ಅಬಕಾರಿ ನೀತಿ ಪ್ರಕರಣ: ಸಿಬಿಐನಿಂದ ಡಿಸಿಎಂ ಸಿಸೋಡಿಯಾ ಬ್ಯಾಂಕ್ ಲಾಕರ್ ತಪಾಸಣೆ
ಆಗಸ್ಟ್ 19ರಂದು ಸಿಬಿಐ ತಂಡ ಸಿಸೋಡಿಯಾ ನಿವಾಸ ಸೇರಿದಂತೆ 31 ಸ್ಥಳಗಳ ಮೇಲೆ ದಾಳಿ ನಡೆಸಿತ್ತು.
Team Udayavani, Aug 30, 2022, 12:46 PM IST
ನವದೆಹಲಿ: ವಿವಾದಿತ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ (ಆಗಸ್ಟ್ 30) ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ಬ್ಯಾಂಕ್ ಲಾಕರ್ ಶೋಧ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ದೃಶ್ಯ ಮಾಧ್ಯಮದವರು ಏನಾಗಲಿದೆ ಎಂಬ ಕುತೂಹಲದಿಂದ ಭಾರೀ ಸಂಖ್ಯೆಯಲ್ಲಿ ಬ್ಯಾಂಕ್ ಹೊರಭಾಗದಲ್ಲಿ ಜಮಾಯಿಸಿದ್ದರಿಂದ ಅವ್ಯವಸ್ಥೆಗೆ ಎಡೆ ಮಾಡಿಕೊಟ್ಟಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಮಾಜಿ ಸಿಎಂ ಕಲ್ಯಾಣ್ ಸಿಂಗ್ ವಿರುದ್ಧ ಕೇಸ್ ಕೈಬಿಟ್ಟ ಸುಪ್ರೀಂ
ಗಾಜಿಯಾಬಾದ್ ನ ಸೆಕ್ಟರ್ 4ರ ವಸುಂಧರಾದಲ್ಲಿರುವ ಪಿಎನ್ ಬಿ ಶಾಖೆಗೆ ಸಿಬಿಐನ ಐವರು ಅಧಿಕಾರಿಗಳ ತಂಡ ಭೇಟಿ ನೀಡಿ ಶೋಧ ಕಾರ್ಯ ನಡೆಸಿರುವುದಾಗಿ ವರದಿ ವಿವರಿಸಿದೆ. ಈ ಸಂದರ್ಭದಲ್ಲಿ ಸಿಸೋಡಿಯಾ ಮತ್ತು ಪತ್ನಿ ಹಾಜರಿದ್ದರು.
2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಸೇರಿದಂತೆ ಆಮ್ ಆದ್ಮಿ ಪಕ್ಷದ 15 ಜನರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಸಿಬಿಐ ತನಿಖೆಗೆ ಸ್ವಾಗತ ಎಂದು ಸಿಸೋಡಿಯಾ ಸೋಮವಾರ ಟ್ವೀಟ್ ಮಾಡಿದ್ದರು.
ಆಗಸ್ಟ್ 19ರಂದು ನಮ್ಮ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ತಂಡ 14 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ್ದರೂ ಕೂಡಾ ಏನನ್ನೂ ಪತ್ತೆಹಚ್ಚಿಲ್ಲವಾಗಿತ್ತು. ಇದೀಗ ನನ್ನ ಬ್ಯಾಂಕ್ ಲಾಕರ್ ನಲ್ಲಿಯೂ ಏನೂ ದೊರೆಯಲಾರದು ಎಂದು ಸಿಸೋಡಿಯಾ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದರು.
ಸಿಬಿಐ ತನಿಖೆಗೆ ನನ್ನ ಕುಟುಂಬ ವರ್ಗ ಮತ್ತು ನಾನು ಸಂಪೂರ್ಣವಾಗಿ ಸಹಕಾರ ನೀಡುತ್ತೇವೆ ಎಂದು ಸಿಸೋಡಿಯಾ ತಿಳಿಸಿದ್ದರು. ಆಗಸ್ಟ್ 19ರಂದು ಸಿಬಿಐ ತಂಡ ಸಿಸೋಡಿಯಾ ನಿವಾಸ ಸೇರಿದಂತೆ 31 ಸ್ಥಳಗಳ ಮೇಲೆ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ