ಮತದಾರರ ಮಾಹಿತಿ ಕನ್ನ ವಿವಾದದಲ್ಲಿ ಗುಳಿಗ-ಪಂಜುರ್ಲಿ ಎಳೆ ತಂದ ಸಿದ್ದರಾಮಯ್ಯ
Team Udayavani, Nov 18, 2022, 4:33 PM IST
ಬೆಂಗಳೂರು: ಮತದಾರರ ಪಟ್ಟಿ ವಿವಾದಕ್ಕೆ ಸಂಬಂಧಪಟ್ಟ ಟ್ವೀಟ್ ನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂತಾರ ಚಿತ್ರದ ಗುಳಿಗ – ಪಂಜುರ್ಲಿಯನ್ನು ಎಳೆದು ತಂದಿರುವುದು ಹೊಸ ವಿವಾದ ಹುಟ್ಟು ಹಾಕುವ ಸಾಧ್ಯತೆಯಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ” ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು.” ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರನ್ನು ಉದ್ದೇಶಿಸಿ ಕುಹಕವಾಡಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಆದರೆ ಟೀಕೆಯ ಬರದಲ್ಲಿ ತುಳುನಾಡಿನ ಗುಳಿಗ- ಪಂಜುರ್ಲಿ ದೈವಗಳನ್ನು ವಿನಾ ಕಾರಣ ಎಳೆದು ತಂದಿದ್ದಾರೆ ಎಂಬ ಮಾತು ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…
ಕೋವಿಡ್ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ
MUST WATCH
ಹೊಸ ಸೇರ್ಪಡೆ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್