Lok Sabha Election; 17 ಚುನಾವಣೆ ಕಂಡ ಕ್ಷೇತ್ರದಲ್ಲಿ ಸಂಸದರು ಐವರೇ !

28 ವರ್ಷಗಳಿಂದಲೂ ಇಲ್ಲಿ ಬಿಜೆಪಿಯದ್ದೇ ಪಾರಮ್ಯ - ಮೂವರು ಕೇಂದ್ರ ಸಚಿವರನ್ನು ಕೊಟ್ಟ ಕ್ಷೇತ್ರ

Team Udayavani, Mar 14, 2024, 7:15 AM IST

Lok Sabha Election; 17 ಚುನಾವಣೆ ಕಂಡ ಕ್ಷೇತ್ರದಲ್ಲಿ ಸಂಸದರು ಐವರೇ !

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ 1952ರಿಂದ 1991ರ ವರೆಗೆ ಕಾಂಗ್ರೆಸ್‌ನ ಭದ್ರಕೋಟೆ ಯಾಗಿತ್ತು. 1996ರಲ್ಲಿ ಮಗ್ಗಲು ಬದಲಿಸಿ ಬಿಜೆಪಿ ಕಡೆ ವಾಲಿದ್ದು, ಸುಮಾರು 28 ವರ್ಷಗಳಿಂದ ಇಲ್ಲಿ ಕಮಲ ಅರಳುತ್ತಲೇ ಬಂದಿದೆ. ಕೇಂದ್ರದ ಪ್ರಭಾವಿ ಸಚಿವ ಪ್ರಹ್ಲಾದ ಜೋಷಿಯವರು ಪ್ರತಿನಿಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿದೆ.

1952ರಲ್ಲಿ ಲೋಕಸಭೆಗೆ ನಡೆದ ಮೊದಲ ಚುನಾವಣೆಯಿಂದ ಹಿಡಿದು 2019ರ ವರೆಗೆ ಒಟ್ಟು 17 ಚುನಾವಣೆಗಳು ಆಗಿವೆ. ಆದರೆ ಈ ಕ್ಷೇತ್ರವನ್ನು ಪ್ರತಿನಿಧಿಸಿದವರು ಕೇವಲ ಐವರು ಸಂಸದರು. ಮೂರು, ನಾಲ್ಕು ಬಾರಿ ಸತತವಾಗಿ ಒಬ್ಬರೇ ಆಯ್ಕೆಯಾಗಿರುವುದು ಕ್ಷೇತ್ರದ ವಿಶೇಷ. ಮೂವರು ಕೇಂದ್ರ ಸಚಿವರನ್ನು ಕೊಟ್ಟ ಕ್ಷೇತ್ರವೂ ಇದಾಗಿದೆ. ಈ ಬಾರಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರೆ ಕ್ಷೇತ್ರದಲ್ಲೇ ಹೆಚ್ಚು ಬಾರಿ ಗೆಲುವು ಸಾಧಿಸಿದ ಕೀರ್ತಿಗೆ ಪಾತ್ರವಾಗಲಿದ್ದಾರೆ.

ಈಗ ಸಮಬಲ
ಧಾರವಾಡ ಲೋಕಸಭಾ ಕ್ಷೇತ್ರ ಈ ಹಿಂದೆ ಧಾರವಾಡ ಜಿಲ್ಲೆ, ಗದಗ, ನರಗುಂದ ಸಹಿತ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರವಾಗಿತ್ತು. 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಸಹಿತ ಒಟ್ಟು 8 ವಿಧಾನಸಭಾ ಕ್ಷೇತ್ರಗಳೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರವಾಗಿ ರೂಪುಗೊಂಡಿತ್ತು. ಧಾರವಾಡ ಲೋಕಸಭಾ ಕ್ಷೇತ್ರ ಹುಬ್ಬಳ್ಳಿ- ಧಾರವಾಡ ಕೇಂದ್ರ, ಹುಬ್ಬಳ್ಳಿ- ಧಾರವಾಡ ಪೂರ್ವ, ಹುಬ್ಬಳ್ಳಿ- ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ, ನವಲಗುಂದ, ಕುಂದ ಗೋಳ, ಕಲಘಟಗಿ ಹಾಗೂ ಶಿಗ್ಗಾವಿ ಕ್ಷೇತ್ರಗಳ ವ್ಯಾಪ್ತಿ ಒಳಗೊಂಡಿದೆ.

2019ರ ಲೋಕಸಭಾ ಚುನಾವಣೆ ಸಂದರ್ಭ ಹಾವೇರಿ ಜಿಲ್ಲೆಯ ಶಿಗ್ಗಾವಿ ಸಹಿತಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಆರು ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ ಎರಡು ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ಹೊಂದಿದ್ದವು. 2023ರ ವಿಧಾನಸಭಾ ಚುನಾವಣೆಯಲ್ಲಿ ಸಮಬಲದ ಸಾಧನೆಯಾಗಿದ್ದು, ಬಿಜೆಪಿ-ಕಾಂಗ್ರೆಸ್‌ ತಲಾ 4 ಕ್ಷೇತ್ರಗಳಲ್ಲಿ ಗೆದ್ದಿವೆ.

ಪಕ್ಷ ನಿಷ್ಠೆಗೇ ಜೈ
ಈ ಕ್ಷೇತ್ರದಲ್ಲಿ ವ್ಯಕ್ತಿ ನಿಷ್ಠೆಗಿಂತ ಪಕ್ಷ ನಿಷ್ಠೆಯೇ ಮೇಲುಗೈ ಸಾಧಿಸುತ್ತಿದೆ. ಕ್ಷೇತ್ರ ಪ್ರತಿನಿಧಿಸಿರುವ ಐವರಲ್ಲಿ ಮೂವರು ತಲಾ ನಾಲ್ಕು ಬಾರಿ ಪ್ರತಿನಿಧಿಸಿದ್ದರೆ, ಒಬ್ಬರು ಮೂರು ಬಾರಿ, ಒಬ್ಬರು ಎರಡು ಬಾರಿ ಪ್ರತಿನಿಧಿಸಿದ್ದಾರೆ. ಇಲ್ಲಿ ಪಕ್ಷ ತೊರೆದು ಇಲ್ಲವೇ ಪಕ್ಷಕ್ಕೆ ಸಡ್ಡು ಹೊಡೆದು ಗೆಲುವು ಸಾಧಿಸಿದ್ದು ಇಲ್ಲ. 1952ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಿ.ಪಿ.ಕರಮಕರ ಗೆಲುವು ಸಾಧಿಸಿದ್ದರು. 1957ರಲ್ಲಿಯೂ ಅವರೇ ಪುನರಾಯ್ಕೆಯಾಗಿದ್ದರು. 1962ರಿಂದ 1977ರ ವರೆಗೆ ಕಾಂಗ್ರೆಸ್‌ನಿಂದ ಸರೋಜಿನಿ ಮಹಿಷಿ ಅವರು ಸತತ ನಾಲ್ಕು ಬಾರಿ ಗೆದ್ದಿದ್ದರು. 1982ರಿಂದ 1991ರ ವರೆಗೆ ಡಿ.ಕೆ.ನಾಯ್ಕರ್‌ ಕಾಂಗ್ರೆಸ್‌ನಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು. 1996ರಿಂದ 1999ರ ವರೆಗೆ ಬಿಜೆಪಿಯ ವಿಜಯ ಸಂಕೇಶ್ವರ ಅವರು ಸತತ ಮೂರು ಬಾರಿ ಗೆದ್ದಿದ್ದರು. 2004ರಿಂದ 2019ರ ವರೆಗೆ ಸತತವಾಗಿ ನಾಲ್ಕು ಬಾರಿ ಬಿಜೆಪಿಯ ಪ್ರಹ್ಲಾದ ಜೋಷಿ ಆಯ್ಕೆಯಾಗಿದ್ದಾರೆ.

ಈ ಕ್ಷೇತ್ರ ಲಿಂಗಾಯತ ಪ್ರಾಬಲ್ಯ ಹೊಂದಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಮರು ಬರುತ್ತಾರೆ. ಕ್ಷೇತ್ರದಲ್ಲಿ ಅಂದಾಜು 6.50 ಲಕ್ಷದಷ್ಟು ಲಿಂಗಾಯತರು ಇದ್ದರೆ, 3 ಲಕ್ಷದಷ್ಟು ಮುಸ್ಲಿಮರು, 2 ಲಕ್ಷದಷ್ಟು ಪರಿಶಿಷ್ಟ ಜಾತಿ, 1.60 ಲಕ್ಷದಷ್ಟು ಕುರುಬರು, ಒಂದು ಲಕ್ಷದಷ್ಟು ಪರಿಶಿಷ್ಟ ಪಂಗಡದವರು, ಒಂದು ಲಕ್ಷದಷ್ಟು ಎಸ್‌ಎಸ್‌ಕೆ, ಮರಾಠ ಸಮಾಜದವರು, 50 ಸಾವಿರಕ್ಕೂ ಅಧಿಕ ಬ್ರಾಹ್ಮಣರು, ಇತರ ಸಮಾಜದವರು 2ರಿಂದ 2.50 ಲಕ್ಷದಷ್ಟಿದ್ದಾರೆ. ಲಿಂಗಾಯತ ಹಾಗೂ ಮುಸ್ಲಿಂ ಮತದಾರರು ಪ್ರಮುಖ ಸ್ಥಾನದಲ್ಲಿದ್ದರೆ, ಪರಿಶಿಷ್ಟ ಜಾತಿ ಹಾಗೂ ಕುರುಬ ಮತದಾರರು ನಿರ್ಧಾರಕ ಸ್ಥಾನದಲ್ಲಿದ್ದಾರೆ. 1991ರಲ್ಲಿ ಗೆಲುವು ಸಾಧಿಸಿದ್ದು, ಬಿಟ್ಟರೆ ಸುಮಾರು ಮೂರು ದಶಕಗಳಿಂದ ಕಾಂಗ್ರೆಸ್‌ ಇಲ್ಲಿ ಒಮ್ಮೆಯೂ ಜಯ ಗಳಿಸಿಲ್ಲ. 1996ರಲ್ಲಿ ಮೊದಲ ಬಾರಿಗೆ ಕ್ಷೇತ್ರದಲ್ಲಿ ತನ್ನ ಪ್ರಭುತ್ವ ಸಾಧಿಸಿದ ಬಿಜೆಪಿ ಇಂದಿಗೂ ದಿಗ್ವಿಜಯ ಯಾತ್ರೆ ಮುಂದುವರಿಸಿಕೊಂಡು ಬಂದಿದೆ.

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.