೆಹಲಿ: ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ಭಾನುವಾರ (ಜೂನ್ 27) ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಗೆ ಭೇಟಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ಒಂದು ದಿನಕ್ಕಿಂತ ಹೆಚ್ಚು ಭೇಟಿ ನೀಡಲಿರುವ ಸಿಂಗ್ ಅವರು, ಬಿಆರ್ ಒ ಮೂಲಸೌಕರ್ಯ ಕಾರ್ಯಕ್ರಮಗಳ ಪರಿಶೀಲನೆ ಪ್ರಮುಖ ಭಾಗವಾಗಿದ್ದು, ಏತನ್ಮಧ್ಯೆ ವಾಸ್ತವ ನಿಯಂತ್ರಣ ರೇಖೆಯ ಭೇಟಿಯನ್ನು ತಳ್ಳಿಹಾಕುವಂತಿಲ್ಲ ಎಂದು ವರದಿ ವಿವರಿಸಿದೆ.
ಇದನ್ನೂ ಓದಿ:ಅಪಘಾತದಲ್ಲಿ ಗಾಯಗೊಂಡವರನ್ನು ಉಪಚರಿಸಿ ಮಾನವೀಯತೆ ಮೆರೆದ ಸಭಾಪತಿ ಹೊರಟ್ಟಿ
ಲಡಾಖ್ ನ ಆಯಕಟ್ಟಿನ ಸ್ಥಳವಾದ ಗೋಗ್ರಾ ಮತ್ತು ಬಿಸಿ ನೀರಿನ ಬುಗ್ಗೆಗಳಂತಹ ಪ್ರದೇಶಗಳಿಂದ ಚೀನಾ ಸೇನೆ ಇನ್ನೂ ತನ್ನ ಸೈನಿಕರನ್ನು ವಾಪಸ್ ಕರೆಯಿಸಿಕೊಳ್ಳದ ಕಾರಣ ಸಿಂಗ್ ಅವರು ಈ ಭೇಟಿ ನೀಡುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಚೀನಾ ಸೇನಾಪಡೆಗಳು ವಾಸ್ತವ ಗಡಿ ರೇಖೆ ಪ್ರದೇಶದಲ್ಲಿ ಠಿಕಾಣಿ ಹೂಡುವ ಮೂಲಕ ಉದ್ವಿಗ್ನ ಸ್ಥಿತಿಯನ್ನು ಮುಂದುವರಿಸಲು ಕಾರಣವಾಗಿತ್ತು. ಬಿಕ್ಕಟ್ಟಿನ ಪರಿಸ್ಥಿತಿಯನ್ನು ತಿಳಿಗೊಳಿಸಲು ನಿರಾಕರಿಸಿದ್ದ ಚೀನಾ ಕಳೆದ ವಾರ, ಉದ್ವಿಗ್ನ ಸ್ಥಿತಿಗೆ ಭಾರತ ಕಾರಣ ಎಂದು ದೂಷಿಸಿತ್ತು.
12ನೇ ಸುತ್ತಿನ ಮಿಲಿಟರಿ ಮಟ್ಟದ ಮಾತುಕತೆಯಲ್ಲಿ, ಕೇಂದ್ರ ವಿದೇಶಾಂಗ ಸಚಿವಾಲಯ, ಚಾಲ್ತಿಯಲ್ಲಿರುವ ದ್ವಿಪಕ್ಷೀಯ ಒಪ್ಪಂದ ಮತ್ತು ಪ್ರೋಟೊಕಾಲ್ ಪ್ರಕಾರ ಪಶ್ಚಿಮ ವಲಯದ ಎಲ್ ಎಸಿ ಸೇರಿದಂತೆ ಎಲ್ಲಾ ಆಯಕಟ್ಟಿನ ಸ್ಥಳಗಳಿಂದ ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ನಿರ್ಧರಿಸಲು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ