ದೆಹಲಿ:ಯುವತಿಯ ಗ್ಯಾಂಗ್ ರೇಪ್,ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ!
Team Udayavani, Jan 27, 2022, 2:09 PM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗಿರುವ ಘೋರ ಅಪರಾಧ ಪ್ರಕರಣದಲ್ಲಿ, 20 ವರ್ಷದ ಯುವತಿಯನ್ನು ಸಾಮೂಹಿಕ ಅತ್ಯಾಚಾರವೆಸಗಿ, ಚಪ್ಪಲಿಗಳ ಮಾಲೆ ಹಾಕಿ ನಂತರ ಆಕೆಯ ಮುಖಕ್ಕೆ ಮಸಿ ಬಳಿದು , ತಲೆ ಬೋಳಿಸಿ ಮೆರವಣಿಗೆ ಮಾಡಲಾಗಿದೆ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಗುರುವಾರ ಬೆಳಗ್ಗೆ ಹೇಳಿದ್ದಾರೆ.
”ಕಸ್ತೂರ್ಬಾ ನಗರದಲ್ಲಿ 20 ವರ್ಷದ ಯುವತಿಯೊಬ್ಬಳ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರ ಎಸಗಿ, ಬೋಳು ಮಾಡಿ, ಚಪ್ಪಲಿ ಹಾರ ಹಾಕಿ ಇಡೀ ಪ್ರದೇಶದಲ್ಲಿ ಮುಖ ಕಪ್ಪಾಗಿಸಿದ್ದಾರೆ. ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಎಲ್ಲಾ ಅಪರಾಧಿ ಪುರುಷರು ಮತ್ತು ಮಹಿಳೆಯರನ್ನು ಬಂಧಿಸಬೇಕು ಮತ್ತು ಸಂತ್ರಸ್ತೆ ಮತ್ತು ಅವಳ ಕುಟುಂಬಕ್ಕೆ ಭದ್ರತೆ ನೀಡಬೇಕು” ಎಂದು ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದಾರೆ.
”ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅಪರಾಧಿಗಳಿಗೆ ಇಷ್ಟೊಂದು ಧೈರ್ಯ ಬಂದಿದ್ದು ಹೇಗೆ? ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ನಾನು ಒತ್ತಾಯಿಸುತ್ತೇನೆ, ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ದೆಹಲಿಗರು ಇಂತಹ ಘೋರ ಅಪರಾಧ ಮತ್ತು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಳವಳಕಾರಿ ಘಟನೆಯ ವಿಡಿಯೋವನ್ನು ಚಿತ್ರೆಕರಿಸಲಾಗಿದ್ದು, ವೈರಲ್ ಆಗಿದೆ. ಹಲವು ಮಹಿಳೆಯರೂ ಯುವತಿಯನ್ನು ಸಾರ್ವಜನಿಕ ಸ್ಥಳದಲ್ಲಿ ಅಮಾನವೀಯವಾಗಿ ಥಳಿಸುವುದನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…