ದೆಹಲಿ ನ್ಯಾಯಾಲಯದಿಂದ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ
Team Udayavani, Mar 31, 2023, 5:40 PM IST
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಆಪ್ ನಾಯಕ, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೀಶ್ ಸಿಸೋಡಿಯಾ ಇದನ್ನು ಪ್ರಶ್ನಿಸಿ ಮೇಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ನ್ಯಾಯಾಂಗ ಕಸ್ಟಡಿಯಲ್ಲಿದ್ದು ಎಪ್ರಿಲ್ 3ರ ಮೊದಲು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಾಗಿದೆ.
ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಿದರೆ ಅದು ನಮ್ಮ ತನಿಖೆಯನ್ನು ದುರ್ಬಲಗೊಳಿಸುತ್ತದೆ. ಏಕೆಂದರೆ ಅವರ ಪ್ರಭಾವ ಮತ್ತು ಹಸ್ತಕ್ಷೇಪ ಪ್ರಕರಣದ ಮೇಲೆ ಬೀಳುವ ಸಾಧ್ಯತೆಯಿದೆ ಎಂದು ಎಂದು ಅರ್ಜಿಯನ್ನು ವಿರೋಧಿಸಿರುವ ಸಿಬಿಐ ಹೇಳಿಕೆ ನೀಡಿದೆ.
ಕಳೆದ ಫೆ.26ರಂದು ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿತ್ತು.
ಇದನ್ನೂ ಓದಿ:ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್ಗೆ ದಂಡ ಹಾಕಿದ ಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ