ಅಂಗನವಾಡಿ ಸಿಬಂದಿಗೆ ಸಮವಸ್ತ್ರ ಬಣ್ಣ ನಿಗದಿ


Team Udayavani, Sep 20, 2022, 6:35 AM IST

ಅಂಗನವಾಡಿ ಸಿಬಂದಿಗೆ ಸಮವಸ್ತ್ರ ಬಣ್ಣ ನಿಗದಿ

ದಾವಣಗೆರೆ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮುಂದಿನ ವರ್ಷದಿಂದ ಸಮವಸ್ತ್ರ ಧಾರಣೆಗೆ ಪೂರಕವಾಗಿ ರಾಜ್ಯ ಸರಕಾರ ಸೀರೆಯ ಬಣ್ಣ ನಿಗದಿಗೊಳಿಸಿದೆ.

ಮುಂದಿನ ಆರ್ಥಿಕ ವರ್ಷದಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಯರು ಮೆಂತೆಕಾಳಿನ (ಗೋಲ್ಡನ್‌ ಯೆಲ್ಲೊ) ಬಣ್ಣದ ಸಮವಸ್ತ್ರದ ಸೀರೆ ಉಡಲಿದ್ದಾರೆ.

ಅಂಗನವಾಡಿ ಸಹಾಯಕಿಯರು ಕೆಂದುಗಂಪು (ಮೆರೂನ್‌) ಬಣ್ಣದ ಸೀರೆ ಧರಿಸುವರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಂಧಿಸಿ ಆಕಾಶನೀಲಿ ಬಣ್ಣದ ಸಮವಸ್ತ್ರ ಖರೀದಿ ಪ್ರಕ್ರಿಯೆ ಆರಂಭಿಸಿದಲ್ಲಿ ಅವರು ಈ ಆ ಬಣ್ಣದ ಸೀರೆಯನ್ನೇ ಧರಿಸಬೇಕು. ಇನ್ನೂ ಖರೀದಿ ಪ್ರಕ್ರಿಯೆ ನಡೆಯದಿದ್ದಲ್ಲಿ ಮೆಂತೆ (ಗೋಲ್ಡನ್‌ ಯಲ್ಲೋ) ಬಣ್ಣದ ಸಮವಸ್ತ್ರದ ಸೀರೆ ಖರೀದಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ನಗದು ವರ್ಗಾವಣೆ
ನಿಗದಿಗೊಳಿಸಿದ ಸಮವಸ್ತ್ರದ ಎರಡು ಸೀರೆಗಳ ಖರೀದಿಗೆ 800 ರೂ.ಗಳನ್ನು ಅವರವರ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಇಲಾಖೆಯಿಂದಲೇ ಸೀರೆಗಳನ್ನು ವಿತರಿಸಲಾಗುತ್ತಿತ್ತು.

ಸಂಘಟನೆಗಳೊಂದಿಗೆ ಚರ್ಚೆ
ಇಲಾಖೆ ವಿತರಿಸುತ್ತಿರುವ ಸೀರೆ ಗುಣಮಟ್ಟ ಚೆನ್ನಾಗಿಲ್ಲ. ಆಯ್ಕೆ ಮಾಡಿದ ಬಣ್ಣವೂ ಎಲ್ಲರಿಗೂ ಒಪ್ಪುವಂತಿಲ್ಲ. ಜಾಹೀರಾತು ಮುದ್ರಿಸಿದ ಸೀರೆ ಧರಿಸಲು ಕಾರ್ಯಕರ್ತೆಯರಿಗೆ ಮುಜುಗರವಾಗುತ್ತದೆ. ಆದ್ದರಿಂದ ಸೀರೆಗಳಲ್ಲಿ ಜಾಹೀರಾತು ಮುದ್ರಿಸಬಾರದು. ಸಮವಸ್ತ್ರದ ಸೀರೆಗಾಗಿ ಎಲ್ಲರಿಗೂ ಒಪ್ಪುವ ಬಣ್ಣ ಆಯ್ಕೆ ಮಾಡಬೇಕು. ಇಲಾಖೆಯಿಂದ ಸೀರೆ ವಿತರಿಸದೆ ಹಣವನ್ನೇ ನೀಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ಹೋರಾಟ ಮಾಡಿ ಸರಕಾರಕ್ಕೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆಯಲ್ಲಿ ಸಂಘಟನೆ ಪದಾಧಿಕಾರಿಗಳೊಂದಿಗೆ ಎರಡು ಸುತ್ತಿನ ಸಭೆ ನಡೆಸಿದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಂದಿನ ವರ್ಷದಿಂದ ರಾಜ್ಯಾದ್ಯಂತ ಏಕರೂಪ ಸಮವಸ್ತ್ರ ಜಾರಿಗೊಳಿಸಲು ಇಲಾಖೆ ಈ ವರ್ಷವೇ ಬಣ್ಣ ನಿಗದಿಗೊಳಿಸಿ ಖರೀದಿಗೆ ಹಣವನ್ನೂ ಅವರವರ ಖಾತೆಗೆ ಹಾಕಲಾಗಿದೆ.
– ವಾಸಂತಿ ಉಪ್ಪಾರ್‌,
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಾವಣಗೆರೆ

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.