ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಕೃಷಿ ಇಲಾಖೆ
Team Udayavani, Sep 3, 2022, 11:43 AM IST
ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂಬ ಎನ್ ಸಿಆರ್ ಬಿ ವರದಿ ರಾಜ್ಯದಲ್ಲಿ ವಿವಾದ ಎಬ್ಬಿಸಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೃಷಿ ಇಲಾಖೆ 2018 ರಿಂದ 2021ರ ಅವಧಿಯಲ್ಲಿ ಆತ್ಮಹತ್ಯೆ ಪ್ರಕರಣ ಇಳಿಮುಖವಾಗಿತ್ತು ಎಂದು ಹೇಳಿದೆ.
ರಾಜ್ಯದಲ್ಲಿ 2014 ರಿಂದ 2017 ರ ಅವಧಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಏರುಗತಿಯಲ್ಲಿತ್ತು. ಆದರೆ ಎನ್ ಸಿಆರ್ ಬಿ ವರದಿಯಲ್ಲಿ ಕರ್ನಾಟಕದಲ್ಲಿ 2020- 21ರಲ್ಲಿ ನಡೆದ ದೇಶದ ಒಟ್ಟು ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕದ ಪಾಲು ಶೇ.19.9 ರಷ್ಟಿದೆ. ಕರ್ನಾಟಕ 2 ನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಿತ್ತು.
ಈ ಅವಧಿಯಲ್ಲಿ ದೇಶದಲ್ಲಿ 10,881 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಶೇ.19.9 ಅಂದರೆ 2,165 ರೈತರು ಕರ್ನಾಟಕದಲ್ಲಿ ಮೃತಪಟ್ಟಿರಬೇಕು. ಆದರೆ ಈ ಲೆಕ್ಕಚಾರ ಸುಳ್ಳು. ಏಕೆಂದರೆ ರಾಜ್ಯದಲ್ಲಿ 202-21 ರ ಅವಧಿಯಲ್ಲಿ 719 ರೈತರು ಮಾತ್ರ ಸಾವಿಗೆ ಶರಣಾಗಿದ್ದಾರೆ. 2022-23 ನೇ ಸಾಲಿನಲ್ಲಿ ಈವರೆಗೆ 60 ರೈತರು ಮೃತಪಟ್ಟಿದ್ದಾರೆ ಎಂದು ಕೃಷಿ ಇಲಾಖೆ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ