ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ
Team Udayavani, Mar 30, 2023, 6:47 PM IST
ಚಿಕ್ಕಮಗಳೂರು : ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಬರುತ್ತಿದ್ದು, ಇದೀಗ ಬಂಧನ ಭೀತಿ ಎದುರಾಗಿದೆ. ಚೆಕ್ ಬೌನ್ಸ್ ಕೇಸಲ್ಲಿ ಸಂಕಷ್ಟ ಎದುರಾಗಿದ್ದು ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಎಂ.ಪಿ. ಕುಮಾರಸ್ವಾಮಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಅವರಿಗೆ ನೋಟಿಸ್ ನೀಡಲಾಗಿದೆ.
30 ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು, 1 ಕೋಟಿ 38 ಲಕ್ಷದ 65 ಸಾವಿರದ 8 ಚೆಕ್ ಬೌನ್ಸ್ ಕೇಸ್ ನಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿ ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿತ್ತು. 30 ದಿನದ ಒಳಗೆ ಹಣ ಮರು ಪಾವತಿ ಮಾಡುವಂತೆ ಕೋರ್ಟ್ ಹೇಳಿತ್ತು.
ಕುಮಾರಸ್ವಾಮಿ ಅವರ ವಿರುದ್ಧ ಚಿಕ್ಕಮಗಳೂರು ಮೂಲದ ಹೂವಪ್ಪಗೌಡ 8 ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ದೂರು ನೀಡಿದ್ದರು.ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್ ನಲ್ಲಿ ಮೂರು ವರ್ಷದಿಂದ ಪ್ರಕರಣ ನಡೆಯುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ