ಕುದ್ರುಬೇರು ಕಟ್ಟೆ-ಮೋರ್ಟು ರಸ್ತೆ ಅಭಿವೃದ್ಧಿಗೆ ಬೇಡಿಕೆ


Team Udayavani, Apr 15, 2021, 12:47 AM IST

ಕುದ್ರುಬೇರು ಕಟ್ಟೆ-ಮೋರ್ಟು ರಸ್ತೆ ಅಭಿವೃದ್ಧಿಗೆ ಬೇಡಿಕೆ

ಆಜ್ರಿ: ಕೆರಾಡಿ ಹಾಗೂ ಆಜ್ರಿ ಗ್ರಾಮವನ್ನು ಸಂಪರ್ಕಿಸುವ ಬಹು ದಿನಗಳ ಬೇಡಿಕೆಯಾದ ಮೋರ್ಟು- ಬೆಳ್ಳಾಲ ಸೇತುವೆ ಪೂರ್ಣಗೊಂಡಿದ್ದು, ಸಂಚಾರವು ಆರಂಭಗೊಂಡಿದೆ. ಆದರೆ ಈ ಸೇತುವೆಯನ್ನು ಸಂಪರ್ಕಿಸುವ ಆಜ್ರಿ ಗ್ರಾ.ಪಂ. ವ್ಯಾಪ್ತಿಯ ಕುದ್ರುಬೇರುಕಟ್ಟೆ – ಮೋರ್ಟು ರಸ್ತೆ ಮಾತ್ರ ಇನ್ನೂ ಮಣ್ಣಿನ ರಸ್ತೆಯಾಗಿಯೇ ಉಳಿದಿದ್ದು, ಸೇತುವೆಯೊಂದಿಗೆ ರಸ್ತೆಯೂ ಅಭಿ ವೃದ್ಧಿಯಾದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ.

ಮೋರ್ಟು, ಬೆಳ್ಳಾಲ, ಕೆರಾಡಿ, ಮಾರಣಕಟ್ಟೆ ಭಾಗದ ಜನರಿಗೆ ಆಜ್ರಿ, ಸಿದ್ದಾಪುರಕ್ಕೆ ಹೋಬೇಕಾದರೆ ಚಕ್ರಾ ನದಿ ದಾಟಿ ಹೋಗಬೇಕಿದ್ದು, ಕಳೆದ ಹಲವು ವರ್ಷಗಳಿಂದ ಸೇತುವೆಯಿಲ್ಲದೆ ಜನ ಸಂಕಷ್ಟ ಪಡುತ್ತಿದ್ದರು. ಆದರೆ ಈಗ ಸೇತುವೆ ನಿರ್ಮಾಣವಾಗಿದ್ದು, ಸಂಪರ್ಕ ರಸ್ತೆ ಮಾತ್ರ ಧೂಳುಮಯವಾಗಿರುವುದರಿಂದ ಸಮಸ್ಯೆಯಾಗುತ್ತಿದೆ.

1.5 ಕಿ.ಮೀ. ಮಣ್ಣಿನ ರಸ್ತೆ
ಆಜ್ರಿ- ನೇರಳಕಟ್ಟೆ ಮುಖ್ಯ ರಸ್ತೆಯ ಕುದ್ರುಬೇರುಕಟ್ಟೆ ಬಳಿಯಿಂದ ಮೋರ್ಟು ಸೇತುವೆ ವರೆಗಿನ ಸುಮಾರು 1.5 ಕಿ.ಮೀ. ಉದ್ದದ ಮಣ್ಣಿನ ರಸ್ತೆಗೆ ಡಾಮರು ಕಾಮಗಾರಿಯಾದರೆ ಈ ಭಾಗದ ಜನರಿಗೆ ಅನುಕೂಲವಾಗಲಿದೆ.

ಈ ಮೋರ್ಟು 2019ರಲ್ಲಿ ಕಾಮಗಾರಿ ಆರಂಭಗೊಂಡು, ಕೆಲವು ತಿಂಗಳ ಹಿಂದಷ್ಟೇ ಪೂರ್ಣಗೊಂಡಿದೆ. ಸೇತುವೆಯು 2.49 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈ ಭಾಗದಲ್ಲಿ ಸುಮಾರು 1,000ಕ್ಕೂ ಹೆಚ್ಚು ಮನೆಗಳಿದ್ದು, ಸೇತುವೆಯಾಗಿದ್ದರಿಂದ ಸಾವಿರಾರು ಮಂದಿಗೆ ಪ್ರಯೋಜನವಾಗಲಿದೆ. ಸಂಪರ್ಕ ರಸ್ತೆಯು ಅಭಿವೃದ್ಧಿಯಾದರೆ ಮತ್ತಷ್ಟು ಅನುಕೂಲವಾಗಲಿದೆ.

ಮೋರ್ಟು – ಬೆಳ್ಳಾಲ ಸೇತುವೆ ನಿರ್ಮಾಣ ಈ ಪ್ರದೇಶದ ಬಹು ದಿನಗಳ ಬೇಡಿಕೆಯಾಗಿತ್ತು. ಕೆರಾಡಿ, ಮೋರ್ಟು, ಬೆಳ್ಳಾಲ ಭಾಗದವರು ಈ ಮೊದಲು ಸೇತುವೆಯಿಲ್ಲದೆ ಸಿದ್ದಾಪುರಕ್ಕೆ ತೆರಳಬೇಕಾದರೆ ಸುತ್ತು ಬಳಸಿ 25-30 ಕಿ. ಮೀ. ಸಂಚರಿಸಬೇಕಾಗಿತ್ತು. ಈಗ ಸೇತುವೆಯಾಗಿದ್ದರಿಂದ ಕೇವಲ 10 ಕಿ.ಮೀ. ಅಷ್ಟೇ ಅಂತರವಿರುವುದು. ಸಿದ್ದಾಪುರ, ಆಜ್ರಿ ಭಾಗದವರು ಮಾರಣಕಟ್ಟೆಗೆ ತೆರಳಲು ಹತ್ತಿರದ ಮಾರ್ಗವಾಗಿದೆ. ರಸ್ತೆ ಡಾಮರು ಕಾಮ ಗಾ ರಿ ಯಾದರೆ ಮಳೆಗಾಲದಲ್ಲಿ ಕೆಸರುಮಯ ರಸ್ತೆ ಹಾಗೂ ಬೇಸಗೆಯಲ್ಲಿ ಧೂಳಿನಿಂದಲೂ ಮುಕ್ತಿ ಸಿಗಲಿದೆ.

ಮಣ್ಣಿನ ರಸ್ತೆ ಅಭಿವೃದ್ಧಿಗಾಗಿ ಶಾಸಕರಿಗೆ ಮನವಿ
ಮೋರ್ಟು – ಬೆಳ್ಳಾಲ ಸೇತುವೆಯಾಗಿರುವುದರಿಂದ ಆಜ್ರಿ ಹಾಗೂ ಕೆರಾಡಿ ಭಾಗದ ಜನರಿಗೆ ತುಂಬಾ ಸಹಕಾರಿಯಾಗಿದ್ದು, ಇದರೊಂದಿಗೆ ಈ ಸೇತುವೆ ಸಂಪರ್ಕಿಸುವ ಮಣ್ಣಿನ ರಸ್ತೆ ಅಭಿವೃದ್ಧಿಯಾಗಬೇಕಿದೆ. ಈ ಬಗ್ಗೆ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅನುದಾನ ಮೀಸಲಿರಿಸುವ ಭರವಸೆ ನೀಡಿದ್ದಾರೆ.
– ಅಶೋಕ್‌ ಕುಲಾಲ್‌, ಆಜ್ರಿ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.