ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್


Team Udayavani, May 30, 2023, 11:53 PM IST

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಬೀದರ: ಅನಧೀಕೃತವಾಗಿ ಕೆಮಿಕಲ್ ಸಂಗ್ರಹ ಪ್ರಕರಣ ಮತ್ತು ಅಕ್ರಮ ಗುಟ್ಕಾ ತಯಾರಿಕೆ ಪ್ರಕರಣದಲ್ಲಿ ಮಾಹಿತಿ ಕಲೆ ಹಾಕಿ ದಾಳಿ ಮಾಡಿ ಕಾನೂನು ಕ್ರಮ ಕೈಗೊಳ್ಳದೇ ಹಾಗೂ ಅಕ್ರಮ ಚಟುವಟಿಕೆ ತಡೆಯುವಲ್ಲಿ ವಿಫಲರಾಗಿ ಕರ್ತವ್ಯ ಲೋಪ ಎಸಗಿದ ಹಿನ್ನಲೆ ಹುಮನಾಬಾದ್ ಪಿಎಸ್‌ಐ ಮಂಜುನಾಥ ಗೌಡ ಪಾಟೀಲ ಅವರನ್ನು ಅಮಾನತ್ತು ಮಾಡಿ ಎಸ್‌ಪಿ ಚೆನ್ನಬಸವಣ್ಣ ಎಸ್‌ಎಲ್ ಆದೇಶ ಹೊರಡಿಸಿದ್ದಾರೆ.

ಹುಮನಾಬಾದ್ ಎಎಸ್‌ಪಿ ಅವರ ವರದಿ ಆಧಾರದ ಮೇಲೆ ಅಮಾನತ್ತು ಮಾಡಲಾಗಿದೆ. ಜತೆಗೆ ಹುಮನಾಬಾದ್ ಸಿಪಿಐ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಈ ಕುರಿತು ಎಸ್‌ಪಿ ‘ಉದಯವಾಣಿ’ಗೆ ಖಚಿತಪಡಿಸಿದ್ದಾರೆ. ಈ ಪ್ರಕರಣ ಸಂಬಂಧ ಚಿಟಗುಪ್ಪ ಪಿಎಸ್‌ಐ ನೇತೃತ್ವದ ತಂಡ ದಾಳಿ ನಡೆಸಿ ಕ್ರಮ ಕೈಗೊಂಡಿದ್ದು, ಎರಡೂ ಪ್ರಕರಣಗಳ ಮುಂದಿನ ತನಿಖೆಯನ್ನು ಚಿಟಗುಪ್ಪ ಮತ್ತು ಬಸವಕಲ್ಯಾಣ ಸಿಪಿಐ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಹುಮನಾಬಾದ ತಾಲೂಕಿನ ಹುಡಗಿ ಶಿವಾರದಲ್ಲಿ ಮೇ 24ರಂದು ಅಕ್ರಮವಾಗಿ ಪ್ರತಿಷ್ಠಿತ ಬ್ರ್ಯಾಂಡ್ ನ ಪಾನ ಮಸಾಲಾಗಳಲ್ಲಿ ವಿಷಪೂರಿತ ಪದಾರ್ಥಗಳಿಂದ ಕಲಬೆರಕೆ ಮಾಡಿ ತಯ್ಯಾರಿಸುತ್ತಿದ್ದ ಅಡ್ಡಾ ಮೇಲೆ ಚಿಟಗುಪ್ಪ ಠಾಣೆ ಪಿಎಸ್‌ಐ ಮಹೇಂದ್ರಕುಮಾರ ನೇತೃತ್ವದ ತಂಡ ದಾಳಿ ಮಾಡಿ ಸುಮಾರು 63.22 ಲಕ್ಷ ರೂ. ಮೌಲ್ಯದ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ದಾಳಿ ವೇಳೆ 5.5 ಲಕ್ಷ ರೂ. ಮೌಲ್ಯದ 11 ಪಾನಮಸಾಲಾ ಪ್ಯಾಕೆಟ್ ಮಾಡುವ ಯಂತ್ರ, 28 ಲಕ್ಷ ರೂ. ಮೌಲ್ಯದ 6 ಲಾರಿಗಳು, 7.33ಲಕ್ಷ ಮೌಲ್ಯದ 4890ಕೆಜಿ ಕಚ್ಚಾ ವಸ್ತುಗಳು, 20.58ಲಕ್ಷ ಮೌಲ್ಯದ ಪಾನ ಮಸಾಲಾ 15ದೊಡ್ಡ ಮತ್ತು 8ಸಣ್ಣ ಪಾನ ಮಸಾಲಾ ಪ್ಯಾಕೆಟ್ ಸೇರಿ ಇನ್ನೂ ಸಾವಿರಾರು ರೂಪಾಯಿ ಮೌಲ್ಯದ ಮತ್ತಿತರ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು.

ಹುಡಗಿ ಗ್ರಾಮದ ಬಳಿಯ ತಗಡದ ಶೆಡ್‌ನಲ್ಲಿ ಬ್ಯಾರಲ್‌ಗಳು ಮತ್ತು ಮೂರು ಲಾರಿಗಳಲ್ಲಿ ಮಾನವ ಜೀವನಕ್ಕೆ ಹಾನಿಯಾಗುವಂತ ರೋಗ ಸೋಂಕು ಹರಡುವಂತ ಹಾಗೂ ವಾತಾವರಣವನ್ನು ಹಾನಿ ಮಾಡುವಂಥ ಕೆಮಿಕಲ್‌ನ್ನು ಅನಧೀಕೃತವಾಗಿ ಸಂಗ್ರಹ ಮಾಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರ ತಂಡ ದಾಳಿ ನಡೆಸಿ ಸುಮಾರು 87.59ಲಕ್ಷ ರೂ. ಮೌಲ್ಯದ 81.06ಟನ್ ಕೆಮಿಕಲ್ ಜಪ್ತಿ ಮಾಡಿಕೊಳ್ಳಲಾಗಿತ್ತು.


	
					
											

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.