ದೆಹಲಿ ಅಬಕಾರಿ ನೀತಿ ಹಗರಣ: ಇಂದು CBI ಮುಂದೆ ಕೇಜ್ರಿವಾಲ್‌ ಹಾಜರ್‌

ಸುಳ್ಳು ಹೇಳುತ್ತಿರುವ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧವೇ ಮೊಕದ್ದಮೆ: ಕೇಜ್ರಿ

Team Udayavani, Apr 16, 2023, 6:54 AM IST

kejrival

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿರುವಂತೆಯೇ, ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಕ್ಷ ಕೆಂಡಕಾರಿದೆ. ಭಾನುವಾರ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿರುವ ಸಿಎಂ ಕೇಜ್ರಿವಾಲ್‌, ಶನಿವಾರ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಚಾಮಗೋಚರ ವಾಗ್ಧಾಳಿ ನಡೆಸಿದ್ದಾರೆ.

ಸುಳ್ಳು ಹೇಳುತ್ತಿರುವ, ನ್ಯಾಯಾಲಯಗಳಲ್ಲಿ ಸುಳ್ಳು ಸಾಕ್ಷ್ಯಗಳನ್ನು ಹಾಜರುಪಡಿಸುತ್ತಿರುವ ಸಿಬಿಐ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ಸೂಕ್ತ ಮೊಕದ್ದಮೆ ದಾಖಲಿಸುತ್ತೇವೆ ಎಂದು ಖಚಿತ ಸ್ವರದಲ್ಲಿ ಕೇಜ್ರಿವಾಲ್‌ ಹೇಳಿದ್ದಾರೆ.

ತಮ್ಮ ರಾಜಕೀಯ ಪ್ರತಿಸ್ಪರ್ಧಿಗಳನ್ನು ಟಾರ್ಗೆಟ್‌ ಮಾಡಲು ಪ್ರಧಾನಿ ಮೋದಿಯವರು ಸಿಬಿಐ ಮತ್ತು ಇ.ಡಿ.ಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನ್ಯಾಯಾಲಯಗಳಿಗೂ ಸುಳ್ಳುಗಳನ್ನೇ ಹೇಳಲಾಗುತ್ತಿದೆ. ಯಾರನ್ನೆಲ್ಲ ಬಂಧಿಸಲಾಗಿದೆಯೋ ಅವರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅವರ ವಿರುದ್ಧ ಒಂದೇ ಒಂದು ತುಣುಕು ಪುರಾವೆಯನ್ನು ಕೂಡ ಈವರೆಗೆ ಕೋರ್ಟ್‌ಗೆ ಸಲ್ಲಿಸಿಲ್ಲ ಎಂದು ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಕೇಜ್ರಿವಾಲ್‌ ಆರೋಪಗಳೇನು?
14 ಫೋಟೋಗಳನ್ನು ನಾಶಮಾಡಲಾಗಿದೆ ಎಂದು ತನಿಖಾ ಸಂಸ್ಥೆಗಳು ಕೋರ್ಟ್‌ಗಳಿಗೆ ಸುಳ್ಳೇ ಸುಳ್ಳು ಅಫಿಡವಿಟ್‌ಗಳನ್ನು ಸಲ್ಲಿಸುತ್ತಿವೆ. ಸುಳ್ಳನ್ನು ಒಪ್ಪಿಕೊಳ್ಳುವಂತೆ ಹಿಂಸಿಸಲಾಗುತ್ತಿದೆ. ಅಷ್ಟೇ ಅಲ್ಲ, “ನಾಳೆ ನಿನ್ನ ಮಗಳು ಕಾಲೇಜಿಗೆ ಹೇಗೆ ಹೋಗುತ್ತಾಳೆ ನೋಡುತ್ತೇವೆ” ಎಂಬಂಥ ಕೀಳುಮಟ್ಟದ ಬೆದರಿಕೆ ತಂತ್ರಗಳನ್ನೂ ಪ್ರಯೋಗಿಸಲಾಗುತ್ತಿದೆ ಎಂದೂ ಕೇಜ್ರಿವಾಲ್‌ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾವು ಎಲ್ಲ ಪಾವತಿಗಳನ್ನೂ ಚೆಕ್‌ ಮೂಲಕವೇ ಮಾಡಿದ್ದೇವೆ. ನಾವು 100 ಕೋಟಿ ರೂ. ಪಡೆದಿದ್ದೇವೆ ಎಂದು ಆರೋಪಿಸುವ ನೀವು, ಒಂದೇ ಒಂದು ರೂಪಾಯಿ ಪಡೆದಿದ್ದಕ್ಕೆ ಸಾಕ್ಷಿ ಕೊಡಿ ನೋಡೋಣ. “ನಾನೀಗ, ಪ್ರಧಾನಿ ಮೋದಿಯವರಿಗೆ ಒಂದು ಸಾವಿರ ಕೋಟಿ ರೂ.ಗಳನ್ನು ಸೆ.17ರಂದು ರಾತ್ರಿ 7 ಗಂಟೆಗೆ ನೀಡಿದ್ದೇನೆ ಎಂದು ಹೇಳಿದ ಕೂಡಲೇ, ಮೋದಿಯವರನ್ನು ನೀವು ಬಂಧಿಸುತ್ತೀರಾ? ಮತ್ತೆ ಯಾವುದೇ ಸಾಕ್ಷ್ಯವಿಲ್ಲದೇ ನಮ್ಮ ವಿರುದ್ಧ ಹೇಗೆ ಕ್ರಮ ಕೈಗೊಳ್ಳುತ್ತಿದ್ದೀರಿ” ಎಂದೂ ಪ್ರಶ್ನಿಸಿದ್ದಾರೆ ಕೇಜ್ರಿವಾಲ್‌.

ಕೇಜ್ರಿವಾಲ್‌ ಆರೋಪಿಯಲ್ಲ, ಸಾಕ್ಷಿ!
ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್‌ ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಕರೆಯಲಾಗಿದೆಯೇ ವಿನಾ ಆರೋಪಿಯಾಗಿ ಅಲ್ಲ. ಈಗಾಗಲೇ ಬಂಧಿತರಾಗಿರುವ ಡಿಸಿಎಂ ಮನೀಷ್‌ ಸಿಸೋಡಿಯ ಅವರು, “ಅಬಕಾರಿ ಕರಡು ನೀತಿಯನ್ನು 2021ರ ಮಾರ್ಚ್‌ನಲ್ಲಿ ಕೇಜ್ರಿವಾಲ್‌ ಅವರ ನಿವಾಸದಲ್ಲಿ ತಮಗೆ ಹಸ್ತಾಂತರಿಸಲಾಯಿತು” ಎಂದು ಹೇಳಿದ್ದಾರೆ. ಹೀಗಾಗಿ, ಈ ವಿಚಾರದ ಬಗ್ಗೆ ಕೇಜ್ರಿವಾಲ್‌ ಅವರಿಂದ ಸಿಬಿಐ ಸ್ಪಷ್ಟ ಮಾಹಿತಿ ಪಡೆಯಲಿದೆ. ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ತನಿಖೆಗೆ ಆದೇಶಿಸಿದ ಬಳಿಕ ದೆಹಲಿ ಸಂಪುಟದಲ್ಲಿ ಅಬಕಾರಿ ನೀತಿಗೆ ಅಂಗೀಕಾರ ದೊರೆತಿತ್ತು.

ತನಿಖೆಗೆ ಆದೇಶಿಸಿದ ಬಳಿಕವೂ ಅಂಗೀಕಾರ ನೀಡಿದ್ದೇಕೆ, ಇದಾದ ಬಳಿಕ ನೀತಿಯನ್ನು ರದ್ದು ಮಾಡಿ ಹಳೆಯ ನೀತಿಯನ್ನೇ ಉಳಿಸಿಕೊಂಡಿದ್ದೇಕೆ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಜ್ರಿವಾಲ್‌ಗೆ ಭಾನುವಾರ ಕೇಳಲು ಸಿಬಿಐ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ, ಈ ಹಿಂದೆ ಸಚಿವರ ಸಮಿತಿಯ ಮುಂದೆ ಇಡಲಾಗಿದ್ದ ಕಡತವೊಂದು ಈಗ ನಾಪತ್ತೆಯಾಗಿದ್ದು ಅದರ ಬಗ್ಗೆಯೂ ಪ್ರಶ್ನಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.