ವೈದ್ಯರಾಗುವುದು ಹಣ ಗಳಿಸಲು ಮಾತ್ರವಲ್ಲ: ಡಾ|ಡಿ.ವೀರೇಂದ್ರ ಹೆಗ್ಗಡೆ

ಧಾರವಾಡ ಎಸ್ ಡಿಎಂ ವಿವಿ ಘಟಿಕೋತ್ಸವ : ಪದವಿ ಪ್ರದಾನ

Team Udayavani, Dec 15, 2022, 9:55 PM IST

1-asdsadsad

ಧಾರವಾಡ : ಇಲ್ಲಿಯ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಘಟಿಕೋತ್ಸವವು ಎಸ್‌ಡಿಎಂ ಆಸ್ಪತ್ರೆ ಆವರಣದ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಗುರುವಾರ ಸಂಜೆ ಜರುಗಿತು.

ಈ ಘಟಿಕೋತ್ಸವದಲ್ಲಿ ಎಸ್‌ಡಿಎಂ ವಿಶ್ವವಿದ್ಯಾಲಯದ ಕುಲಪತಿ, ರಾಜ್ಯಸಭಾ ಸದಸ್ಯರಾದ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು, ಎಸ್‌ಡಿಎಂ ಮೆಡಿಕಲ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ 160, ಎಸ್‌ಡಿಎಂ ದಂತ ಮಹಾವಿದ್ಯಾಲಯದ 109, ಎಸ್‌ಡಿಎಂ ಪಿಸಿಯೋಥೆರೆಪಿ ವಿಭಾಗದ 47 ಹಾಗೂ ನರ್ಸಿಂಗ್ ವಿಭಾಗದ 95 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 411 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಡಾ|ಹೆಗ್ಗಡೆ ಅವರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಪದವೀಧರರು ವಿಶ್ವವಿದ್ಯಾಲಯದ ರಾಯಭಾರಿಗಳಾಗಿದ್ದು, ವೃತ್ತಿ ಜೀವನದಲ್ಲಿ ಸಾಧನೆ ಮಾಡುವ ಮೂಲಕ ವಿಶ್ವವಿದ್ಯಾಲಯದ ಕೀರ್ತಿ ಹೆಚ್ಚಿಸಬೇಕು. ಈ ಪದವಿ ಪಡೆಯುವ ಮೂಲಕ ಪಾಲಕರ ಕನಸು ನನಸಾಗಿಸಿದ್ದೀರಿ. ಮುಂದೆ ವೃತ್ತಿ ಜೀವನದಲ್ಲಿ ತಜ್ಞತೆ ಗಳಿಸಿಕೊಂಡು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು ಎಂದರು.

ಇಂದಿನ ದಿನಮಾನದಲ್ಲಿ ಬಹಳಷ್ಟು ಶಾಲಾ ವಿದ್ಯಾರ್ಥಿಗಳು ವೈದ್ಯರಾಗಬಯಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಈ ವೃತ್ತಿ ಕುರಿತು ಸಮಾಜದಲ್ಲಿರುವ ಗೌರವ. ವೈದ್ಯರಾಗುವುದು ಹಣ ಗಳಿಸಲು ಮಾತ್ರವಲ್ಲ, ತಮ್ಮಲ್ಲಿ ನಂಬಿಕೆ ಇಟ್ಟು ಬರುವ ರೋಗಿಗಳನ್ನು ಗುಣಪಡಿಸುವುದೇ ಪರಮೋಚ್ಛ ಗುರಿಯಾಗಿರಬೇಕು ಎಂದರು.

ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಅರಿತುಕೊಂಡು ಸಾಧನಾ ಪಥದಲ್ಲಿ ಸಾಗಬೇಕು.ವೈಯಕ್ತಿಕ ಸಾಧನೆಗೆ ಸಮಯ ಮೀಸಲಾಗಿಡಬೇಕು. ಹಣ ಗಳಿಕೆಯೊಂದೇ ವೈದ್ಯಕೀಯ ಜೀವನದ ಉದ್ದೇಶವಾಗದೇ ಆರೋಗ್ಯ ಸಮಸ್ಯೆಯಿಂದ ಬಳಲುವವರಿಗೆ ಉತ್ತಮ ಸೇವೆ ನೀಡುವುದಕ್ಕೆ ಆದ್ಯತೆ ನೀಡಬೇಕು. ವೈದ್ಯಕೀಯ ಕ್ಷೇತ್ರದ ಕೌಶಲ್ಯ, ತಂತ್ರಜ್ಞಾನ ಕಲಿತು ಉತ್ತಮ ಸೇವೆ ನೀಡಬೇಕು ಎಂದು ಸಲಹೆ ನೀಡಿದರು.

ಇನ್ನು ಘಟಿಕೋತ್ಸವ ಭಾಷಣ ಮಾಡಿದ ಮಂಗಳೂರಿನ ಎನಪೋಯಾ ಡೀಮ್ಡ ವಿಶ್ವವಿದ್ಯಾಲಯದ ಕುಲಪತಿ ಡಾ|ಎಂ.ವಿಜಯಕುಮಾರ್ ಮಾತನಾಡಿ, ದೇಶದಲ್ಲಿ ಪ್ರತಿವರ್ಷ 1.30 ಲಕ್ಷ ನರ್ಸಿಂಗ್, 90 ಸಾವಿರ ಎಂಬಿಬಿಎಸ್, 30 ಸಾವಿರ ಬಿಡಿಎಸ್ ಪದವೀಧರು ಹೊರ ಬರುತ್ತಾರೆ. ಹೀಗಾಗಿ ಪದವಿ ಪಡೆದವರಿಗೆ ಕೆಲಸವೂ ಇಲ್ಲಿ ಖಾತ್ರಿಯಿಲ್ಲ. ಆದರೆ ಬದುಕಿನ ಯಶಸ್ಸಿನ ಹಾದಿಯಲ್ಲಿ ಇದೊಂದು ಮಹತ್ವದ ಮೈಲಿಗಲ್ಲು ಎಂಬುದಾಗಿ ಪಾಲ್ಗೊಂಡು, ಹೊಸ ಮಜಲಿಗೆ ಪದವೀಧರರು ತಮ್ಮನ್ನು ಸಜ್ಜುಗೊಳಿಸಿಕೊಳ್ಳಬೇಕು ಎಂದರು.

ಹೊಸತನ್ನು ಕಲಿಯುವುದು ಇಂದಿನ ಜಗತ್ತಿನಲ್ಲಿ ಅಗತ್ಯವಾಗಿದೆ. ಪ್ರತಿಯೊಬ್ಬರೂ ಜೀವನದಲ್ಲಿ ಯಶಸ್ಸು ಗಳಿಸಲು ಬಯಸುತ್ತಾರೆ. ಆದರೆ ಆ ಗುರಿ ತಲುಪಲು ಎಂತಹ ಸೂಕ್ತ ಯೋಜನೆ ಸಿದ್ಧಪಡಿಸಿದ್ದಾರೆ ಎನ್ನುವುದು ಮುಖ್ಯವಾಗಿರುತ್ತದೆ ಎಂದ ಅವರು, ಪಡೆದ ಪದವಿಯೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದರು.

ವೃತ್ತಿ ಬದುಕಿನ ಪ್ರತಿ ಹಂತದಲ್ಲೂ ಎದುರಾಗುವ ಸವಾಲು, ಪಡೆದ ಕೌಶಲ್ಯದ ಮೂಲಕ ಯಶಸ್ಸಿನ ದಾರಿಯಲ್ಲಿ ಸಾಗಲು ಸಾಧ್ಯ. ಬೇಕೋ ಅಥವಾ ಬೇಡವೋ ಒಬ್ಬರು ಮಾಡಿದ್ದನ್ನೇ ಹಲವರು ಅನುಸರಿಸಲು ಬಯಸುತ್ತಾರೆ. ಪಾಲಕರೂ ಅದನ್ನೇ ಉತ್ತೇಜಿಸುತ್ತಾರೆ. ಆದರೆ ಸಮಾಜಕ್ಕೆ ಏನು ಬೇಕು ಅಥವಾ ಯಾವುದು ಸರಿ ಎನ್ನುವುದು ಅರಿತು ಮಾಡುವುದೇ ಶ್ರೇಷ್ಠ. ಪದವಿ ಪಡೆಯುವದಷ್ಟೇ ಕೊನೆಯಲ್ಲ ಎಂದರು.

ಎಸ್‌ಡಿಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ|ನಿರಂಜನಕುಮಾರ ಮಾತನಾಡಿ, ವೃತ್ತಿಯಲ್ಲಿ ಸಾಧನೆ ಮಾಡುವ ವ್ಯಾಕುಲತೆ ಹೊಂದಿರಬೇಕು. ಇದು ಹೊಸ ಸಂಗತಿಗಳ ಕಲುಕೆಗೆ ಪ್ರೇರೇಪಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರು ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಬಿಡುಗಡೆಗೊಳಿಸಿದರು. ಎಂಬಿಬಿಎಸ್ ಪದವೀಧರೆ ಪ್ರಿಯಾಂಕಾ ತಮ್ಮ ಅನುಭವ ಹಂಚಿಕೊಂಡರು. ಕುಲಸಚಿವ ಡಾ|ಚಿದೇಂದ್ರ ಶೆಟ್ಟರ, ಡಾ|ಶ್ರೀನಿವಾಸ ಪೈ, ಡಾ|ಸತ್ಯಬೋಧ ಗುತ್ತಲ, ಡಾ|ರಘುನಾಥ ಶಾನಭಾಗ, ಡಾ|ಎಸ್.ಕೆ. ಜೋಶಿ ಇದ್ದರು.

ವೃತ್ತಿ ಕೌಶಲ್ಯದೊಂದಿಗೆ ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ. ಕಲಿಕೆ ನಿರಂತರ ಪ್ರಕ್ರಿಯೆ. ಪದವಿ ಪಡೆದರೆ ಕಲಿಕೆ ಮುಗಿಯುವುದಿಲ್ಲ. ವೈದ್ಯಕೀಯ ಕ್ಷೇತ್ರದಲ್ಲಿನ ಹೊಸ ಸಂಶೋಧನೆ, ನೂತನ ತಂತ್ರಜ್ಞಾನ ಅಳವಡಿಸಿಕೊಂಡು ವೃತ್ತಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು.
-ಡಾ|ಎಂ.ವಿಜಯಕುಮಾರ, ಕುಲಪತಿ ಎನಪೋಯಾ ಡೀಮ್ಡ ವಿಶ್ವವಿದ್ಯಾಲಯ, ಮಂಗಳೂರು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.