ಸಂಚಾರ ವಾಹನ ಗಣತಿಗೂ ಡಿಜಿಟಲ್‌ ಸ್ಪರ್ಶ


Team Udayavani, Feb 24, 2021, 5:40 AM IST

ಸಂಚಾರ ವಾಹನ ಗಣತಿಗೂ ಡಿಜಿಟಲ್‌ ಸ್ಪರ್ಶ

ಕಾರ್ಕಳ: ಪಾರದರ್ಶಕ ಮತ್ತು ಆಧಾರ ಸಹಿತ ಮಾಹಿತಿಗಳು ಲಭ್ಯವಾಗಬೇಕೆಂಬ ಕಾರಣದಿಂದ ವಾಹನ ಗಣತಿಗೂ ಡಿಜಿಟಲ್‌ ಸ್ಪರ್ಶ ನೀಡಲಾಗಿದೆ. ವಾಹನ ಗಣತಿಗೆ ಸ್ವಯಂಚಾಲಿತ ತಂತ್ರಾಂಶ ವ್ಯವಸ್ಥೆ ಜಾರಿಗೆ ಬಂದಿದೆ.

ರಾಜ್ಯಾದ್ಯಂತ ವಾಹನ ಗಣತಿ ಫೆ. 23ರಿಂದ ಆರಂಭಗೊಂಡಿದ್ದು, ಎರಡು ದಿನಗಳ ಕಾಲ ನಡೆಯಲಿದೆ. ಇದೇ ಮೊದಲ ಬಾರಿಗೆ ಮಾನವ ನಿರ್ಮಿತ ಗಣತಿ ವ್ಯವಸ್ಥೆಯನ್ನು ಕೈಬಿಟ್ಟ ಸರಕಾರ ಸಿಸಿ ಕೆಮರಾ ಅಳವಡಿಕೆ ಮೂಲಕ ವಾಹನ ಗಣತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದೆ.

ರಾಜ್ಯದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಿಂದ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

2021ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆ ಫೆ. 23ರಿಂದ 25ರ ವರೆಗೆ ಸತತ 2 ದಿನಗಳ ಕಾಲ ನಡೆಯುತ್ತಿದೆ. ಇದಕ್ಕಾಗಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ವಿವಿಧೆಡೆ ಅಳವಡಿಕೆ
ಗಣತಿ ಕೇಂದ್ರಗಳಲ್ಲಿ ಸಿಸಿ ಕೆಮರಾ ಅಳವಡಿಸಲು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಈ ಮೊದಲೇ ಟೆಂಡರ್‌ ಕರೆದು ಸಿಸಿ ಕೆಮರಾ ಅಳವಡಿಸುವ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಪಡೆದುಕೊಂಡ ಕಂಪೆನಿಗಳು ರಾ.ಹೆ. ಜಿ.ಮು. ರಸ್ತೆ, ರೈಲ್ವೇ ಗೇಟ್‌ ಬಳಿಯ ಕೇಂದ್ರಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಿದ್ದು ಸಂಚಾರದಲ್ಲಿರುವ ವಾಹನಗಳ ಕುರಿತು ಸಂಪೂರ್ಣ ಮಾಹಿತಿ ಅದರಲ್ಲಿ ಸಂಗ್ರಹವಾಗುತ್ತಿದೆ. ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ಗಳ ಉಸ್ತುವಾರಿಯಲ್ಲಿ ಗಣತಿ ನಡೆಯುತ್ತಿದೆ.

ಹಗಲು/ರಾತ್ರಿ ಪಾಳಿಯಲ್ಲಿ ಕರ್ತವ್ಯ
ಈ ಹಿಂದೆ ಮಾನವ ನಿರ್ಮಿತ ಕೇಂದ್ರಗಳನ್ನು ತೆರೆದು ವಾಹನ ಗಣತಿ ನಡೆಸಲಾಗುತ್ತಿತ್ತು. ರಸ್ತೆ ಬದಿ ಕೇಂದ್ರಗಳನ್ನು ತೆರೆದು ಅಲ್ಲಿ ಸಿಬಂದಿಯನ್ನು ನೇಮಕಗೊಳಿಸಲಾಗುತ್ತಿತ್ತು. ಏಳು ದಿನಗಳ ವರೆಗೆ ಗಣತಿ ಲೆಕ್ಕ ಹಾಕಲಾಗುತ್ತಿತ್ತು. ಕೇಂದ್ರದ ಸಿಬಂದಿ ನಮೂನೆಯಲ್ಲಿ ಸೂಚಿಸಿದಂತೆ ಮಾಹಿತಿಗಳನ್ನು ದಾಖಲಿಸುತ್ತಿದ್ದರು. ವಾಹನಗಳ ಸಂಖ್ಯೆ ಇತ್ಯಾದಿ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಹಗಲು/ರಾತ್ರಿ ಪಾಳಿಯಲ್ಲಿ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಿಸಿ ಕೆಮರಾ ಅಳವಡಿಕೆಯಿಂದ ವೀಡಿಯೋ ದಾಖಲಾಗುವುದರಿಂದ ಆಧಾರ ಸಹಿತ ಮಾಹಿತಿ ಸಿಗುತ್ತದೆ. ಕಾಗದ ರಹಿತವಾಗಿಯೂ ಇರುತ್ತದೆ. ವಾರಗಳ ಕಾಲ ರಸ್ತೆ ಬದಿ ಸಿಬಂದಿ ಟೆಂಟ್‌ ಹೂಡುವುದು ತಪ್ಪುತ್ತದೆ. ಎಲ್ಲ ದೃಷ್ಟಿಯಿಂದಲೂ ಈ ವ್ಯವಸ್ಥೆ ಅನುಕೂಲ ಎನ್ನುತ್ತಾರೆ ಅಧಿಕಾರಿಗಳು.

ರಾಜ್ಯದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆ ನಡೆಸಲಾಗುತ್ತದೆ.

ಇನ್ನು ಮಾಹಿತಿ ನಿಖರ; ಪಾರದರ್ಶಕ
ಮಾನವ ನಿರ್ಮಿತ ಗಣತಿ ವೇಳೆ ಮಾಹಿತಿಗಳು ವ್ಯತ್ಯಾಸವಾಗುವ ಸಂಭವ ಹೆಚ್ಚಾಗುತ್ತಿತ್ತು. ವಾಹನಗಳು ನಿಧಾನಗತಿಯಲ್ಲಿ ಸಾಗುವಂತೆ ಸೂಚನ ಫ‌ಲಕ ಹಾಕಿ ನಿರ್ದೇಶನ ನೀಡುತ್ತಿದ್ದರೂ ವಾಹನಗಳು ವೇಗವಾಗಿ, ಗುಂಪಾಗಿ ಚಲಿಸುವ ವೇಳೆ ಸರಿಯಾಗಿ ಮಾಹಿತಿಗಳು ದಾಖಲಾಗುತ್ತಿರಲಿಲ್ಲ. ಇದರಿಂದ ಗಣತಿ ವೇಳೆ ಪಾರದರ್ಶಕತೆ ಕಾಪಾಡಲು ಕಷ್ಟವಾಗುತ್ತಿತ್ತು. ಕೇಂದ್ರದ ಸಿಬಂದಿ ದೃಷ್ಟಿ ಸ್ವಲ್ಪ ಅತ್ತಿತ್ತಾದರೂ ವಾಹನಗಳು ಗಣತಿಗೆ ಸಿಗದೆ ಕೈ ಬಿಟ್ಟು ಹೋಗುವ ಸಾಧ್ಯತೆಗಳೇ ಹೆಚ್ಚಿದ್ದವು. ಇದರಿಂದ ಸರಕಾರಕ್ಕೆ ತಪ್ಪು ಮಾಹಿತಿ ಹೋಗುತ್ತಿತ್ತು. ಇದನ್ನು ತಪ್ಪಿಸಲು ವಾಹನ ಗಣತಿಗೆ ಆಧುನಿಕ ಸ್ಪರ್ಶ ನೀಡಲಾಗಿದೆ.

ಸ್ಪಷ್ಟ ಮಾಹಿತಿ ಲಭ್ಯ
ಸ್ವಯಂ ಚಾಲಿತವಾಗಿ ಹಗಲು ರಾತ್ರಿ ಕಾರ್ಯನಿರ್ವಹಿಸುವುದರಿಂದ ಸ್ಪಷ್ಟ ಮಾಹಿತಿ ಸಿಗುತ್ತಿರಲಿಲ್ಲ. ಈ ಕಾರಣಕ್ಕೆ ಸಿಸಿ ಕೆಮರಾ ಬಳಸಿಕೊಳ್ಳಲಾಗಿದೆ. ಇದರಲ್ಲಿ ವೀಡಿಯೋ ದಾಖಲು ಆಗುವುದರಿಂದ ಯಾರೂ ಬೇಕಾದರೂ ಪರಿಶೀಲಿಸಬಹುದು. ಪಾರದರ್ಶಕತೆಗೆ ಈ ವ್ಯವಸ್ಥೆ ಅಳವಡಿಕೆಯಾಗಿದೆ.
– ಎಸ್‌.ಕೆ. ಅಶೋಕ, ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಪಿಡಬ್ಲ್ಯುಡಿ ಇಲಾಖೆ

ಸಮೀಕ್ಷೆಯ ಉದ್ದೇಶ ಹಲವು
ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ಸರಕು ಸಾಗಾಟ, ವಾಹನ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿವೆೆ. ವಾಹನ ಪ್ರಮಾಣ ಏರಿಕೆಗೆ ತಕ್ಕಂತೆ ಹಾಲಿ ರಸ್ತೆಯ ಮೇಲ್ಮೆ„ ಅನ್ನು ಅಭಿವೃದ್ಧಿ, ವಿಸ್ತರಣೆ, ಮೇಲ್ದರ್ಜೆಗೇರಿಸುವುದು, ಸುಗಮ ಸಂಚಾರ, ಸುರಕ್ಷತೆ, ಅಪಘಾತ ನಿವಾರಣೆ, ಅಭಿವೃದ್ಧಿ ಕಾಮಗಾರಿಗಳ ಅಂಕಿಅಂಶ ಮಾಹಿತಿ ಕಲೆ ಹಾಕುವುದು.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.