ಧರ್ಮಸ್ಥಳ: ರಾಜ್ಯಾದ್ಯಂತ ಮುಷ್ಕರ, ಬಾಣಸಿಗರಾದ ಸಾರಿಗೆ ನೌಕರರು
Team Udayavani, Dec 12, 2020, 12:21 PM IST
ಬೆಳ್ತಂಗಡಿ: ಸಾರಿಗೆ ನೌಕರರನ್ನು ಸರಕಾರಿ ನೌಕರರಾಗಿ ಪರಿಗಣಿಸಬೇಕು ಎಂಬ ನೆಲೆಯಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಮುಷ್ಕರದ ಹಿನ್ನೆಲೆ ಧರ್ಮಸ್ಥಳ ಡಿಪ್ಪೋದಿಂದ ಯಾವುದೇ ಬಸ್ ಓಡಾಟ ನಡೆಸದೆ ಮುಷ್ಕರವನ್ನು ಬೆಂಬಲಿಸಿದೆ.
ಪರಿಣಾಮ ಶನಿವಾರ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ನಾನಾ ಕಡೆಯಿಂದ ಬಂದ ಭಕ್ತರು ಹಿಂದೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡಿದರು.
ಬಸ್ ನಿಲ್ದಾಣದಲ್ಲೇ ಉಪಹಾರ ವ್ಯವಸ್ಥೆ
ಶನಿವಾರ ಮುಷ್ಕರದಿಂದಾಗಿ ನೂರಾರು ಸಾರಿಗೆ ಸಿಬಂದಿ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಉಪಹಾರ ವ್ಯವಸ್ಥೆ ಮಾಡಿಕೊಂಡರು. ಚಾಲಕರ ನಿರ್ವಾಹಕರು ಸೌಟು ಹಿಡಿದು ಅಡುಗೆ ಸಿದ್ಧಪಡಿಸಿದ್ದಾರೆ. ನಿಲ್ದಾಣದಲ್ಲೇ ಪ್ರಯಾಣಿಕರಿಗು ಉಪಹಾರ ವ್ಯವಸ್ಥೆ ಮಾಡಿದರು.
ಎರಡನೇ ಶನಿವಾರವಾದ್ದರಿಂದ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಅಡಚಣೆಯಾಗಿದೆ. ವಿಶೇಷ ಬಸ್ ಗಳ ವ್ಯವಸ್ಥೆಯೂ ಸ್ಥಗಿತವಾಗಿದೆ.
ಶುಕ್ರವಾರ ಸಹಜ ಸ್ಥಿತಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಓಡಾಟವು ಶನಿವಾರ ನೌಕರರ ಮುಷ್ಕರ ಪರಿಣಾಮ ಸ್ಥಗಿತಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ