ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್ಐಆರ್,6 ಜನ ಅರೆಸ್ಟ್
ಸರ್ವಾಧಿಕಾರವು ಉತ್ತುಂಗದಲ್ಲಿದೆ ಎಂದ ಆಮ್ ಆದ್ಮಿ ಪಕ್ಷ
Team Udayavani, Mar 22, 2023, 11:47 AM IST
ನವದೆಹಲಿ : ನಗರದಾದ್ಯಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ಗಳನ್ನು ಅಂಟಿಸಿದ ಪ್ರಕರಣದಲ್ಲಿ 6 ಜನರನ್ನು ಬಂಧಿಸಲಾಗಿದ್ದು, ದೆಹಲಿ ಪೊಲೀಸರು 100 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಪೋಸ್ಟರ್ಗಳಲ್ಲಿ ಪ್ರಿಂಟಿಂಗ್ ಪ್ರೆಸ್ನ ವಿವರಗಳಿರಲಿಲ್ಲ. ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪಗೊಳಿಸುವಿಕೆಯ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಎಎಪಿ ಕಚೇರಿಯಿಂದ ಹೊರಟ ತಕ್ಷಣ ವ್ಯಾನ್ ಒಂದನ್ನು ಅಡ್ಡಗಟ್ಟಲಾಗಿದ್ದು ಕೆಲವು ಪೋಸ್ಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವಿಶೇಷ ಸಿಪಿ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 36 ಎಫ್ಐಆರ್ಗಳನ್ನು ಮಾಡಲಾಗಿದೆ. ಉಳಿದಂತೆ ಎಲ್ಲಾ ಎಫ್ಐಆರ್ಗಳು ಇತರ ಪೋಸ್ಟರ್ಗಳಿಗೆ ಸಂಬಂಧಿಸಿವೆ.
ಎರಡು ಪ್ರಿಂಟಿಂಗ್ ಪ್ರೆಸ್ಗಳಿಗೆ ಇಂತಹ ಒಂದು ಲಕ್ಷ ಪೋಸ್ಟರ್ಗಳಿಗೆ ಆರ್ಡರ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಮೋದಿ ವಿರೋಧಿ ಪೋಸ್ಟರ್ಗಳ ವಿರುದ್ಧದ ಕ್ರಮಕ್ಕೆ ಪ್ರತಿಕ್ರಿಯಿಸಿದ ಎಎಪಿ, ಕೇಂದ್ರ ಸರ್ಕಾರವನ್ನು “ಸರ್ವಾಧಿಕಾರ” ಎಂದು ಆರೋಪಿಸಿದೆ ಮತ್ತು ಪೋಸ್ಟರ್ಗಳ ಬಗ್ಗೆ ಆಕ್ಷೇಪಣೆ ಏನು ಎಂದು ಕೇಳಿದೆ.
“ಮೋದಿ ಸರ್ಕಾರದ ಸರ್ವಾಧಿಕಾರವು ಉತ್ತುಂಗದಲ್ಲಿದೆ. ಈ ಪೋಸ್ಟರ್ನಲ್ಲಿ ಮೋದಿಜಿ 100 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ, ಆಕ್ಷೇಪಾರ್ಹವಾದುದು ಏನು? ಪ್ರಧಾನಿ ಮೋದಿಯವರೇ, ನಿಮಗೆ ಬಹುಶಃ ತಿಳಿದಿಲ್ಲ, ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಒಂದು ಪೋಸ್ಟರ್ಗೆ ತುಂಬಾ ಹೆದರುತ್ತಿದೆ! ಏಕೆ” ಎಂದು ಎಎಪಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್