ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ಬಸ್ ಮೇಲೆ ಎಂಎನ್ ಎಸ್ ಕಾರ್ಯಕರ್ತರ ದಾಳಿ
ಮುಂಬಯಿಯಲ್ಲಿ ಪಂದ್ಯಾವಳಿಗೂ ಮುನ್ನ ಕಿರಿಕ್ ಆರಂಭ
Team Udayavani, Mar 16, 2022, 3:11 PM IST
ಮುಂಬಯಿ: ಐಪಿಎಲ್ ಪಂದ್ಯಗಳಿಗೆ ಆಟಗಾರರನ್ನು ಕರೆದೊಯ್ಯಲು ಬರುತ್ತಿದ್ದ ಪಂಚತಾರಾ ಹೋಟೆಲ್ನ ಹೊರಗೆ ನಿಲ್ಲಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಐಷಾರಾಮಿ ಬಸ್ ಗಾಜುಗಳನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಒಡೆದಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದಾಳಿ ಗಮನಕ್ಕೆ ಬಂದ ತಕ್ಷಣ ಕೊಲಾಬಾ ಠಾಣೆಯ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಿದೆ.
ರಾಜ್ ಠಾಕ್ರೆ ಅವರ ಎಂಎನ್ ಎಸ್ ಕಾರ್ಯಕರ್ತರ ಸಾರಿಗೆ ಘಟಕದ 12 ಕ್ಕೂ ಹೆಚ್ಚು ಜನರ ತಂಡ ದಾಳಿ ನಡೆಸಿ ಗಾಜನ್ನು ಒಡೆದು ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
Delhi Capital IPL team parked bus allegedly attacked#IPL2022pic.twitter.com/hzmdb60yXm
— Himalayan Guy (@RealHimalayaGuy) March 16, 2022
ಕೃತ್ಯ ನಡೆಸಿದ ಕಾರಣದ ಕುರಿತು ಪ್ರತಿಕ್ರಿಯೆ ನೀಡಿರುವ ಎಂಎನ್ ಎಸ್ ಸಾರಿಗೆ ಘಟಕದ ಅಧ್ಯಕ್ಷ ಸಂಜಯ್ ನಾಯ್ಕ್, ನಾವು ಈ ಹಿಂದೆಯೇ ಪ್ರತಿಭಟನೆ ನಡೆಸಿದ್ದೆವು, ಅದರ ಹೊರತಾಗಿಯೂ ಹೊರ ರಾಜ್ಯಗಳಿಂದ ಹಲವು ಬಸ್ ಗಳು ಮತ್ತು ಸಣ್ಣ ವಾಹನಗಳನ್ನು ಇಲ್ಲಿಗೆ ತರಲಾಗಿದೆ. ಇದು ಇಲ್ಲಿಯ ಮರಾಠಿ ಕೆಲಸಗಾರರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಡೆಲ್ಲಿ ತಂಡ ತಾಜ್ ಹೋಟೆಲ್ ನಲ್ಲಿ ಉಳಿದುಕೊಳ್ಳುತ್ತಿದ್ದು, ಘಟನೆಯ ಬಳಿಕ ಭದ್ರತೆ ಇನ್ನಷ್ಟು ಬಿಗಿ ಗೊಳಿಸಲಾಗಿದೆ. ಮಾರ್ಚ್ 26 ರಿಂದ ಪಂದ್ಯಾವಳಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ