ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ
ನಾನು ಭಗತ್ ಸಿಂಗ್ ಅನುಯಾಯಿ.....ಸುಳ್ಳು ಆರೋಪಗಳಿಂದ ಜೈಲಿಗೆ ಹೋಗುವುದು ಸಣ್ಣ ವಿಷಯ
Team Udayavani, Feb 26, 2023, 7:28 PM IST
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಸುದೀರ್ಘ ವಿಚಾರಣೆಯ ಬಳಿಕ ಬಂಧಿಸಿದೆ.
ವಿಚಾರಣೆಗೆ ಹಾಜರಾಗುವ ಗಂಟೆಗಳ ಮೊದಲು ಬೆಳಗ್ಗೆ 10 ಗಂಟೆಗೆ ತಮ್ಮ ಮನೆಯಿಂದ ಹೊರಟಾಗ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರೊಂದಿಗೆ ರೋಡ್ ಶೋ ಮತ್ತು ಭಾಷಣ ಮಾಡಿದ್ದರು.
ಭಿತ್ತಿಪತ್ರಗಳು ಮತ್ತು ಘೋಷಣೆಗಳ ನಡುವೆ, ಅವರು ತಮ್ಮ ಕಾರಿನ ಸನ್ರೂಫ್ ಮೇಲೆ ನಿಂತು ತಮ್ಮ ಬೆಂಬಲಿಗರತ್ತ ಕೈ ಬೀಸಿದರು. ಸಿಸೋಡಿಯಾ ಅವರು ಭಾಷಣ ಮಾಡುವ ಮೊದಲು ದೆಹಲಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದ್ದರು.
ಸಿಬಿಐ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಂಸದ ಸಂಜಯ್ ಸಿಂಗ್ ಮತ್ತು ಇತರ ಪಕ್ಷದ ನಾಯಕರನ್ನು ದೆಹಲಿ ಪೊಲೀಸರು 50ಕ್ಕೂ ಹೆಚ್ಚು ಎಎಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜೈಲಿಗೆ ಹೋಗುವುದು ಸಣ್ಣ ವಿಷಯ
ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಮನೀಶ್ ಸಿಸೋಡಿಯಾ, ಇದು ಸವಾಲಿನ ಸಮಯ ಎಂದು ಹೇಳಿದರು ಮತ್ತು ಜೈಲಿಗೆ ಹೋಗುವ ಭಯವಿಲ್ಲ ಎಂದು ಪುನರುಚ್ಚರಿಸಿದರು. ರಾಮ್ ಪ್ರಸಾದ್ ಬಿಸ್ಮಿಲ್ ಅವರ ಸರ್ಫರೋಷಿ ಕಿ ತಮನ್ನಾ ಎಂಬ ಅಮರ ಸಾಲುಗಳನ್ನು ಪಠಿಸಿ, ನಾನು ಯಾವಾಗಲೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ನಿರಂತರ ಬೆಂಬಲಕ್ಕಾಗಿ ನನ್ನ ಕುಟುಂಬಕ್ಕೆ ಧನ್ಯವಾದಗಳನ್ನು ಹೇಳುತ್ತೇನೆ” ಎಂದರು.
”ಇಂದು ಮತ್ತೆ ಸಿಬಿಐ ವಿಚಾರಣೆಗೆ ಹೋಗಲಿದ್ದು, ಸಂಪೂರ್ಣ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಲಕ್ಷಾಂತರ ಮಕ್ಕಳ ಪ್ರೀತಿ ಮತ್ತು ಕೋಟ್ಯಂತರ ದೇಶವಾಸಿಗಳ ಆಶೀರ್ವಾದ ನಮ್ಮೊಂದಿಗಿದೆ.ಒಂದಿಷ್ಟು ತಿಂಗಳು ಜೈಲಿನಲ್ಲಿ ಇರಬೇಕಾದರೂ ನನಗಿಷ್ಟ. ನಾನು ಭಗತ್ ಸಿಂಗ್ ನ ಅನುಯಾಯಿ, ದೇಶಕ್ಕಾಗಿ ಭಗತ್ ಸಿಂಗ್ ಗಲ್ಲಿಗೇರಿದ. ಇಂತಹ ಸುಳ್ಳು ಆರೋಪಗಳಿಂದ ಜೈಲಿಗೆ ಹೋಗುವುದು ಸಣ್ಣ ವಿಷಯ” ಎಂದು ಸಿಸೋಡಿಯಾ ಹೇಳಿದ್ದಾರೆ.
ಈ ಪ್ರದೇಶದಲ್ಲಿ ಸೆಕ್ಷನ್ 144 ಸಿಆರ್ಪಿಸಿ ವಿಧಿಸಲಾಗಿರುವುದರಿಂದ ಸ್ಥಳವನ್ನು ಖಾಲಿ ಮಾಡುವಂತೆ ಮನವಿ ಮಾಡಲಾಗಿತ್ತು ಆದರೆ ಅವರು ಕುಳಿತು ಘೋಷಣೆಗಳನ್ನು ಕೂಗಿದರು. ಎಎಪಿ ಸಂಸದ ಸಂಜಯ್ ಸಿಂಗ್, ದೆಹಲಿ ಸಚಿವ ಗೋಪಾಲ್ ರಾಯ್ ಸೇರಿದಂತೆ ಒಟ್ಟು 50 ಜನರನ್ನು (42 ಪುರುಷರು ಮತ್ತು 8 ಮಹಿಳೆಯರು) ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ